AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಸುದೀಪ್​ ರಾಜಕೀಯ ಎಂಟ್ರಿ ಬಗ್ಗೆ ಗುಸುಗುಸು; ಯಾವುದೇ ಪ್ರತಿಕ್ರಿಯೆ ನೀಡದ ಕಿಚ್ಚ

Kichcha Sudeep Politics: ಕಿಚ್ಚ ಸುದೀಪ್​ ಅವರು ಮೊದಲಿನಿಂದಲೂ ರಾಜಕೀಯದಿಂದ ದೂರ ಉಳಿದುಕೊಂಡಿದ್ದಾರೆ. ಹಾಗಿದ್ದರೂ ಕೂಡ ಇತ್ತೀಚೆಗೆ ಅನೇಕ ಅಂತೆ-ಕಂತೆಗಳು ಕೇಳಿಬಂದಿದೆ.

Kichcha Sudeep: ಸುದೀಪ್​ ರಾಜಕೀಯ ಎಂಟ್ರಿ ಬಗ್ಗೆ ಗುಸುಗುಸು; ಯಾವುದೇ ಪ್ರತಿಕ್ರಿಯೆ ನೀಡದ ಕಿಚ್ಚ
ಕಿಚ್ಚ ಸುದೀಪ್
TV9 Web
| Edited By: |

Updated on:Jan 12, 2023 | 3:54 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಚಿತ್ರರಂಗದಲ್ಲಿ ಬ್ಯುಸಿ ಆಗಿದ್ದಾರೆ. ‘ವಿಕ್ರಾಂತ್​ ರೋಣ’ ಬಳಿಕ ಅವರ ಹೊಸ ಸಿನಿಮಾ ಯಾವುದು ಎಂಬುದನ್ನು ತಿಳಿದುಕೊಳ್ಳುವ ಕುತೂಹಲ ಅವರ ಅಭಿಮಾನಿಗಳಿಗೆ ಮೂಡಿದೆ. ಈ ನಡುವೆ ರಾಜಕೀಯದ ವಿಚಾರದಲ್ಲಿ ಸುದೀಪ್​ ಹೆಸರು ತಳುಕುಹಾಕಿಕೊಂಡಿದೆ. ಶೀಘ್ರದಲ್ಲೇ ಕರ್ನಾಟಕದ ರಾಜಕೀಯಕ್ಕೆ ಕಿಚ್ಚ ಎಂಟ್ರಿ (Sudeep Politics Entry)ನೀಡಲಿದ್ದಾರೆ ಎಂಬ ಗುಸುಗುಸು ಹಬ್ಬಿದೆ. ಅವರು ಕಾಂಗ್ರೆಸ್​ ಪಾರ್ಟಿ (Congress Party) ಜೊತೆ ಕೈ ಜೋಡಿಸುತ್ತಾರೆ ಎಂದೆಲ್ಲ ವರದಿಗಳು ಪ್ರಕಟ ಆಗಿವೆ. ಈ ಕುರಿತಾಗಿ ಸ್ವತಃ ಸುದೀಪ್​ ಅವರು ಪ್ರತಿಕ್ರಿಯೆ ನೀಡಲಿ ಎಂದು ಅನೇಕರು ನಿರೀಕ್ಷಿಸುತ್ತಿದ್ದಾರೆ. ಆದರೆ ಸುದೀಪ್​ ಅವರಿಂದ ಈವರೆಗೂ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ರಾಜಕೀಯದ ಎಂಟ್ರಿ ಕುರಿತು ಮಾತನಾಡಲು ಅವರು ನಿರಾಕರಿಸಿದ್ದಾರೆ.

ಬೆಂಗಳೂರಿನಲ್ಲಿ ಹೊಸ ಮಲ್ಟಿಪ್ಲೆಕ್ಸ್​ ಅನ್ನು ಕಿಚ್ಚ ಸುದೀಪ್​ ಅವರು ಇಂದು (ಜ.12) ಉದ್ಘಾಟಿಸಿದ್ದಾರೆ. ಈ ವೇಳೆ ಶಾಸಕರಾದ ಸತೀಶ್​ ರೆಡ್ಡಿ ಮತ್ತು ರಾಮಲಿಂಗ ರೆಡ್ಡಿ ಜೊತೆಗಿದ್ದರು. ಸುದೀಪ್​ ಅವರ ಆಪ್ತರಾದ ಜಾಕ್​ ಮಂಜು ಕೂಡ ಸಾಥ್​ ನೀಡಿದ್ದರು. ಈ ಸಮಯದಲ್ಲಿ ರಾಜಕೀಯದ ಎಂಟ್ರಿ ಬಗ್ಗೆ ಮಾಧ್ಯಮದವರಿಂದ ಸುದೀಪ್​ ಅವರಿಗೆ ಪ್ರಶ್ನೆ ಎದುರಾಯಿತು. ಆದರೆ ಅವರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಹೊಸ ಮಲ್ಟಿಪ್ಲೆಕ್ಸ್​ ಕುರಿತಾಗಿ ಮಾತ್ರ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: Kichcha Sudeep: ​ತಮಿಳು ನಿರ್ಮಾಪಕರ ಜೊತೆ ಕಿಚ್ಚ ಸುದೀಪ್​ ಸಿನಿಮಾ; ಕೇಳಿಬಂತು ಬಿಗ್​ ನ್ಯೂಸ್​

ಇದನ್ನೂ ಓದಿ
Image
Kiccha Sudeep: ಜೋಸ್ ಬಟ್ಲರ್​ನಿಂದ ಸುದೀಪ್​ಗೆ ಬಂತು ಸರ್​​ಪ್ರೈಸ್ ಗಿಫ್ಟ್: ಥ್ರಿಲ್ ಆದ ಕಿಚ್ಚ
Image
‘83’ ಸಿನಿಮಾ ವೇದಿಕೆಯಲ್ಲಿ ರಣವೀರ್​ ಸಿಂಗ್​ಗೆ ಕನ್ನಡ ಡೈಲಾಗ್​ ಹೇಳಿಕೊಟ್ಟ ಕಿಚ್ಚ ಸುದೀಪ್​
Image
ಒಂದೇ ವೇದಿಕೆ ಮೇಲೆ ಸುದೀಪ್​, ರಣವೀರ್​, ಕಪಿಲ್​ ದೇವ್​; ‘83’ ಸುದ್ದಿಗೋಷ್ಠಿ ನೋಡಲು ಇಲ್ಲಿ ಕ್ಲಿಕ್​ ಮಾಡಿ
Image
Kichcha Sudeep: ಕ್ರಿಕೆಟ್​ ಮಾತ್ರವಲ್ಲ, ಚೆಸ್​ನಲ್ಲೂ ಘಟಾನುಘಟಿಗೆ ಪೈಪೋಟಿ ನೀಡಲು ರೆಡಿಯಾದ ಕಿಚ್ಚ ಸುದೀಪ್​

ಸುದೀಪ್ ಅವರಿಂದ ಅನೇಕ ಸಮಾಜಮುಖಿ ಕಾರ್ಯಗಳು ಆಗಿವೆ. ನಟನೆ ಮಾತ್ರವಲ್ಲದೆ ಜನಪರ ಕಾಳಜಿಯನ್ನು ತೋರಿಸಿದ ಕಾರಣದಿಂದಲೂ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಕಿಚ್ಚ ಸುದೀಪ್​ ಅವರ ಮಾತನ್ನು ಗೌರವದಿಂದ ಪಾಲಿಸುವ ಸಾಕಷ್ಟು ಜನರಿದ್ದಾರೆ. ಅದೇನೇ ಇದ್ದರೂ ಸುದೀಪ್​ ಅವರು ರಾಜಕೀಯದಿಂದ ದೂರ ಉಳಿದುಕೊಂಡಿದ್ದಾರೆ. ಈಗ ಅವರು ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಕೇಳಿಬಂದಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: Kichcha Sudeep: ಫಿನಾಲೆ ವೇದಿಕೆಯಲ್ಲಿ ಕಣ್ಣೀರು ಹಾಕಿದ ಸುದೀಪ್​; ಬಿಗ್​ ಬಾಸ್​ ಶೋನಲ್ಲಿ ಅಂಥದ್ದೇನಾಯ್ತು?

ಸೆಲೆಬ್ರಿಟಿ ಆದ್ದರಿಂದ ಕಿಚ್ಚ ಸುದೀಪ್​ ಅವರಿಗೆ ಅನೇಕ ರಾಜಕಾರಣಿಗಳ ಜೊತೆ ಒಡನಾಟ ಇರುವುದು ಸಹಜ. ಆದರೆ ಎಂದಿಗೂ ಸುದೀಪ್​ ಅವರು ನೇರವಾಗಿ ರಾಜಕೀಯಕ್ಕೆ ಇಳಿದಿಲ್ಲ. ಈಗ ಅವರ ಮನವೊಲಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ ಎಂದೆಲ್ಲ ಹೇಳಲಾಗುತ್ತಿದೆ. ಆದರೆ ಆ ಎಲ್ಲ ಅಂತೆಕಂತೆಗಳಿಗೆ ಪುರಾವೆ ಸಿಕ್ಕಿಲ್ಲ.

ಕಿಚ್ಚ ಸುದೀಪ್​ ಅವರ ಮುಂದಿನ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ. ಆದಷ್ಟು ಬೇಗ ಅವರ ಹೊಸ ಸಿನಿಮಾ ಅನೌನ್ಸ್​ ಆಗಲಿ ಎಂಬುದು ಫ್ಯಾನ್ಸ್​ ಬಯಕೆ. ‘ವಿಕ್ರಾಂತ್​ ರೋಣ’ ಚಿತ್ರ ಆಸ್ಕರ್​ ಪ್ರಶಸ್ತಿ ಪಡೆಯಲು ಪ್ರಯತ್ನಿಸುತ್ತಿದೆ. ಅದು ಕಿಚ್ಚನ ಅಭಿಮಾನಿಗಳಿಗೆ ಹೆಮ್ಮೆ ತಂದಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:54 pm, Thu, 12 January 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್