AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

In His Name: ವಿಡಿಯೋ ಸಾಂಗ್ ಮೂಲಕ ಎಲ್ಲರ ಮನ ಮುಟ್ಟಿದ ಚಂದನಾ

ಚಂದನಾ ಅನಂತಕೃಷ್ಣ ಅವರು ಪೆಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟವರಿಗೆ ಶ್ರದ್ಧಾಂಜಲಿ ಅರ್ಪಿಸಿ 'ಇನ್ ಹಿಸ್ ನೇಮ್' ಎಂಬ ಹಾಡನ್ನು ನಿರ್ಮಿಸಿ ಹಾಡಿದ್ದಾರೆ. ಈ ಹಾಡು ವೈರಲ್ ಆಗಿದ್ದು, ಕಿಚ್ಚ ಸುದೀಪ್ ಸೇರಿದಂತೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹಾಡಿನಲ್ಲಿ ನವವಿವಾಹಿತೆಯ ಪಾತ್ರವನ್ನು ಚಂದನಾ ನಿರ್ವಹಿಸಿದ್ದು, ಮಯೂರ್ ಅಂಬೆಕಲ್ಲು ಸಂಗೀತ ಸಂಯೋಜನೆ ಮಾಡಿದ್ದಾರೆ.

In His Name: ವಿಡಿಯೋ ಸಾಂಗ್ ಮೂಲಕ ಎಲ್ಲರ ಮನ ಮುಟ್ಟಿದ ಚಂದನಾ
ಚಂದನಾ
ರಾಜೇಶ್ ದುಗ್ಗುಮನೆ
|

Updated on:Aug 19, 2025 | 3:02 PM

Share

ಜಮ್ಮು-ಕಾಶ್ಮೀರದ ಪೆಹಲ್ಗಾಮ್​ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ದಾಳಿಯ ಕಹಿ ನೆನಪು ಎಂದಿಗೂ ಮಾಸುವಂಥದ್ದಲ್ಲ. ಈ ದಾಳಿಯಲ್ಲಿ ನಿಧನ ಹೊಂದಿದವರದ್ದು ಒಬ್ಬೊಬ್ಬರದ್ದು ಒಂದೊಂದು ಕಥೆ. ಇದರಲ್ಲಿ ನವ ಜೋಡಿಯೂ ಇತ್ತು. ಆಗತಾನೇ ಮದುವೆ ಆಗಿ, ಹನಿಮೂನ್​ಗೆಂದು ಬಂದಿದ್ದವರ ಪೈಕಿ ಪತಿಯನ್ನು ಹತ್ಯೆ ಮಾಡಲಾಯಿತು. ಇದೇ ವಿಚಾರವನ್ನು ಇಟ್ಟುಕೊಂಡು ಚಂದನಾ ಅನಂತಕೃಷ್ಣ (Chandana) ಅವರು ಸಾಂಗ್ ಒಂದನ್ನು ಮಾಡಿದ್ದಾರೆ. ಇದಕ್ಕೆ ಕಿಚ್ಚ ಸುದೀಪ್ ಮೆಚ್ಚುಗೆ ಹೊರಹಾಕಿದ್ದಾರೆ.

‘ಇನ್ ಹಿಸ್ ನೇಮ್’ ಅನ್ನೋದು ಹಾಡಿನ ಹೆಸರು. ಈ ಹಾಡನ್ನು ಚಂದನಾ ಅವರೇ ಹಾಡಿದ್ದಾರೆ. ಈ ವಿಡಿಯೋ ಸಾಂಗ್​ನಲ್ಲಿ ನವ ವಿವಾಹಿತೆಯಾಗಿ ಕಾಣಿಸಿಕೊಂಡಿದ್ದೂ ಅಲ್ಲದೆ, ಇದನ್ನು ಅವರೇ ನಿರ್ಮಾಣ ಮಾಡಿದ್ದಾರೆ. ಪೆಹಲ್ಗಾಮ್ ಉಗ್ರರರ ದಾಳಿಯ ಸಂತ್ರಸ್ತರಿಗೆ ಶ್ರದ್ಧಾಂಜಲಿ ಅರ್ಪಿಸುವ ರೀತಿಯಲ್ಲಿ ಈ ಹಾಡು ಮೂಡಿಬಂದಿದೆ. ಮಯೂರ್ ಅಂಬೆಕಲ್ಲು ಹಾಡನ್ನು ಸಂಯೋಜನೆ ಮಾಡಿದ್ದಾರೆ. ತೇಜಸ್ ಕಿರಣ್ ಹಾಗೂ ಮಯೂರ್ ಒಟ್ಟಾಗಿ ನಿರ್ದೇಶನ ಮಾಡಿದ್ದಾರೆ. ಚಂದನಾ ಜೊತೆ ನಿದರ್ಶನ್, ಸಂದೀಪ್ ರಾಜ್​ಗೋಪಾಲ್ ನಟಿಸಿದ್ದಾರೆ.

ಇದನ್ನೂ ಓದಿ
Image
ಅಂದು ಹೇಳಿದ್ದು ನಿಜವಾಯ್ತು; ಮಹೇಶ್ ಬಾಬು ಹಳೆಯ ಹೇಳಿಕೆ ವೈರಲ್
Image
ತೀವ್ರವಾಗಿ ಕುಸಿದ ‘ಕೂಲಿ’ ಕಲೆಕ್ಷನ್; ಒಂದಂಕಿಗೆ ಬಂತು ‘ವಾರ್ 2’ ಗಳಿಕೆ
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಚಂದನಾ ಪೋಸ್ಟ್

ಈ ಹಾಡಿನ ಬಗ್ಗೆ ಮಾತನಾಡಿರೋ ಚಂದನಾ ಅವರು, ‘ನಾನು ಈಗ ಚಂದ್ರನ ಮೇಲಿದ್ದಂತೆ ಭಾಸ ಆಗುತ್ತಿದೆ. ಎಲ್ಲವೂ ಟೀಂ ವರ್ಕ್ ಇದೆ. ಇದನ್ನು ತುಂಬಾ ಜನರು ಇಷ್ಟಪಟ್ಟಿದ್ದಾರೆ. ಸಂಸದ ತೇಜಸ್ವಿ ಸೂರ್ಯ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಶಿವಣ್ಣ ಇನ್​ಸ್ಟಾಗ್ರಾಮ್ ಸ್ಟೇಟಸ್ ಹಾಕಿದ್ದರು. ಈಗ ಸುದೀಪ್ ಕೂಡ ಹಾಡಿನ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರು ತುಂಬಾನೇ ವಿವರವಾಗಿ ಹಾಡಿನ ಬಗ್ಗೆ ಮಾತನಾಡಿದ್ದಾರೆ. ಹಾಡು ಇನ್ನೂ ಹೆಚ್ಚಿನ ಜನರಿಗೆ ತಲುಪಬೇಕಿದೆ’ ಎನ್ನುತ್ತಾರೆ.

ಇದನ್ನೂ ನೋಡಿ: ಚಂದನಾ ವಿಡಿಯೋ ಸಾಂಗ್​ಗೆ ಕಿಚ್ಚನ ಮೆಚ್ಚುಗೆ 

‘ಕಾನ್ಸೆಪ್ಟ್ ಇಷ್ಟ ಆಯಿತು, ಅದಕ್ಕೆ ಹಾಡನ್ನು ನಿರ್ಮಾಣ ಮಾಡಿದೆ. ಈ ರೀತಿಯ ಪಾತ್ರ ಸಿಕ್ಕಿದ್ದು ನನ್ನ ಅದೃಷ್ಟ. ಒಳ್ಳೆಯ ಅವಕಾಶ ಸಿಕ್ಕಾಗ ಅದನ್ನು ಬೇಡ ಅನ್ನಬಾರದು. ಈ ಹಾಡಿನಿಂದ ದುಡ್ಡು ಬರುತ್ತದೆಯೋ ಇಲ್ಲವೋ ಅದು ಎರಡನೇ ವಿಚಾರ. ಆದರೆ, ಇಂಥ ಅವಕಾಶ ಸಿಕ್ಕಾಗ ನನಗೆ ಹಣ ಹಾಕಬೇಕು ಎಂದು ಅನಿಸಿತು. ಇದನ್ನು ನಿರ್ದೇಶಕರು ಹೇಳಿದಾಗ ಖುಷಿ ಆಯ್ತು’ ಎಂದಿದ್ದಾರೆ ಚಂದನಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:59 pm, Tue, 19 August 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ