AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಿರುದ್ದ್ ಈಗ ‘ಶೆಫ್ ಚಿದಂಬರ’: ‘ಹವ್ಯಾಸಿ ಶೆಫ್’ ಸುದೀಪ್ ಸಾಥ್

Aniruddha Jatkar: ನಟ ಅನಿರುದ್ದ್ ನಟಿಸುತ್ತಿರುವ ಹೊಸ ಸಿನಿಮಾದ ಹೆಸರು, ಪೋಸ್ಟರ್ ಅನ್ನು ನಟ ಸುದೀಪ್ ಬಿಡುಗಡೆ ಮಾಡಿದ್ದಾರೆ.

ಅನಿರುದ್ದ್ ಈಗ 'ಶೆಫ್ ಚಿದಂಬರ': 'ಹವ್ಯಾಸಿ ಶೆಫ್' ಸುದೀಪ್ ಸಾಥ್
ಅನಿರುದ್ದ್
ಮಂಜುನಾಥ ಸಿ.
|

Updated on: Aug 06, 2023 | 10:24 PM

Share

ಜೊತೆ ಜೊತೆಯಲಿ’ (Jothe Jotheyali) ಧಾರಾವಾಹಿ (Serial) ಬಳಿಕ ನಟ ಅನಿರುದ್ಧ್ ಅವರ ಸೆಕೆಂಡ್ ಇನ್ನಿಂಗ್ಸ್ ಶುರುವಾದಂತಿದೆ. ಪ್ರತಿಭಾನ್ವಿತ, ಗುಡ್ ಲುಕಿಂಗ್ ನಟರಾದ ಅನಿರುದ್ಧ್ ಅವರಿಗೆ ತಕ್ಕದಾದ ಅವಕಾಶಗಳು ಅರಸಿ ಬಂದಿರಲಿಲ್ಲ. 2018 ರ ಬಳಿಕ ಯಾವುದೇ ಸಿನಿಮಾದಲ್ಲಿ ಅನಿರುದ್ಧ್ ನಟಿಸಿರಲಿಲ್ಲ. ಗಣೇಶ್ ನಟನೆಯ ‘ತ್ರಿಬಲ್ ರೈಡಿಂಗ್’ ಸಿನಿಮಾದಲ್ಲಿ ಸಣ್ಣ ಪಾತ್ರವೊಂದರಲ್ಲಿ ಅಷ್ಟೆ ಕಾಣಿಸಿಕೊಂಡಿದ್ದರು. ಆದರೆ ಈಗ ಚಿತ್ರರಂಗದಲ್ಲಿ ಮತ್ತೆ ಮುನ್ನೆಲೆಗೆ ಬರುವ ಮುನ್ಸೂಚನೆ ನೀಡಿದ್ದು, ಅನಿರುದ್ಧ್, ಹೊಸ ಸಿನಿಮಾ ಒಂದರಲ್ಲಿ ನಾಯಕರಾಗಿ ನಟಿಸುತ್ತಿದ್ದು, ಈ ಸಿನಿಮಾದ ಪೋಸ್ಟರ್ ಅನ್ನು ನಟ ಸುದೀಪ್ ಬಿಡುಗಡೆ ಮಾಡಿದ್ದಾರೆ.

ಈ ಹಿಂದೆ ‘ರಾಘು’ ಹೆಸರಿನ ಸಿನಿಮಾ ನಿರ್ದೇಶಿಸಿದ್ದ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶಿಸುತ್ತಿರುವ ಹೊಸ ಸಿನಿಮಾದಲ್ಲಿ ಅನಿರುದ್ಧ್ ನಾಯಕರಾಗಿ ನಟಿಸುತ್ತಿದ್ದಾರೆ. ಇದೀಗ ಈ ಸಿನಿಮಾದ ಪೋಸ್ಟರ್ ಅನ್ನು ಅನಿರುದ್ಧ್ ಅವರ ಮಿತ್ರರೂ, ಸ್ಟಾರ್ ನಟರೂ ಆಗಿರುವ ಸುದೀಪ್ ಬಿಡುಗಡೆ ಮಾಡಿದ್ದಾರೆ. ಅನಿರುದ್ಧ್​ರ ಹೊಸ ಸಿನಿಮಾಕ್ಕೆ “ಶೆಫ್ ಚಿದಂಬರ” ಎಂದು ಹೆಸರಿಡಲಾಗಿದೆ. ಸಿನಿಮಾದ ಪೋಸ್ಟರ್ ಕುತೂಹಲ ಹುಟ್ಟಿಸುವಂತಿದೆ.

ಶೆಫ್ ವೇಷ ತೊಟ್ಟ ಅನಿರುದ್ಧ್ ಕೈಯಲ್ಲಿ ಚಾಕುವೊಂದಿದ್ದು, ಅದಕ್ಕೆ ರಕ್ತದ ಕಲೆ ಮೆತ್ತಿದೆ. ಸಿನಿಮಾದಲ್ಲಿ ಅನಿರುದ್ಧ್ ಶೆಫ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಪೋಸ್ಟರ್​ನಿಂದ ತಿಳಿದು ಬರುತ್ತಿದೆಯಾದರೂ ಶೆಫ್​ಗೆ ಅಂಟಿದ ರಕ್ತದ ಕಲೆ ಸಿನಿಮಾ ಮರ್ಡರ್ ಮಿಸ್ಟರಿ ಇರಬಹುದೇ ಎಂಬ ಗುಮಾನಿ ಎಬ್ಬಿಸುತ್ತಿದೆ. ‘ಶೆಫ್ ಚಿದಂಬರ’ ಸಿನಿಮಾದ ಚಿತ್ರೀಕರಣ ಆಗಸ್ಟ್ 10ರಿಂದ ಬೆಂಗಳೂರಿನಲ್ಲಿ ಆರಂಭವಾಗಲಿದೆ.

ಇದನ್ನೂ ಓದಿ:Anirudh: ಕೋವಿಡ್ ಸಮಯದ ದೇವರುಗಳು ಇಂದು ರಸ್ತೆಯಲ್ಲಿದ್ದಾರೆ ಧರಣಿನಿರತ ನೌಕರರ ಪರ ಅನಿರುದ್ಧ್ ದನಿ

ರೂಪ ಡಿ.ಎನ್ ಅವರು ದಮ್ತಿ ಪಿಕ್ಚರ್ಸ್ ಅಡಿಯಲ್ಲಿ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ‘ಶೆಫ್ ಚಿದಂಬರ’ ಸಿನಿಮಾಕ್ಕೆ ಎಂ.ಆನಂದ್​ರಾಜ್ ಕತೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಗಣೇಶ್ ಪರಶುರಾಮ್ ಬರೆದಿದ್ದಾರೆ. ಉದಯಲೀಲ ಅವರ ಸಿನಿಮಾಟೊಗ್ರಫಿ ಈ ಸಿನಿಮಾಕ್ಕಿದೆ, ಸಂಗೀತ ನಿರ್ದೇಶನವನ್ನು ರಿತ್ವಿಕ್ ಮುರಳಿಧರ್ ಮಾಡಿದ್ದಾರೆ. ವಿಜೇತ್ ಚಂದ್ರ ಸಂಕಲನ, ‘ವಿಕ್ರಾಂತ್ ರೋಣ’ ಸಿನಿಮಾಕ್ಕೆ ಕೆಲಸ ಮಾಡಿದ್ದ ಆಶಿಕ್ ಕುಸುಗೊಳ್ಳಿ ಡಿ.ಐ ಆಗಿ ಈ ಸಿನಿಮಾಕ್ಕೆ ಸೇವೆ ಸಲ್ಲಿಸಲಿದ್ದಾರೆ, ಸಾಹಸ ನಿರ್ದೇಶನವನ್ನು ನರಸಿಂಹಮೂರ್ತಿ ಮಾಡಲಿದ್ದು ಮಾಧುರಿ ಪರಶುರಾಮ್ ಡ್ಯಾನ್ಸ್ ಕೊರಿಯೋಗ್ರಫಿ ಮಾಡಲಿದ್ದಾರೆ.

ಶೆಫ್ ಚಿದಂಬರ ಸಿನಿಮಾಕ್ಕೆ ನಿಧಿ ಸುಬ್ಬಯ್ಯ ಹಾಗೂ “ಲವ್ ಮಾಕ್ಟೇಲ್” ಸಿನಿಮಾದಲ್ಲಿ ನಟಿಸಿರುವ ರೆಚೆಲ್ ಡೇವಿಡ್‌ ಅವರು ನಾಯಕಿಯರಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್‌, ಶಿವಮಣಿ ಇನ್ನಿತರರು ಸಿನಿಮಾದ ಇತರೆ ಪ್ರಮುಖ ಪಾತ್ರಗಳಲ್ಲಿ ನಟಿಸಲಿದ್ದಾರೆ. ಪೋಸ್ಟರ್ ಅನಾವರಣದ ವೇಳೆ ಸುದೀಪ್ ಅವರೊಟ್ಟಿಗೆ ಅನಿರುದ್ಧ್ ಹಾಗೂ ನಿರ್ದೇಶಕ ಆಪ್ತ ಸಂಭಾಷಣೆ ನಡೆಸಿದ್ದು, ಆ ವಿಡಿಯೋವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್