AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​; ದರ್ಶನ್ ಬಳಿಕ ಇದೀಗ ಸುದೀಪ್ ಟ್ವೀಟ್​!​

ಸಾಮಾಜಿಕ ಜಾಲತಾಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಬಗ್ಗೆ ಮೊದಲ ಬಾರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಟ್ವೀಟ್ ಮಾಡಿದ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೀನಿ ಅಂತ ಟ್ವೀಟ್ ಮಾಡಿದ ದರ್ಶನ್, ನನ್ನ ಅನ್ನದಾತರು ಹಾಗೂ ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಅಂತ ಪರೋಕ್ಷವಾಗಿ ಸುದೀಪ್ ಫ್ಯಾನ್ಸ್​ಗೆ ಖಡಕ್ ಎಚ್ಚರಿಕೆ ನೀಡಿದ್ದರು. ಇದೀಗ ದರ್ಶನ್ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್​, ​ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರೋದು ಒಳಿತು ಎಂದಿದ್ದಾರೆ. […]

‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​; ದರ್ಶನ್ ಬಳಿಕ ಇದೀಗ ಸುದೀಪ್ ಟ್ವೀಟ್​!​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 17, 2019 | 4:04 PM

Share

ಸಾಮಾಜಿಕ ಜಾಲತಾಣಗಳಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ‘ಕಿಚ್ಚ-ದಚ್ಚು’ ಫ್ಯಾನ್ಸ್​ ವಾರ್​ ಬಗ್ಗೆ ಮೊದಲ ಬಾರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್​ ಟ್ವೀಟ್ ಮಾಡಿದ್ರು. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೀನಿ ಅಂತ ಟ್ವೀಟ್ ಮಾಡಿದ ದರ್ಶನ್, ನನ್ನ ಅನ್ನದಾತರು ಹಾಗೂ ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ ಅಂತ ಪರೋಕ್ಷವಾಗಿ ಸುದೀಪ್ ಫ್ಯಾನ್ಸ್​ಗೆ ಖಡಕ್ ಎಚ್ಚರಿಕೆ ನೀಡಿದ್ದರು.

ಇದೀಗ ದರ್ಶನ್ ಟ್ವೀಟ್​ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್​, ​ಕೆಲವೊಂದು ಮಾತುಗಳಿಗೆ ಕಣ್ಣು ಕಾಣಿಸದಂತೆ, ಕಿವಿ ಕೇಳಿಸದಂತೆ ಇರೋದು ಒಳಿತು ಎಂದಿದ್ದಾರೆ. ಇನ್ನು ಪೈಲ್ವಾನ್ ಸಿನಿಮಾದ ಪೈರಸಿ ಬಗ್ಗೆ ನಾನಾಗಲಿ, ನನ್ನ ತಂಡವಾಗಲಿ ಯಾವುದೇ ನಟನ ಹೆಸರು ತೆಗೆದುಕೊಂಡಿಲ್ಲ. ಆದ್ರೆ ಕೆಲವರು ಪೈರಸಿ ಲಿಂಕನ್ನು ವೇಗವಾಗಿ ಹರಡುವಂತೆ ಶೇರ್ ಮಾಡಿದ್ದಾರೆ. ಎಚ್ಚರಿಕೆ ಕೊಡೋದು ಹಾಗು ಎಲ್ಲಿಂದಲೋ ತೆಗೆದುಕೊಂಡಿರುವ ಸಾಲನ್ನು ಹಾಕೋದು ನನ್ನ ಜಾಯಮಾನವಲ್ಲ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ.

ಬರೀ ಮಾತಿನಿಂದ ಯುದ್ಧ ಗೆಲ್ಲಲು ಸಾಧ್ಯವಿಲ್ಲ, ಹಾಗಾಗುವಂತಿದ್ದರೆ ಎಲ್ಲರೂ ರಾಜರಾಗಿ ಆಳಬಹುದಾಗಿತ್ತು. ನಾನು ನನ್ನ ಕೆಲಸದ ಮೂಲಕ ಜನರನ್ನ ಗೆಲ್ಲೋಕೆ ಪ್ರಯತ್ನಿಸ್ತೇನೆ ಅಂತ ಸುದೀಪ್ ಹೇಳಿದ್ದಾರೆ. ನಾವಿಲ್ಲಿ ಇರೋದು ಕೆಲವೇ ದಿನಗಳು ಮಾತ್ರ, ಜೀವನದ ಜೊತೆಗೆ ಹೋಗೋಣ. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತೆ. ಜಗತ್ತನ್ನೇ ಗೆದ್ದ ಅಲೆಕ್ಸೆಂಡರ್ ಕೊನೆಗೆ ಬರೀಗೈಯಲ್ಲಿ ಹೋದ. ನಾವು ಒಳ್ಳೆ ದಿನಗಳನ್ನ ಮಾತ್ರ ತೆಗೆದುಕೊಂಡು ಹೋಗಲು ಸಾಧ್ಯ. ಒಳ್ಳೆಯ ನೆನಪುಗಳು ಮಾತ್ರ ನಮ್ಮನ್ನ ಜೀವಂತವಾಗಿಡುತ್ತವೆ ಎಂದು ಕಿಚ್ಚ ಸುದೀಪ್ ಸುದೀರ್ಘವಾದ ಪತ್ರವನ್ನು ಬರೆದಿದ್ದಾರೆ.

Published On - 3:58 pm, Tue, 17 September 19

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!