AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​; ದರ್ಶನ್ ಬಳಿಕ ಇದೀಗ ಸುದೀಪ್ ಟ್ವೀಟ್​!​

ಸಾಮಾಜಿಕ ಜಾಲತಾಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಬಗ್ಗೆ ಮೊದಲ ಬಾರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಟ್ವೀಟ್ ಮಾಡಿದ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೀನಿ ಅಂತ ಟ್ವೀಟ್ ಮಾಡಿದ ದರ್ಶನ್, ನನ್ನ ಅನ್ನದಾತರು ಹಾಗೂ ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಅಂತ ಪರೋಕ್ಷವಾಗಿ ಸುದೀಪ್ ಫ್ಯಾನ್ಸ್​ಗೆ ಖಡಕ್ ಎಚ್ಚರಿಕೆ ನೀಡಿದ್ದರು. ಇದೀಗ ದರ್ಶನ್ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್​, ​ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರೋದು ಒಳಿತು ಎಂದಿದ್ದಾರೆ. […]

‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​; ದರ್ಶನ್ ಬಳಿಕ ಇದೀಗ ಸುದೀಪ್ ಟ್ವೀಟ್​!​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 17, 2019 | 4:04 PM

Share

ಸಾಮಾಜಿಕ ಜಾಲತಾಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಬಗ್ಗೆ ಮೊದಲ ಬಾರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಟ್ವೀಟ್ ಮಾಡಿದ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೀನಿ ಅಂತ ಟ್ವೀಟ್ ಮಾಡಿದ ದರ್ಶನ್, ನನ್ನ ಅನ್ನದಾತರು ಹಾಗೂ ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಅಂತ ಪರೋಕ್ಷವಾಗಿ ಸುದೀಪ್ ಫ್ಯಾನ್ಸ್​ಗೆ ಖಡಕ್ ಎಚ್ಚರಿಕೆ ನೀಡಿದ್ದರು.

ಇದೀಗ ದರ್ಶನ್ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್​, ​ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರೋದು ಒಳಿತು ಎಂದಿದ್ದಾರೆ. ಇನ್ನು ಪೈಲ್ವಾನ್ ಸಿನಿಮಾದ ಪೈರಸಿ ಬಗ್ಗೆ ನಾನಾಗಲಿ, ನನ್ನ ತಂಡವಾಗಲಿ ಯಾವುದೇ ನಟನ ಹೆಸರು ತೆಗೆದುಕೊಂಡಿಲ್ಲ. ಆದ್ರೆ ಕೆಲವರು ಪೈರಸಿ ಲಿಂಕನ್ನು ವೇಗವಾಗಿ ಹರಡುವಂತೆ ಶೇರ್ ಮಾಡಿದ್ದಾರೆ. ಎಚ್ಚರಿಕೆ ಕೊಡೋದು ಹಾಗು ಎಲ್ಲಿಂದಲೋ ತೆಗೆದುಕೊಂಡಿರುವ ಸಾಲನ್ನು ಹಾಕೋದು ನನ್ನ ಜಾಯಮಾನವಲ್ಲ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಬರೀ ಮಾತಿನಿಂದ ಯುದ್ಧ ಗೆಲ್ಲಲು ಸಾಧ್ಯವಿಲ್ಲ, ಹಾಗಾಗುವಂತಿದ್ದರೆ ಎಲ್ಲರೂ ರಾಜರಾಗಿ ಆಳಬಹುದಾಗಿತ್ತು. ನಾನು ನನ್ನ ಕೆಲಸದ ಮೂಲಕ ಜನರನ್ನ ಗೆಲ್ಲೋಕೆ ಪ್ರಯತ್ನಿಸ್ತೇನೆ ಅಂತ ಸುದೀಪ್ ಹೇಳಿದ್ದಾರೆ. ನಾವಿಲ್ಲಿ ಇರೋದು ಕೆಲವೇ ದಿನಗಳು ಮಾತ್ರ, ಜೀವನದ ಜೊತೆಗೆ ಹೋಗೋಣ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತೆ. ಜಗತ್ತನ್ನೇ ಗೆದ್ದ ಅಲೆಕ್ಸೆಂಡರ್ ಕೊನೆಗೆ ಬರೀಗೈಯಲ್ಲಿ ಹೋದ. ನಾವು ಒಳ್ಳೆ ದಿನಗಳನ್ನ ಮಾತ್ರ ತೆಗೆದುಕೊಂಡು ಹೋಗಲು ಸಾಧ್ಯ. ಒಳ್ಳೆಯ ನೆನಪುಗಳು ಮಾತ್ರ ನಮ್ಮನ್ನ ಜೀವಂತವಾಗಿಡುತ್ತವೆ ಎಂದು ಕಿಚ್ಚ ಸುದೀಪ್ ಸುದೀರ್ಘವಾದ ಪತ್ರವನ್ನು ಬರೆದಿದ್ದಾರೆ.

Published On - 3:58 pm, Tue, 17 September 19

Follow Us
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!