AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ

ಪುನೀತ್​ ಅಂತಿಮ ದರ್ಶನ ಪಡೆದು ಬಂದಿದ್ದಾರೆ ಕಿಚ್ಚ. ಇದು ಅವರನ್ನು ತುಂಬಾನೇ ಘಾಸಿಗೊಳಿಸಿದೆ. ಈ ಕುರಿತು ಅವರು ಭಾವುಕ ಸಾಲುಗಳನ್ನು ಬರೆದು, ನುಡಿ ನಮನ ಸಲ್ಲಿಸಿದ್ದಾರೆ.

‘ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’; ಪುನೀತ್​ ರಾಜ್​ಕುಮಾರ್​ಗೆ ಸುದೀಪ್​ ಭಾವುಕ ನುಡಿ ನಮನ
ಸುದೀಪ್​-ಪುನೀತ್​
TV9 Web
| Updated By: ರಾಜೇಶ್ ದುಗ್ಗುಮನೆ|

Updated on:Oct 30, 2021 | 3:08 PM

Share

ಪುನೀತ್​ ರಾಜ್​ಕುಮಾರ್​ ಮೃತಪಟ್ಟಿದ್ದು ಇಡೀ ಭಾರತ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಕೋಟ್ಯಂತರ ಅಭಿಮಾನಿಗಳನ್ನು ಅವರು ಅಗಲಿದ್ದಾರೆ. ಕಿಚ್ಚ ಸುದೀಪ್​ ಕೂಡ ಈ ಬಗ್ಗೆ ಕಂಬನಿ ಮಿಡಿದಿದ್ದಾರೆ. ಪುನೀತ್​ ಅಂತಿಮ ದರ್ಶನ ಪಡೆದು ಬಂದಿದ್ದಾರೆ ಕಿಚ್ಚ. ಇದು ಅವರನ್ನು ತುಂಬಾನೇ ಘಾಸಿಗೊಳಿಸಿದೆ. ಈ ಕುರಿತು ಅವರು ಭಾವುಕ ಸಾಲುಗಳನ್ನು ಬರೆದು, ನುಡಿ ನಮನ ಸಲ್ಲಿಸಿದ್ದಾರೆ.

‘ಚಿತ್ರೋದ್ಯಮ ಇಂದು ಅಪೂರ್ಣವಾಗಿ ಕಾಣುತ್ತಿದೆ. ಸಮಯ ಕ್ರೂರಿ. ನಿನ್ನೆ ಪ್ರಕೃತಿಯೂ ದುಃಖಿಸಿ ಅಳುತ್ತಿರುವಂತೆ ಕಂಡಿತು. ಕಪ್ಪು ಮೋಡಗಳು ತುಂಬಿತ್ತು. ನಿಜಕ್ಕೂ ಅದು ಬೇಸರದ ದಿನ. ನಾನು ಬೆಂಗಳೂರಿಗೆ ಬಂದಿಳಿದು ಅವರ ಶವವನ್ನು ಇರಿಸಿದ್ದ ಕಡೆಗೆ ಹೊರಟೆ. ಇನ್ನೂ ಒಪ್ಪಿಕೊಳ್ಳದ ಸತ್ಯಕ್ಕೆ ಹತ್ತಿರವಾಗುತ್ತಿದ್ದಂತೆ ನನ್ನ ಉಸಿರು ಭಾರವಾಗತೊಡಗಿತು’ ಎಂದು ಸುದೀಪ್​ ಪತ್ರ ಆರಂಭಿಸಿದ್ದಾರೆ.

‘ಪುನೀತ್​ ಮಲಗಿದ್ದನ್ನು ನೋಡಿದಾಗ ಎಲ್ಲರೂ ಮನಸ್ಸಿನ ಮೇಲೆ ಪರ್ವತ ಹೊತ್ತು ನಿಂತಿದ್ದಾರೆ ಎನಿಸುತ್ತಿತ್ತು. ಹೇಗೆ, ಏಕೆ ಎನ್ನುವ ಪ್ರಶ್ನೆಗಳು ಮೂಡಲು ಆರಂಭವಾದವು.  ಮೊದಲ ಬಾರಿಗೆ ನನಗೆ ಸರಿಯಾಗಿ ಉಸಿರಾಡಲು ಆಗಲಿಲ್ಲ. ಅವರು ನನ್ನ ಸಹೋದ್ಯೋಗಿ, ಗೆಳೆಯ. ಅವರು ಇರಬಾರದ ಜಾಗದಲ್ಲಿ ಇದ್ದರು. ನನಗೆ ಅಲ್ಲಿ ಹೆಚ್ಚು ಹೊತ್ತು ನಿಲ್ಲಲು ಸಾಧ್ಯವಾಗಲೇ ಇಲ್ಲ. ಆ ದೃಶ್ಯ ಇನ್ನೂ ನನ್ನನ್ನು ಕಾಡುತ್ತಿದೆ’ ಎಂದಿದ್ದಾರೆ ಸುದೀಪ್​.

‘ಶಿವಣ್ಣನನ್ನು ಆ ಸ್ಥಿತಿಯಲ್ಲಿ ನೋಡಿ ನನಗೆ ಮತ್ತಷ್ಟು ನೋವಾಯಿತು. ‘ಅವನು (ಪುನೀತ್) ನನಗಿಂತ 13 ವರ್ಷ ಚಿಕ್ಕವನು. ನಾನು ಅವನನ್ನು ಈ ತೋಳುಗಳಲ್ಲಿ ಹಿಡಿದಿದ್ದೇನೆ’ ಎಂದು ಶಿವಣ್ಣ ಹೇಳಿದರು. ಪ್ರತಿಯೊಬ್ಬರೂ ಆಘಾತಕ್ಕೊಳಗಾಗಿದ್ದಾರೆ. ಇದನ್ನು ಎಲ್ಲರೂ ಒಪ್ಪಿಕೊಳ್ಳಲು ಬಹಳ ಸಮಯ ಹಿಡಿಯುತ್ತದೆ.  ಅದನ್ನು ನಾವು ಒಪ್ಪಿಕೊಂಡರೂ ಅವರು ಬಿಟ್ಟು ಹೋದ ಸ್ಥಾನ ಖಾಲಿಯಾಗೇ ಇರುತ್ತದೆ. ಅದನ್ನು ಯಾರೂ ತುಂಬಲು ಸಾಧ್ಯವಿಲ್ಲ. ಅದು ಓರ್ವ ಮಹಾನ್​ ವ್ಯಕ್ತಿಗೆ ಸೇರಿದ ಜಾಗ, ಪುನೀತ್​ ನಮ್ಮ ಪ್ರೀತಿಯ ‘ಅಪ್ಪು’ ಎಂಬ ಒಬ್ಬ ಮಹಾನ್ ಮಾನವನಿಗೆ ಸೇರಿದ ಸ್ಥಳ. Go in Peace, REST IN POWER my friend’ ಎಂದು ಸುದೀಪ್​ ಭಾವುಕವಾಗಿ ಸಾಲುಗಳನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನ್ಯೂಯಾರ್ಕ್‌ನಿಂದ ದೆಹಲಿಗೆ ಆಗಮಿಸಿದ ಪುನೀತ್‌ ರಾಜ್‌ಕುಮಾರ್ ಪುತ್ರಿ; ಸಂಜೆ ವೇಳೆಗೆ ಬೆಂಗಳೂರಿಗೆ

‘ಪುನೀತ್ ಜಿಮ್​ಗೆ ತೆರಳಿರಲಿಲ್ಲ’; ಮೃತಪಡುವುದಕ್ಕೂ ಮೊದಲು ನಡೆದಿದ್ದೇನು? ಕಣ್ಣೀರಿಡುತ್ತಲೇ ವಿವರಿಸಿದ ಅಪ್ಪು ಅಂಗರಕ್ಷಕ

Published On - 3:07 pm, Sat, 30 October 21

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ