‘ರಕ್ಷಿತ್ ಶೆಟ್ಟಿ ಮೇಲೆ ಒತ್ತಡ ಹಾಕೋದು ನ್ಯಾಯವಲ್ಲ’: ‘ಥಗ್ಸ್​ ಆಫ್​ ಮಾಲ್ಗುಡಿ’ ಬಗ್ಗೆ ಸುದೀಪ್​ ಮಾತು

ಸುದೀಪ್​ ಅವರು ಬಹುನಿರೀಕ್ಷಿತ ‘ಮ್ಯಾಕ್ಸ್​’ ಸಿನಿಮಾದ ಶೂಟಿಂಗ್​ನಲ್ಲಿ ಈಗ ಬ್ಯುಸಿ ಆಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಆ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಲಿದೆ ಎಂದು ಕಿಚ್ಚ ಮಾಹಿತಿ ಹಂಚಿಕೊಂಡಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

‘ರಕ್ಷಿತ್ ಶೆಟ್ಟಿ ಮೇಲೆ ಒತ್ತಡ ಹಾಕೋದು ನ್ಯಾಯವಲ್ಲ’: ‘ಥಗ್ಸ್​ ಆಫ್​ ಮಾಲ್ಗುಡಿ’ ಬಗ್ಗೆ ಸುದೀಪ್​ ಮಾತು
ಕಿಚ್ಚ ಸುದೀಪ್​, ರಕ್ಷಿತ್​ ಶೆಟ್ಟಿ
Follow us
|

Updated on:Feb 15, 2024 | 11:27 AM

ನಟ ಕಿಚ್ಚ ಸುದೀಪ್​ ಅವರು ರಕ್ಷಿತ್​ ಶೆಟ್ಟಿ (Rakshit Shetty) ಜೊತೆ ಸಿನಿಮಾ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ ಆಗಿತ್ತು. ಇಬ್ಬರ ಕಾಂಬಿನೇಷನ್​ನಲ್ಲಿ ‘ಥಗ್ಸ್​ ಆಫ್​ ಮಾಲ್ಗುಡಿ’ ಸಿನಿಮಾ ಘೋಷಣೆ ಆಗಿತ್ತು. ಆದರೆ ಕಾರಣಾಂತರಗಳಿಂದ ಆ ಸಿನಿಮಾ ಸೆಟ್ಟೇರಲೇ ಇಲ್ಲ. ಸುದೀಪ್​ ಅವರು ಬೇರೆ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದರು. ಹಾಗೆಯೇ ರಕ್ಷಿತ್ ಶೆಟ್ಟಿ ಕೂಡ ತಮ್ಮ ಸಿನಿಮಾಗಳಲ್ಲಿ ತೊಡಗಿಕೊಂಡರು. ‘ಥಗ್ಸ್​ ಆಫ್​ ಮಾಲ್ಗುಡಿ’ (Thugs of Malgudi) ಯಾವಾಗ ಬರಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ಆದರೆ ಆ ಸಿನಿಮಾ ಸೆಟ್ಟೇರುವುದು ಬಹುತೇಕ ಅನುಮಾನ ಎಂಬಂತಾಗಿದೆ. ಈ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಕಿಚ್ಚ ಸುದೀಪ್​ (Kichcha Sudeep) ಉತ್ತರ ನೀಡಿದ್ದಾರೆ.

‘ಸರ್​.. ರಕ್ಷಿತ್​ ಶೆಟ್ಟಿ ಅವರ ಜೊತೆ ಥಗ್ಸ್​ ಆಫ್​ ಮಾಲ್ಗುಡಿ ಮಾಡ್ತೀರಾ? ನೀವಿಬ್ಬರು ಜೊತೆಯಾದರೆ ಚೆನ್ನಾಗಿರುತ್ತದೆ’ ಎಂದು ‘ಬೀಯಿಂಗ್​ ಸೋಮಾರಿ’ ಎಂಬ ಟ್ವಿಟರ್​ ಖಾತೆಯ ಬಳಕೆದಾರರು ಪ್ರಶ್ನೆ ಕೇಳಿದ್ದಾರೆ. ಆ ಪ್ರಶ್ನೆಗೆ ಸುದೀಪ್​ ಅವರು ಉತ್ತರ ನೀಡಿದ್ದಾರೆ. ‘ಅದು ಚೆನ್ನಾಗಿರುತ್ತದೆ ಎಂಬುದರ ಬಗ್ಗೆ ನನಗೆ ಖಾತರಿ ಇದೆ. ಈಗ ಅವರಿಗೆ ಅವರದ್ದೇ ಆದ ಜೀವನ ಇದೆ. ಅವರ ಮೇಲೆ ಒತ್ತಡ ಹಾಕುವುದು ನ್ಯಾಯವಲ್ಲ’ ಎಂದು ಸುದೀಪ್​ ಪೋಸ್ಟ್​ ಮಾಡಿದ್ದಾರೆ.

ಸುದೀಪ್​ ಎಕ್ಸ್​ (ಟ್ವಿಟರ್​) ಪೋಸ್ಟ್​:

ಬಿಡುವಿನ ಸಮಯದಲ್ಲಿ ಸುದೀಪ್​ ಅವರು ಅಭಿಮಾನಿಗಳ ಜೊತೆ ಪ್ರಶ್ನೋತ್ತರ ನಡೆಸುತ್ತಾರೆ. ಇಂದು (ಫೆಬ್ರವರಿ 15) ಬೆಳಗ್ಗೆ ಕೂಡ ಅವರು ಅಭಿಮಾನಿಗಳಿಂದ ಅನೇಕ ಪ್ರಶ್ನೆಗಳನ್ನು ಸ್ವೀಕರಿಸಿದ್ದಾರೆ. ‘ವರ್ಷಕ್ಕೆ ಎರಡು ಸಿನಿಮಾ ಮಾಡುತ್ತೇನೆ ಅಂತ ಹೇಳಿದ್ರಿ. ಎಲ್ಲಿದೆ ಎರಡು ಸಿನಿಮಾ’ ಎಂದು ಕೆಲವರು ಖಡಕ್​ ಆಗಿ ಪ್ರಶ್ನಿಸಿದ್ದಾರೆ. ‘ಪ್ರಯತ್ನಿಸುತ್ತಿದ್ದೇನೆ. ನನ್ನ ತಂಡದವರು ಇದನ್ನು ಕೇಳಿಸಿಕೊಳ್ಳುತ್ತಿದ್ದಾರೆ ಅಂತ ಭಾವಿಸಿದ್ದೇನೆ’ ಎಂದು ಸುದೀಪ್​ ಅವರು ಉತ್ತರಿಸಿದ್ದಾರೆ.

ಇದನ್ನೂ ಓದಿ: ‘ಮ್ಯಾಕ್ಸ್​ ಸಿನಿಮಾ ಅಪ್​ಡೇಟ್​ ಬಗ್ಗೆ ವ್ಯಂಗ್ಯ ಬೇಡ’: ಸುದೀಪ್​ ಖಡಕ್​ ಎಚ್ಚರಿಕೆ

ಪ್ರಸ್ತುತ ಸುದೀಪ್​ ಅವರು ‘ಮ್ಯಾಕ್ಸ್​’ ಸಿನಿಮಾದ ಶೂಟಿಂಗ್​ನಲ್ಲಿ ಬ್ಯುಸಿ ಆಗಿದ್ದಾರೆ. ಇನ್ನು ಕೆಲವೇ ದಿನಗಳಲ್ಲಿ ಇದರ ಚಿತ್ರೀಕರಣ ಮುಕ್ತಾಯ ಆಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನ್ಯೂಸ್​ ಇದ್ದಾಗ ಖಂಡಿತವಾಗಿಯೂ ಅಪ್​ಡೇಟ್ ಕೂಡ ಬರಲಿದೆ ಎಂದು ಅವರು ಭರವಸೆ ನೀಡಿದ್ದಾರೆ. ‘ನೀವು ತೆಲುಗಿನ ‘ಈಗ’ ಸಿನಿಮಾದ ರೀತಿಯ ಪಾತ್ರದಲ್ಲಿ ಮತ್ತೆ ಯಾವಾಗ ಕಾಣಿಸಿಕೊಳ್ಳುತ್ತೀರಿ’ ಎಂದು ಅಭಿಮಾನಿಯೊಬ್ಬರು ಕೇಳಿದ್ದಾರೆ. ‘ಇನ್ನೊಬ್ಬರು ಆ ರೀತಿಯ ಕಥೆ ಬರೆದಾಗ’ ಎಂದು ಉತ್ತರಿಸಿದ್ದಾರೆ ಸುದೀಪ್​.

ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಬರೆದ ‘ಕನ್ನಡ ಮಾಣಿಕ್ಯ ಕಿಚ್ಚ’ ಪುಸ್ತಕವನ್ನು ತಾವು ಹಲವು ಬಾರಿ ಓದಿರುವುದಾಗಿ ಅಭಿಮಾನಿಯೊಬ್ಬರು ಹೇಳಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಸುದೀಪ್​ ಅವರು, ‘ಈ ಪುಸ್ತಕ ಬರೆದವರಿಗೆ ಧನ್ಯವಾದಗಳು’ ಎಂದು ಪೋಸ್ಟ್​ ಮಾಡಿದ್ದಾರೆ. ಈ ರೀತಿ ಅಭಿಮಾನಿಗಳ ಹಲವು ಪ್ರಶ್ನೆಗಳಿಗೆ ಸುದೀಪ್​ ಉತ್ತರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:26 am, Thu, 15 February 24

ತಾಜಾ ಸುದ್ದಿ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಹೆಣ್ಣಿಗಾಗಿ ಬದುಕು ಹಾಳುಮಾಡಿಕೊಂಡೆಯಲ್ಲ ಎಂದ ಹುಬ್ಬಳ್ಳಿಯ ದರ್ಶನ್ ಅಭಿಮಾನಿ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ಬೀದರ್​​: ಅಂತ್ಯಸಂಸ್ಕಾರ ಮಾಡಿದ್ದ ಮಗು ಬೆಳಗಾಗುವಷ್ಟರಲ್ಲಿ ಮರದಲ್ಲಿ ಪ್ರತ್ಯ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ವಾಪಸ್ಸಾಗಲು ಬಿಜೆಪಿಯಿಂದ ಕರೆ ಬಂದಿದೆ, ಅಭಿಪ್ರಾಯ ತಿಳಿಸಿಲ್ಲ: ಈಶ್ವರಪ್ಪ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ರಿಲಯನ್ಸ್​​ ಜಿಯೋ ರೀಚಾರ್ಜ್ ಪ್ಲ್ಯಾನ್ ಆಯ್ತು ದುಬಾರಿ | ಶೇ 22ರಷ್ಟು ಬೆಲೆ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ಚಾರ್ಮಾಡಿ ಘಾಟ್ ಇಳುಕಲು ಪ್ರದೇಶದ ಜಲಪಾತಗಳಲ್ಲಿ ಯುವಕರ ಅಪಾಯಕಾರಿ ಹುಚ್ಚಾಟ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ವಿಧಾನಸಭೆಯಲ್ಲಿ ಮೆಜಾರಿಟಿಯ ಕಾರಣ ಸಿದ್ದರಾಮಯ್ಯ ಸೇಫ್ ಆಗಿದ್ದಾರೆ: ಸಿಟಿ ರವಿ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ
ದೇವರಮನೆ, ಚಾರ್ಮಾಡಿಯಲ್ಲಿ ರಸ್ತೆ ಮಧ್ಯೆ ವಾಹನ ನಿಲ್ಸಿ ಪ್ರವಾಸಿಗರ ಹುಚ್ಚಾಟ