AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Puneeth Rajkumar: ಪುನೀತ್​ಗೆ ಸುದೀಪ್​ ನುಡಿ ನಮನ; ಅಂತ್ಯಕ್ರಿಯೆ ವೇಳೆ ಮಕ್ಕಳ ಬಗ್ಗೆ ಯೋಚಿಸಿ ಕಣ್ಣೀರಿಟ್ಟ ಕಿಚ್ಚ

Kichcha Sudeep: ‘ಪುನೀತ್​ ರಾಜ್​ಕುಮಾರ್​ ಅಂತ್ಯಕ್ರಿಯೆ ವೇಳೆ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಅಂತ ಚಿಂತೆ ಆಯಿತು. ಕುಟುಂಬದ ಹಿರಿಯರಿಗೆ ಹೇಗೆ ಆಗಿರಬಹುದು? ಇದನ್ನೆಲ್ಲ ಯೋಚಿಸುತ್ತ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

Puneeth Rajkumar: ಪುನೀತ್​ಗೆ ಸುದೀಪ್​ ನುಡಿ ನಮನ; ಅಂತ್ಯಕ್ರಿಯೆ ವೇಳೆ ಮಕ್ಕಳ ಬಗ್ಗೆ ಯೋಚಿಸಿ ಕಣ್ಣೀರಿಟ್ಟ ಕಿಚ್ಚ
ಕಿಚ್ಚ ಸುದೀಪ್​​​, ಪುನೀತ್​ ರಾಜ್​ಕುಮಾರ್​
TV9 Web
| Edited By: |

Updated on:Oct 31, 2021 | 11:55 AM

Share

ಪುನೀತ್​ ಇನ್ನಿಲ್ಲ ಎಂಬ ಮಾತನ್ನು ನಂಬೋಕೆ ಸಾಧ್ಯವಾಗುತ್ತಿಲ್ಲ. ಆದರೂ ಕೂಡ ಅದನ್ನು ಒಪ್ಪಿಕೊಂಡು ಬದುಕು ಸಾಗಿಸಲೇಬೇಕಿದೆ. ಅವರನ್ನು ಕಳೆದುಕೊಂಡ ಸ್ನೇಹಿತರು, ಸೆಲೆಬ್ರಿಟಿಗಳು ಪರಿಪರಿಯಾಗಿ ನೋವು ಅನುಭವಿಸುತ್ತಿದ್ದಾರೆ. ಬಾಲ್ಯದಿಂದಲೂ ಪುನೀತ್​ ಜೊತೆ ಗೆಳೆತನ ಹೊಂದಿದ್ದ ಕಿಚ್ಚ ಸುದೀಪ್​ ಅವರು ಈ ಘಟನೆಯಿಂದ ವಿಚಲಿತರಾಗಿದ್ದಾರೆ. ಅಗಲಿದ ಗೆಳೆಯನ ಬಗ್ಗೆ ಅವರು ಸರಣಿ ಟ್ವೀಟ್​ ಮಾಡುತ್ತಿದ್ದಾರೆ. ಭಾನುವಾರ (ಅ.31) ಮುಂಜಾನೆ ಕಂಠೀರವ ಸ್ಟುಡಿಯೋ ಆವರಣದಲ್ಲಿ ಪುನೀತ್​ ಅಂತ್ಯಕ್ರಿಯೆ ನೆರವೇರಿದೆ. ಇದರಲ್ಲಿ ಭಾಗವಹಿಸಿ ಬಂದ ಬಳಿಕ ಸುದೀಪ್​ ಅವರು ಭಾವುಕವಾಗಿ ಕೆಲವು ಮಾತುಗಳನ್ನು ಹಂಚಿಕೊಂಡಿದ್ದಾರೆ.

‘ಎಲ್ಲವೂ ಮುಗಿದಿದೆ. ಸಹಜ ಸ್ಥಿತಿಯಲ್ಲಿ ಬರಲು ಇನ್ನೂ ಸ್ವಲ್ಪ ದಿನ ಹಿಡಿಯಲಿದೆ. ಇದು ಕೇವಲ ನಷ್ಟವಲ್ಲ. ಜನರು ಮತ್ತು ಚಿತ್ರರಂಗಕ್ಕೆ ಆಗಿರುವ ಸಡನ್​​ ಆಘಾತ. ಈ ದಿನ ಒಂದು ಸುಂದರ ಅಧ್ಯಾಯ ಕೊನೆ ಆಗಿದೆ. ಅಂತ್ಯಕ್ರಿಯೆ ವೇಳೆ ಕುಳಿತಿರುವಾಗ ಮಕ್ಕಳ ಪರಿಸ್ಥಿತಿ ಹೇಗಿರಬಹುದು ಅಂತ ಚಿಂತೆ ಆಯಿತು. ಕುಟುಂಬದ ಹಿರಿಯರಿಗೆ ಹೇಗೆ ಆಗಿರಬಹುದು? ಇದನ್ನೆಲ್ಲ ಯೋಚಿಸುತ್ತ ಪ್ರಜ್ಞೆ ತಪ್ಪಿದಂತಾಯಿತು’ ಎಂದು ಕಿಚ್ಚ ಟ್ವೀಟ್​ ಮಾಡಿದ್ದಾರೆ.

‘ಪುನೀತ್​ ಎಲ್ಲರ ಪ್ರೀತಿಪಾತ್ರ ವ್ಯಕ್ತಿ ಆಗಿದ್ದರು. ಇಂದು ತಂದೆ-ತಾಯಿ ಪಕ್ಕದಲ್ಲಿ ಅವರನ್ನು ಮಲಗಿಸಿದ ಬಳಿಕ ನಾನು ಅಲ್ಲಿಂದ ಹೊರಟೆ. ಆಗ ಮನದಲ್ಲಿ ಹೀಗೆ ಅನಿಸಿತು; ಪುನೀತ್​ ರಾಯಲ್​ ಆಗಿ ಹುಟ್ಟಿದರು, ರಾಯಲ್​ ಆಗಿ ಬೆಳೆದರು, ರಾಯಲ್​ ಆಗಿ ಬಾಳಿದರು, ರಾಯಲ್​ ಆಗಿಯೇ ಹೊರಟುಹೋದರು. ಈ ತಮ್ಮ ತಾರೆ ಈಗ ಆಕಾಶಕ್ಕೆ ಸೇರಿದೆ. ರಾತ್ರಿ ಆಗಸ ನೋಡಿದಾಗ ಬೇರೆಲ್ಲರಿಗಿಂತ ನೀವು ಹೆಚ್ಚು ಮಿನುಗುತ್ತೀರಿ ಎಂಬ ಭರವಸೆ ನನಗಿದೆ’ ಎಂದಿದ್ದಾರೆ ಸುದೀಪ್​.

‘ಈ ಮೂರು ದಿನಗಳ ಕಾಲ ನಮ್ಮ ಸರ್ಕಾರ ಮತ್ತು ಪ್ರೀತಿಯ ಮುಖ್ಯಮಂತ್ರಿಗಳ ಕೆಲಸ ಅತ್ಯುತ್ತಮವಾಗಿತ್ತು. ಎಲ್ಲವನ್ನೂ ತುಂಬ ಘನತೆ ಮತ್ತು ಶಿಸ್ತಿನಿಂದ ವ್ಯವಸ್ಥೆ ಮಾಡಲಾಗಿತ್ತು. ಅದಕ್ಕಾಗಿ ಮುಖ್ಯಮಂತ್ರಿ ಮತ್ತು ಎಲ್ಲ ಅಧಿಕಾರಿಗಳಿಗೆ ಧನ್ಯವಾದಗಳು. ಪುನೀತ್​ ಅವರನ್ನು ಯೋಗ್ಯವಾದ ರೀತಿಯಲ್ಲಿ ಬೀಳ್ಗೊಡುವಲ್ಲಿ ನಿಮ್ಮೆಲ್ಲರ ಪಾತ್ರ ಮಹತ್ವದ್ದು’ ಎಂದು ಕಿಚ್ಚ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:

Puneeth Rajkumar Last Rites: ಪುನೀತ್ ಅಂತ್ಯಕ್ರಿಯೆ ವೇಳೆ ಶಿವಣ್ಣ ಆಕ್ರಂದನ; ಅಭಿಮಾನಿಗಳ ಕರುಳು ಹಿಂಡುವಂತಿತ್ತು ಆ ನೋವಿನ ಕ್ಷಣ

Puneeth Rajkumar Funeral: ಅಪ್ಪನ ಸಮಾಧಿಗೆ ಪುನೀತ್ ಪುತ್ರಿಯರಿಂದ ಪೂಜೆ; ಕಂಠೀರವ ಸ್ಟುಡಿಯೋದಲ್ಲಿ ಕಣ್ಣೀರ ವಿದಾಯ

Published On - 11:49 am, Sun, 31 October 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!