AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋರ್ಟ್​ ಕಟಕಟೆಯಲ್ಲಿ ಎಂ.ಎನ್​. ಕುಮಾರ್​ ವಿರುದ್ಧ ಹೇಳಿಕೆ ನೀಡಿದ ಸುದೀಪ್​; ಫಲ ನೀಡಲಿಲ್ಲ ಸಂಧಾನ

ಕಿಚ್ಚ ಸುದೀಪ್​ ಅವರು ಇಂದು (ಆಗಸ್ಟ್​ 10) ಕೋರ್ಟ್‌ನಲ್ಲಿ ಪ್ರಮಾಣಿತ ಹೇಳಿಕೆ ದಾಖಲಿಸಿದ್ದಾರೆ. ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಎಂ.ಎನ್. ಕುಮಾರ್ ಮಾಡಿದ ಆರೋಪಗಳೆಲ್ಲವೂ ಸುಳ್ಳು ಎಂದು ಸುದೀಪ್​ ಹೇಳಿದ್ದಾರೆ. ಇಬ್ಬರ ನಡುವೆ ಸಂಧಾನ ಮಾಡಿಸಲು ಚಿತ್ರರಂಗದ ಹಿರಿಯರು ಮಾಡಿದ ಪ್ರಯತ್ನಕ್ಕೆ ಫಲ ಸಿಕ್ಕಿಲ್ಲ.

ಕೋರ್ಟ್​ ಕಟಕಟೆಯಲ್ಲಿ ಎಂ.ಎನ್​. ಕುಮಾರ್​ ವಿರುದ್ಧ ಹೇಳಿಕೆ ನೀಡಿದ ಸುದೀಪ್​; ಫಲ ನೀಡಲಿಲ್ಲ ಸಂಧಾನ
ಕಿಚ್ಚ ಸುದೀಪ್​, ಎಂ.ಎನ್​. ಕುಮಾರ್​
Ramesha M
| Edited By: |

Updated on:Aug 10, 2023 | 5:38 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಮತ್ತು ನಿರ್ಮಾಪಕ ಎಂ.ಎನ್​. ಕುಮಾರ್​ (MN Kumar) ನಡುವೆ ಭುಗಿಲೆದ್ದಿರುವ ವಿವಾದವನ್ನು ಬಗೆಹರಿಸಲು ಸಂಧಾನ ಸಭೆ ನಡೆದಿತ್ತು. ಹಿರಿಯ ನಟರಾದ ಶಿವರಾಜ್​ಕುಮಾರ್​, ರವಿಚಂದ್ರನ್​ ಮುಂತಾದವರ ಮಧ್ಯಸ್ಥಿಕೆಯಲ್ಲಿ ಸಂಧಾನ ಮಾಡಿಸಲು ಪ್ರಯತ್ನಿಸಲಾಗಿತ್ತು. ಆದರೆ ಅದಕ್ಕೆ ಕಿಚ್ಚ ಸುದೀಪ್​ ಒಪ್ಪಿಕೊಂಡಿರಲಿಲ್ಲ. ಈಗ ಅವರು ನ್ಯಾಯಾಲಯದಲ್ಲಿ ನಿರ್ಮಾಪಕರಾದ ಎಂ.ಎನ್​. ಕುಮಾರ್​ ಮತ್ತು ಎಂ.ಎನ್​. ಸುರೇಶ್​ ವಿರುದ್ಧ ಹೇಳಿಕೆ ದಾಖಲು ಮಾಡಿದ್ದಾರೆ. ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಮ್ಯಾಜಿಸ್ಟ್ರೇಟ್​ ಕೋರ್ಟ್​ಗೆ (Magistrate Court) ಸುದೀಪ್​ ಅವರು ಹಾಜರಾಗಿದ್ದಾರೆ. ಕಟಕಟೆಯಲ್ಲಿ ನಿಂತು ಅವರು ತಮ್ಮ ಹೇಳಿಕೆ ನೀಡಿದ್ದಾರೆ. ಸಂಧಾನ ಸಭೆ ಬದಲು ನ್ಯಾಯಾಲಯದ ಮೂಲಕವೇ ಇತ್ಯರ್ಥ ಮಾಡಿಕೊಳ್ಳಲು ಅವರು ಮುಂದಾಗಿದ್ದಾರೆ.

ಕಿಚ್ಚ ಸುದೀಪ್​ ಅವರು ಇಂದು (ಆಗಸ್ಟ್​ 10) ಕೋರ್ಟ್‌ನಲ್ಲಿ ಪ್ರಮಾಣಿತ ಹೇಳಿಕೆ ದಾಖಲಿಸಿದ್ದಾರೆ. ಈ ಹಿಂದೆ ಸುದ್ದಿಗೋಷ್ಠಿಯಲ್ಲಿ ಎಂ.ಎನ್. ಕುಮಾರ್ ಮಾಡಿದ ಆರೋಪಗಳೆಲ್ಲವೂ ಸುಳ್ಳು ಎಂದು ಸುದೀಪ್​ ಹೇಳಿದ್ದಾರೆ. ‘ಆರ್‌.ಆರ್. ನಗರದಲ್ಲಿ ಮನೆ ಕಟ್ಟಲು ಹಣದ ನೆರವು ಪಡೆದಿರುವ ಬಗ್ಗೆ ಮಾಡಲಾಗಿರುವ ಆರೋಪ ಸುಳ್ಳು. ಎಂ.ಎನ್. ಕುಮಾರ್ ಹೇಳಿಕೆಯನ್ನು ಎಂ.ಎನ್. ಸುರೇಶ್ ಬೆಂಬಲಿಸಿದ್ದಾರೆ. ಇಬ್ಬರು ನಿರ್ಮಾಪಕರ ಸುದ್ದಿಗೋಷ್ಠಿಯಿಂದ ನನಗೆ ಮಾನಹಾನಿ ಆಗಿದೆ. ಹಲವರು ನನ್ನನ್ನು ಈ ಬಗ್ಗೆ ಪ್ರಶ್ನಿಸುತ್ತಿದ್ದಾರೆ’ ಎಂದು ಸುದೀಪ್ ಹೇಳಿದ್ದಾರೆ.

ಇದನ್ನೂ ಓದಿ: Exclusive: ತಮಿಳುನಾಡಲ್ಲಿ ಕನ್ನಡದ ಕಂಪು ಹರಡಿದ ಸುದೀಪ್: ಮಹಾಬಲಿಪುರಂ ಶೂಟಿಂಗ್ ಸೆಟ್‌ನಲ್ಲಿ ಕನ್ನಡಿಗರ ದರ್ಬಾರು

ವಕೀಲ ಅಜಯ್ ಕಡಕೋಳ್ ಜೊತೆ ಸುದೀಪ್​ ಅವರು ಕೋರ್ಟ್​ಗೆ ಹಾಜರಾದರು. ಅವರೊಂದಿಗೆ ಚಕ್ರವರ್ತಿ ಚಂದ್ರಚೂಡ್ ಮತ್ತು ನಿರ್ಮಾಪಕ ಜಾಕ್ ಮಂಜು ಕೂಡ ಆಗಮಿಸಿದರು. ತಮ್ಮ ಬಗ್ಗೆ ಅಪಪ್ರಚಾರ ಮಾಡಿದ ನಿರ್ಮಾಪಕರ ವಿರುದ್ಧ ಸುದೀಪ್​ ಅವರು ಮಾನನಷ್ಟ ಮೊಕದ್ದಮೆ ಹೂಡಿದ್ದು, ಆ ಕೇಸ್​ಗೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ವಿಚಾರಣೆ ಆರಂಭ ಆಗಿದೆ. ಫೋಟೋ ಸಹಿತ ಹಲವು ದಾಖಲೆಗಳನ್ನು ಸುದೀಪ್​ ಅವರು ಕೋರ್ಟ್​ಗೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: Kichcha Sudeep: ಸುದೀಪ್​ ಅಭಿಮಾನಿಗಳಲ್ಲೂ ನಿರೀಕ್ಷೆ ಮೂಡಿಸಿದ ‘ಬ್ಯಾಂಗ್​’ ಸಿನಿಮಾ; ಅದಕ್ಕೆ ಕಾರಣ ಕಿಚ್ಚನ ಕಂಠ

ಒಂದು ವೇಳೆ ನಿರ್ಮಾಪಕರು ಕ್ಷಮೆ ಕೇಳಿದರೆ ರಾಜಿ ಸಂಧಾನ ಮಾಡಿಕೊಳ್ಳುತ್ತೀರಾ ಎಂದು ಸುದೀಪ್​ಗೆ ನ್ಯಾಯಾಧೀಶರು ಕೇಳಿದರು. ಅದಕ್ಕೆ ಸುದೀಪ್​ ಒಪ್ಪಿಕೊಂಡಿಲ್ಲ. ‘ಈ ಮೊದಲು ನೋಟೀಸ್ ನೀಡಿ ಮಾಧ್ಯಮಗಳಲ್ಲಿ ಕ್ಷಮೆಯಾಚಿಸಲು ಕೇಳಿದ್ದೆ. ಆದರೆ ಅವರು ಮಾಧ್ಯಮಗಳಲ್ಲಿ ಕ್ಷಮೆ ಯಾಚಿಸಿಲ್ಲ. ಅವರ ಹೇಳಿಕೆಯಿಂದ ನಾನು ಇಷ್ಟು ವರ್ಷ ಕಷ್ಟಪಟ್ಟು ಗಳಿಸಿದ ವರ್ಚಸ್ಸಿಗೆ ಹಾನಿಯಾಗಿದೆ. ಒಬ್ಬ ಸುದೀಪ್​ನನ್ನು ಬಗ್ಗಿಸಿದರೆ ಹಲವರನ್ನು ಬಗ್ಗಿಸಬಹುದೆಂದು ತಿಳಿದಿದ್ದಾರೆ’ ಎಂದು ಹೇಳುವ ಮೂಲಕ ರಾಜಿಗೆ ತಾವು ಸಿದ್ಧರಿಲ್ಲ ಎಂದು ನ್ಯಾಯಾಧೀಶರ ಎದುರು ಸುದೀಪ್​ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 5:22 pm, Thu, 10 August 23

Follow Us
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ
ಈ ಬಾರಿ ಅಸ್ಸಾಂನಲ್ಲಿ ಎನ್​ಡಿಎ ಹ್ಯಾಟ್ರಿಕ್​ಗೆ ಸಿದ್ಧವಾಗಿದೆ: ಮೋದಿ