Kichcha Sudeep: ‘ನನ್ನ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಬೇಡಿ’: ಖಡಕ್​ ಎಚ್ಚರಿಗೆ ನೀಡಿದ ಕಿಚ್ಚ ಸುದೀಪ್

|

Updated on: Jul 04, 2023 | 6:09 PM

ಸುದೀಪ್​ ಮಾಡಿರುವ ಟ್ವೀಟ್​ ವೈರಲ್​ ಆಗಿದೆ. ಯಾರನ್ನು ಉದ್ದೇಶಿಸಿ ಅವರು ಈ ರೀತಿ ಪೋಸ್ಟ್​ ಮಾಡಿರಬಹುದು ಎಂಬ ಪ್ರಶ್ನೆ ಮೂಡಿದೆ.

Kichcha Sudeep: ‘ನನ್ನ ಒಳ್ಳೆಯತನ ದುರುಪಯೋಗ ಮಾಡಿಕೊಳ್ಳಬೇಡಿ’: ಖಡಕ್​ ಎಚ್ಚರಿಗೆ ನೀಡಿದ ಕಿಚ್ಚ ಸುದೀಪ್
ಸುದೀಪ್​
Follow us on

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಯಾವಾಗಲೂ ವಿವಾದಗಳಿಂದ ದೂರ ಇರಲು ಬಯಸುತ್ತಾರೆ. ಆದರೆ ಕೆಲವೊಮ್ಮೆ ಅನಗತ್ಯವಾಗಿ ಕಿರಿಕ್​ಗಳು ಎದುರಾಗಿಬಿಡುತ್ತವೆ. ಇನ್ನು, ಸೋಶಿಯಲ್​ ಮೀಡಿಯಾದಲ್ಲೂ ಅವರು ಅನವಶ್ಯಕವಾಗಿ ಯಾರ ಬಗ್ಗೆಯೂ ಕಮೆಂಟ್​ ಮಾಡುವುದಿಲ್ಲ. ಆದರೆ ಈ ನಡುವೆ ಅವರು ಮಾಡಿರುವ ಒಂದು ಪೋಸ್ಟ್​ ಗಮನ ಸೆಳೆಯುತ್ತಿದೆ. ತಮ್ಮ ಒಳ್ಳೆಯತನವನ್ನು ದುರುಪಯೋಗ ಮಾಡಿಕೊಳ್ಳಬೇಕು ಎಂದುಕೊಂಡವರಿಗೆ ಕಿಚ್ಚ ಸುದೀಪ್​ (Sudeep) ಅವರು ಖಡಕ್​ ಆಗಿ ಎಚ್ಚರಿಕೆ ನೀಡಿದಂತಿದೆ. ಆ ರೀತಿಯಲ್ಲಿ ಅವರು ಟ್ವೀಟ್ (Sudeep Tweet)​ ಮಾಡಿದ್ದಾರೆ. ಇದು ಯಾರನ್ನು ಉದ್ದೇಶಿಸಿ ಮಾಡಿದ ಟ್ವೀಟ್​ ಎಂಬುದು ಸದ್ಯಕ್ಕೆ ಸ್ಪಷ್ಟವಾಗಿಲ್ಲ. ಆದರೆ ಅದರಲ್ಲಿನ ಸಾಲುಗಳು ಖಡಕ್​ ಆಗಿವೆ.

‘ಈ ಸಾಲನ್ನು ಓದಿ. ಇದು ತುಂಬ ಚೆನ್ನಾಗಿದೆ’ ಎಂಬ ಕ್ಯಾಪ್ಷನ್​ ಜೊತೆಯಲ್ಲಿ ಸುದೀಪ್​ ಅವರು ಟ್ವೀಟ್​ ಮಾಡಿದ್ದಾರೆ. ‘ಇದು ತಿಳಿದಿರಲಿ: ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ’ ಎಂಬ ಸಾಲನ್ನು ಸುದೀಪ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

‘ರಾಜಿಯಾಗದ ಒಳ್ಳೆಯತನ’ ಎಂದು ಸುದೀಪ್​ ಅವರು ಹ್ಯಾಶ್​ ಟ್ಯಾಗ್​ ಬಳಸಿದ್ದಾರೆ. ಅದರ ಜೊತೆ #k46 ಹ್ಯಾಶ್​ ಟ್ಯಾಗ್​ ಕೂಡ ಇದೆ. ಹಾಗಾಗಿ ಇದು ಸಿನಿಮಾಗೆ ಸಂಬಂಧಿಸಿದಂತೆ ಹೇಳಿದ್ದೋ ಅಥವಾ ಯಾವುದಾದರೂ ವ್ಯಕ್ತಿಗೆ ಸಂಬಂಧಿಸಿ ಹೇಳಿದ್ದೋ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ತಮ್ಮ 46ನೇ ಸಿನಿಮಾದ ಟೀಸರ್​ ಬಿಡುಗಡೆಯಾದ ಬೆನ್ನಲ್ಲೇ ಅವರು ಈ ರೀತಿ ಟ್ವೀಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kiccha 46 Teaser: ‘ನಾನು ಮನುಷ್ಯ ಅಲ್ಲ, ರಾಕ್ಷಸ’: ‘ಕಿಚ್ಚ 46’ ಟೀಸರ್​ನಲ್ಲಿ ಸುದೀಪ್​ ಆರ್ಭಟ

ಇತ್ತೀಚೆಗೆ ನಿರ್ಮಾಪಕ ಎನ್​. ಕುಮಾರ್ ಅವರು ಸುದೀಪ್​ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದೀಪ್​ ಅವರು ಅಡ್ವಾನ್ಸ್​ ಪಡೆದುಕೊಂಡು ಅನೇಕ ವರ್ಷಗಳು ಕಳೆದಿದ್ದರೂ ಕಾಲ್​ಶೀಟ್​ ನೀಡುತ್ತಿಲ್ಲ ಎಂದು ಅವರು ದೂರು ನೀಡಿದ್ದಾರೆ. ಇದಕ್ಕೆ ಸುದೀಪ್​ ಅವರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಟ್ವಿಟರ್​ನಲ್ಲಿ ಅವರು ಈ ರೀತಿ ಪೋಸ್ಟ್​ ಮಾಡಿರುವುದು ಅಚ್ಚರಿ ಮೂಡಿಸಿದೆ. ಸಿನಿಮಾ ವಿಚಾರಕ್ಕೆ ಬರೋದಾದರೆ, ಸುದೀಪ್​ ನಟನೆಯ 46ನೇ ಸಿನಿಮಾ ಸೆಟ್ಟೇರಿದೆ. ಈ ಚಿತ್ರವನ್ನು ‘ವಿ ಕ್ರಿಯೇಷನ್ಸ್​’ ಬ್ಯಾನರ್​ ಮೂಲಕ ಕಲೈಪುಲಿ ಎಸ್​. ಧಾನು ಅವರು ನಿರ್ಮಾಣ ಮಾಡುತ್ತಿದ್ದಾರೆ. ವಿಜಯ್​ ಕಾರ್ತಿಕೇಯ ನಿರ್ದೇಶನ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.