AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Kotigobba 3: ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ರಮ್ಯಾ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅದನ್ನು ಸುದೀಪ್​ ಕೂಡ ಗಮನಿಸಿದ್ದು, ‘ಕೋಟಿಗೊಬ್ಬ 3’ ಚಿತ್ರದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?
ಕಿಚ್ಚ ಸುದೀಪ್​ - ರಮ್ಯಾ
TV9 Web
| Updated By: ಮದನ್​ ಕುಮಾರ್​|

Updated on: Oct 11, 2021 | 3:48 PM

Share

ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರ ಅ.14ರಂದು ಬಿಡುಗಡೆ ಆಗುತ್ತಿದೆ. ಈ ಪ್ರಯುಕ್ತ ಇಂದು (ಅ.11) ಸುದ್ದಿಗೋಷ್ಠಿ ನಡೆದಿದೆ. ಈ ವೇಳೆ ರಮ್ಯಾ ಬಗ್ಗೆ ಸುದೀಪ್​ ಮಾತನಾಡಿದ್ದಾರೆ. ಕೆಲವೇ ದಿನಗಳ ಹಿಂದೆ ಈ ಸಿನಿಮಾ ಟ್ರೇಲರ್​ ಬಿಡುಗಡೆ ಆಗಿತ್ತು. ಅದರಲ್ಲಿ ಸುದೀಪ್​ ಸಾಕಷ್ಟು ಯಂಗ್​ ಆಗಿ ಕಾಣಿಸಿಕೊಂಡಿದ್ದರು. ಅದನ್ನು ಕಂಡು ಸ್ಯಾಂಡಲ್​ವುಡ್​ ಕ್ವೀನ್​ ರಮ್ಯಾ ಅಚ್ಚರಿ ವ್ಯಕ್ತಪಡಿಸಿದ್ದರು. ಆ ಮಾತಿಗೆ ಈಗ ಸುದೀಪ್​ ಪ್ರತಿಕ್ರಿಯೆ ನೀಡಿದ್ದಾರೆ.

‘ಟ್ರೇಲರ್​ ಅದ್ಭುತವಾಗಿದೆ. ಕಿಚ್ಚ ಸುದೀಪ್​ ಅವರೇ, ನಿಮಗೆ ವಯಸ್ಸು ಆಗುವುದೇ ಇಲ್ಲವಾ?’ ಎಂದು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ರಮ್ಯಾ ಬರೆದುಕೊಂಡಿದ್ದರು. ದಿನದಿಂದ ದಿನಕ್ಕೆ ಸುದೀಪ್​ ವಯಸ್ಸು ಕಮ್ಮಿ ಆಗುತ್ತಿದೆ ಎಂಬರ್ಥದಲ್ಲಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದರು. ಅದನ್ನು ಸುದೀಪ್​ ಗಮನಿಸಿದ್ದಾರೆ. ಆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆ ಎದುರಾಯಿತು. ಅದಕ್ಕೆ ಕಿಚ್ಚ ಸೂಕ್ತ ಉತ್ತರ ನೀಡಿದ್ದಾರೆ.

‘ರಮ್ಯಾ ಬರೆದುಕೊಂಡಿದ್ದನ್ನು ನಾನೂ ನೋಡಿದೆ. ಕೊನೆಯದಾಗಿ ನಟನೆ ಮಾಡಿದ ಮೇಲೆ ಅವರು ನನ್ನ ಬಗ್ಗೆ ಟ್ವೀಟ್​ ಮಾಡಿ ಎಷ್ಟೋ ವರ್ಷಗಳೇ ಆಗಿತ್ತು. ಕೊನೆಗೂ ಚಾಲೆಂಜಿಂಗ್​ ಆಗಿ ತೆಗೆದುಕೊಂಡು ಈಗ ಪೋಸ್ಟ್ ಮಾಡಿದ್ದಾರೆ. ಸಿನಿಮಾ ಬಿಟ್ಟು ಅವರು ರಾಜಕೀಯದಲ್ಲಿ ಇದ್ದರು. ಆದರೂ ಕೂಡ ನಮ್ಮ ಬಗ್ಗೆ ಪೋಸ್ಟ್​ ಮಾಡಿರುವುದು ಖುಷಿಯ ವಿಚಾರ’ ಎಂದು ಸುದೀಪ್ ಹೇಳಿದ್ದಾರೆ.

‘ನಾವು ಇಂದು ದೈಹಿಕವಾಗಿ ಹೇಗೆ ಇದ್ದೇವೆ ಎಂಬುದು ಒಂದು ರೀತಿಯ ಇನ್ವೆಸ್ಟ್​ಮೆಂಟ್​. ಸಿನಿಮಾದಲ್ಲಿ ಹೆಸರು ಮಾಡಿದ್ದೇವೆ ಎಂದಮಾತ್ರಕ್ಕೆ ಅದನ್ನು ಬೇಕಾಬಿಟ್ಟಿ ಬಳಸಿಕೊಳ್ಳೋಕೆ ಆಗಲ್ಲ. ನಾವು ಹೆಂಗಿದ್ದರೂ ಓಕೆ ಎಂದುಕೊಳ್ಳಬಾರದು. ಹೊಸಬರು ಕೆಲವರು ನನಗಿಂತ ಹೆಚ್ಚು ವಯಸ್ಸಾದಂತೆ ಕಾಣುತ್ತಾರೆ. ಅದೇ ರೀತಿ, 55 ವರ್ಷ ಆದವರೂ ನಮಗಿಂತ ಚಿಕ್ಕವರ ರೀತಿ ಕಾಣುತ್ತಾರೆ. ಇವರಿಬ್ಬರೂ ಕೂಡ ನಮಗೆ ಸ್ಫೂರ್ತಿ ನೀಡುತ್ತಾರೆ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

‘ರಂಗ ಎಸ್​ಎಸ್​ಎಲ್​ಸಿ’, ‘ಜಸ್ಟ್​ ಮಾತ್​ ಮಾತಲ್ಲಿ’, ‘ಮುಸ್ಸಂಜೆ ಮಾತು’ ಸಿನಿಮಾಗಳಲ್ಲಿ ರಮ್ಯಾ ಮತ್ತು ಸುದೀಪ್​ ನಟಿಸಿದ್ದರು. ಮತ್ತೆ ಅವರು ತೆರೆಮೇಲೆ ಜೋಡಿಯಾಗಿ ಕಾಣಿಸಿಕೊಳ್ಳಲಿ ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.

ಇದನ್ನೂ ಓದಿ:

ರಮ್ಯಾ ಬರೆದ ಚಿತ್ರ ನೋಡಿ ತಲೆ ಕೆರೆದುಕೊಂಡ ಫ್ಯಾನ್ಸ್​; ಜೀವನದ ಅರ್ಥ ವಿವರಿಸಿದ ಗೆರೆಗಳು​

ಕೊರೊನಾಗೆ ಸೆಡ್ಡು ಹೊಡೆದು ಹಳೇ ಚಾರ್ಮ್​ ಪಡೆದ ಸುದೀಪ್​; ಫೋಟೋ ನೋಡಿ ವಾವ್​ ಎಂದ ಫ್ಯಾನ್ಸ್​

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ