AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್

Hostel Hudugaru Bekagiddare: ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್
ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ
Skanda
|

Updated on: Feb 16, 2021 | 2:48 PM

Share

ಚಂದನವನದಲ್ಲಿ (Sandalwood) ಕ್ರಿಯಾಶೀಲ ಯುವಕರು ಆಗಾಗ ಹೊಸ ಪ್ರಯತ್ನಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಏಕತಾನತೆಯನ್ನು ಮುರಿಯಲೆಂದೇ ಬಂದಂತೆ ಕಾಣುವ ಹೊಸಬರಿಗೆ ಸ್ಯಾಂಡಲ್​ವುಡ್​ನ ಹಿರಿಯರು ಸಹ ಪ್ರೋತ್ಸಾಹ  ನೀಡುತ್ತಲೇ ಬಂದಿದ್ದಾರೆ. ಸದ್ಯ ತಮ್ಮ ವಿಭಿನ್ನ ಆಲೋಚನೆ ಮತ್ತು ಪ್ರಮೋಶನಲ್​ ಟೀಸರ್ (Promotional Teaser) ಮೂಲಕ ಗಮನ ಸೆಳೆದಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ (Hostel Hudugaru Bekagiddare) ತಂಡಕ್ಕೆ ಕಿಚ್ಚ ಸುದೀಪ್​ ಟ್ವೀಟ್​ ಮಾಡಿ ಶುಭ ಕೋರಿದ್ದಾರೆ.

ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ. ಇಂತಹ ಪ್ರಯತ್ನದ ಮೂಲಕವೇ ಹೊಸತನ ಮೂಡುವುದು ಎಂದು ಬೆನ್ನು ತಟ್ಟಿದ್ದಾರೆ.

HOSTEL HUDUGARU BEKAGIDDARE

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಚಿತ್ರಕಥೆ ಮತ್ತು ನಿರ್ದೇಶನವನ್ನು ನಿತಿನ್ ಕೃಷ್ಣಮೂರ್ತಿ ಮಾಡಿದ್ದು, ಅರವಿಂದ್ ಎಸ್​ ಕಶ್ಯಪ್​ ಅವರ ಛಾಯಾಗ್ರಹಣದಲ್ಲಿ ಸಿನಿಮಾ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಸಿನಿಮಾಕ್ಕೆ ಇರುವುದು ಮತ್ತಷ್ಟು ನಿರೀಕ್ಷೆಯನ್ನೂ ಮೂಡಿಸಿದೆ. ಈ ಚಿತ್ರದ ಟೀಸರ್ 50 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ವೀಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ