AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ನನ್ನ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಬೇಡಿ’: ಖಡಕ್​ ಎಚ್ಚರಿಗೆ ನೀಡಿದ ಕಿಚ್ಚ ಸುದೀಪ್

ಸುದೀಪ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ಯಾರನ್ನು ಉದ್ದೇಶಿಸಿ ಅವರು ಈ ರೀತಿ ಪೋಸ್ಟ್​ ಮಾಡಿರಬಹುದು ಎಂಬ ಪ್ರಶ್ನೆ ಮೂಡಿದೆ.

Kichcha Sudeep: ‘ನನ್ನ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಬೇಡಿ’: ಖಡಕ್​ ಎಚ್ಚರಿಗೆ ನೀಡಿದ ಕಿಚ್ಚ ಸುದೀಪ್
ಸುದೀಪ್​
ಮದನ್​ ಕುಮಾರ್​
|

Updated on: Jul 04, 2023 | 6:09 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಯಾವಾಗಲೂ ವಿವಾದಗಳಿಂದ ದೂರ ಇರಲು ಬಯಸುತ್ತಾರೆ. ಆದರೆ ಕೆಲವೊಮ್ಮೆ ಅನಗತ್ಯವಾಗಿ ಕಿರಿಕ್​ಗಳು ಎದುರಾಗಿಬಿಡುತ್ತವೆ. ಇನ್ನು, ಸೋಶಿಯಲ್​ ಮೀಡಿಯಾದಲ್ಲೂ ಅವರು ಅನವಶ್ಯಕವಾಗಿ ಯಾರ ಬಗ್ಗೆಯೂ ಕಮೆಂಟ್​ ಮಾಡುವುದಿಲ್ಲ. ಆದರೆ ಈ ನಡುವೆ ಅವರು ಮಾಡಿರುವ ಒಂದು ಪೋಸ್ಟ್​ ಗಮನ ಸೆಳೆಯುತ್ತಿದೆ. ತಮ್ಮ ಒಳ್ಳೆಯತನವನ್ನು ದುರುಪಯೋಗ ಮಾಡಿಕೊಳ್ಳಬೇಕು ಎಂದುಕೊಂಡವರಿಗೆ ಕಿಚ್ಚ ಸುದೀಪ್​ (Sudeep) ಅವರು ಖಡಕ್​ ಆಗಿ ಎಚ್ಚರಿಕೆ ನೀಡಿದಂತಿದೆ. ಆ ರೀತಿಯಲ್ಲಿ ಅವರು ಟ್ವೀಟ್ (Sudeep Tweet)​ ಮಾಡಿದ್ದಾರೆ. ಇದು ಯಾರನ್ನು ಉದ್ದೇಶಿಸಿ ಮಾಡಿದ ಟ್ವೀಟ್​ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದರೆ ಅದರಲ್ಲಿನ ಸಾಲುಗಳು ಖಡಕ್​ ಆಗಿವೆ.

‘ಈ ಸಾಲನ್ನು ಓದಿ. ಇದು ತುಂಬ ಚೆನ್ನಾಗಿದೆ’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ. ‘ಇದು ತಿಳಿದಿರಲಿ: ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ’ ಎಂಬ ಸಾಲನ್ನು ಸುದೀಪ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ರಾಜಿಯಾಗದ ಒಳ್ಳೆಯತನ’ ಎಂದು ಸುದೀಪ್​ ಅವರು ಹ್ಯಾಶ್​ ಟ್ಯಾಗ್​ ಬಳಸಿದ್ದಾರೆ. ಅದರ ಜೊತೆ #k46 ಹ್ಯಾಶ್​ ಟ್ಯಾಗ್​ ಕೂಡ ಇದೆ. ಹಾಗಾಗಿ ಇದು ಸಿನಿಮಾಗೆ ಸಂಬಂಧಿಸಿದಂತೆ ಹೇಳಿದ್ದೋ ಅಥವಾ ಯಾವುದಾದರೂ ವ್ಯಕ್ತಿಗೆ ಸಂಬಂಧಿಸಿ ಹೇಳಿದ್ದೋ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ತಮ್ಮ 46ನೇ ಸಿನಿಮಾದ ಟೀಸರ್​ ಬಿಡುಗಡೆಯಾದ ಬೆನ್ನಲ್ಲೇ ಅವರು ಈ ರೀತಿ ಟ್ವೀಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ

ಇತ್ತೀಚೆಗೆ ನಿರ್ಮಾಪಕ ಎನ್​. ಕುಮಾರ್ ಅವರು ಸುದೀಪ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದೀಪ್​ ಅವರು ಅಡ್ವಾನ್ಸ್​ ಪಡೆದುಕೊಂಡು ಅನೇಕ ವರ್ಷಗಳು ಕಳೆದಿದ್ದರೂ ಕಾಲ್​ಶೀಟ್​ ನೀಡುತ್ತಿಲ್ಲ ಎಂದು ಅವರು ದೂರು ನೀಡಿದ್ದಾರೆ. ಇದಕ್ಕೆ ಸುದೀಪ್​ ಅವರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಟ್ವಿಟರ್​ನಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ. ಸಿನಿಮಾ ವಿಚಾರಕ್ಕೆ ಬರೋದಾದರೆ, ಸುದೀಪ್​ ನಟನೆಯ 46ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರವನ್ನು ‘ವಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಕಲೈಪುಲಿ ಎಸ್​. ಧಾನು ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್​ ಕಾರ್ತಿಕೇಯ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ