AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್

Hostel Hudugaru Bekagiddare: ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ.

Kichcha Sudeep: ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ ಚಿತ್ರದ ಟೀಸರ್​ಗೆ ಟ್ವೀಟ್​ ಮಾಡಿ ಶುಭಕೋರಿದ ಕಿಚ್ಚ ಸುದೀಪ್
ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ
Skanda
|

Updated on: Feb 16, 2021 | 2:48 PM

Share

ಚಂದನವನದಲ್ಲಿ (Sandalwood) ಕ್ರಿಯಾಶೀಲ ಯುವಕರು ಆಗಾಗ ಹೊಸ ಪ್ರಯತ್ನಗಳ ಮೂಲಕ ಗಮನ ಸೆಳೆಯುತ್ತಲೇ ಇರುತ್ತಾರೆ. ಏಕತಾನತೆಯನ್ನು ಮುರಿಯಲೆಂದೇ ಬಂದಂತೆ ಕಾಣುವ ಹೊಸಬರಿಗೆ ಸ್ಯಾಂಡಲ್​ವುಡ್​ನ ಹಿರಿಯರು ಸಹ ಪ್ರೋತ್ಸಾಹ  ನೀಡುತ್ತಲೇ ಬಂದಿದ್ದಾರೆ. ಸದ್ಯ ತಮ್ಮ ವಿಭಿನ್ನ ಆಲೋಚನೆ ಮತ್ತು ಪ್ರಮೋಶನಲ್​ ಟೀಸರ್ (Promotional Teaser) ಮೂಲಕ ಗಮನ ಸೆಳೆದಿರುವ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ (Hostel Hudugaru Bekagiddare) ತಂಡಕ್ಕೆ ಕಿಚ್ಚ ಸುದೀಪ್​ ಟ್ವೀಟ್​ ಮಾಡಿ ಶುಭ ಕೋರಿದ್ದಾರೆ.

ಕಿಚ್ಚ ಸುದೀಪ್​ ಅಭಿನಯದ ವಿಕ್ರಾಂತ್​ ರೋಣ ಸಿನಿಮಾದ ಟೀಸರ್ ಬುರ್ಜ್​ ಖಲೀಫಾದಲ್ಲಿ ಬಿಡುಗಡೆಯಾಗಿದ್ದರೆ, ನಾವು ಅಂತರಿಕ್ಷದಲ್ಲಿ ಬಿಡುಗಡೆ ಮಾಡ್ತೀವಿ ಎಂಬಂತೆ ಕ್ರಿಯಾತ್ಮಕ ಮತ್ತು ನವಿರು ಹಾಸ್ಯದ ವಿಡಿಯೋ ತಯಾರಿಸಿದ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ತಂಡದ ಪ್ರಯತ್ನ ನೋಡಿ ಕಿಚ್ಚ ಸುದೀಪ್ ಖುಷಿಯಾಗಿದ್ದಾರೆ. ಇಂತಹ ಪ್ರಯತ್ನದ ಮೂಲಕವೇ ಹೊಸತನ ಮೂಡುವುದು ಎಂದು ಬೆನ್ನು ತಟ್ಟಿದ್ದಾರೆ.

HOSTEL HUDUGARU BEKAGIDDARE

ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಚಿತ್ರಕಥೆ ಮತ್ತು ನಿರ್ದೇಶನವನ್ನು ನಿತಿನ್ ಕೃಷ್ಣಮೂರ್ತಿ ಮಾಡಿದ್ದು, ಅರವಿಂದ್ ಎಸ್​ ಕಶ್ಯಪ್​ ಅವರ ಛಾಯಾಗ್ರಹಣದಲ್ಲಿ ಸಿನಿಮಾ ಮೂಡಿಬಂದಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ನಿರ್ದೇಶನ ಸಿನಿಮಾಕ್ಕೆ ಇರುವುದು ಮತ್ತಷ್ಟು ನಿರೀಕ್ಷೆಯನ್ನೂ ಮೂಡಿಸಿದೆ. ಈ ಚಿತ್ರದ ಟೀಸರ್ 50 ಸಾವಿರಕ್ಕೂ ಹೆಚ್ಚು ವೀಕ್ಷಣೆ ಪಡೆದಿದ್ದು, ವೀಕ್ಷಕರು ಮೆಚ್ಚುಗೆ ಸೂಚಿಸಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ 8 ಆರಂಭಕ್ಕೆ ಕಿಚ್ಚ ಜೋಯಿಸರು ಕೊನೆಗೂ ನೀಡಿದ್ರು ಮುಹೂರ್ತ!

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ