AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟ್ರೇಲರ್​ಗೆ ಸಿಕ್ತು ಕಿಚ್ಚನ ಚಪ್ಪಾಳೆ

ನಟ ಕಿಚ್ಚ ಸುದೀಪ್ ಅವರು ಹೊಸ ಪ್ರಯತ್ನಗಳಿಗೆ ಬೆನ್ನು ತಟ್ಟುತ್ತಾರೆ. ಈಗ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟ್ರೇಲರ್​ ನೋಡಿ ಭೇಷ್ ಎಂದಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ಟ್ರೇಲರ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ ಅವರು ನಟಿಸಿದ್ದಾರೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಟ್ರೇಲರ್​ಗೆ ಸಿಕ್ತು ಕಿಚ್ಚನ ಚಪ್ಪಾಳೆ
Diganth Manchale (1)
ಮದನ್​ ಕುಮಾರ್​
|

Updated on:Jun 08, 2025 | 8:50 AM

Share

ಡಿಫರೆಂಟ್ ಆಗಿರುವ ಸಿನಿಮಾ ನೋಡಬೇಕು ಎಂದು ಬಯಸುತ್ತಿರುವ ಪ್ರೇಕ್ಷಕರಿಗೆಲ್ಲ ‘ಎಡಗೈಯೇ ಅಪಘಾತಕ್ಕೆ ಕಾರಣ’ (Edagaiye Apaghatakke Karana) ಸಿನಿಮಾದ ಟ್ರೇಲರ್ ಒಂದು ಭರವಸೆ ನೀಡಿದೆ. ಈ ಸಿನಿಮಾದ ಕಥೆ ಡಿಫರೆಂಟ್ ಆಗಿದೆ ಎಂಬುದು ಟ್ರೇಲರ್ ನೋಡಿದರೆ ಗೊತ್ತಾಗುತ್ತದೆ. ಕಿಚ್ಚ ಸುದೀಪ್ (Kichcha Sudeep) ಅವರ ಅಭಿಪ್ರಾಯ ಕೂಡ ಇದೇ ಆಗಿದೆ. ಟ್ರೇಲರ್ ಬಿಡುಗಡೆ ಮಾಡಿರುವ ಸುದೀಪ್ ಅವರು ಈ ಚಿತ್ರತಂಡದ ಪ್ರಯತ್ನವನ್ನು ಮೆಚ್ಚುಕೊಂಡಿದ್ದಾರೆ. ‘ಸಿನಿಮಾ ಡಿಫರೆಂಟ್ ಆಗಿದ್ದಾಗ ನೋಡಲೇಬೇಕು’ ಎಂದು ಪೋಸ್ಟ್ ಮಾಡಿರುವ ಸುದೀಪ್ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಿನಿಮಾದಲ್ಲಿ ದಿಗಂತ್ ಮಂಚಾಲೆ (Diganth Manchale), ನಿಧಿ ಸುಬ್ಬಯ್ಯ, ಧನು ಹರ್ಷ ಮಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಸಮರ್ಥ್ ಕಡ್ಕೊಳ್ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಇದು ಅವರ ಚೊಚ್ಚಲ ನಿರ್ದೇಶನದ ಸಿನಿಮಾ. ಜೊತೆಗೆ ನಿರ್ಮಾಣದ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ. ವಿಶೇಷ ಕಾನ್ಸೆಪ್ಟ್ ಇದೆ ಎಂಬ ಕಾರಣಕ್ಕೆ ಈ ಸಿನಿಮಾ ಗಮನ ಸೆಳೆದಿದೆ. ಸಿನಿಮಾದ ಕಥೆ ಏನೆಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ನೀಡಲಾಗಿದೆ.

ಇದನ್ನೂ ಓದಿ
Image
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
Image
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
Image
ರಿಷಬ್ ಶೆಟ್ಟಿ ನಟನೆಯ ಬಾಲಿವುಡ್ ಸಿನಿಮಾದ ಪೋಸ್ಟರ್ ಬಿಡುಗಡೆ
Image
ರಿಷಬ್ ಶೆಟ್ಟಿ ಮೊದಲ ಹೆಸರೇನು? ನಾಮ ಬದಲಿಸಿಕೊಳ್ಳಲು ಕಾರಣವಾಯಿತು ಆ ಘಟನೆ

ಒಂದಷ್ಟು ಕಾರಣಗಳಿಂದಾಗಿ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಿತ್ತು. ಆದರೆ ಈಗ ಈ ಚಿತ್ರ ಸಿನಿಪ್ರಿಯರ ಎದುರು ಬರಲು ಸಜ್ಜಾಗಿದೆ.

ಜೂನ್ 13ರಂದು ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಬಿಡುಗಡೆ ಆಗಲಿದೆ. ಟ್ರೇಲರ್​ನಿಂದಾಗಿ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಸುದೀಪ್ ಕೂಡ ಬೆನ್ನು ತಟ್ಟಿರುವುದರಿಂದ ಚಿತ್ರತಂಡದ ಬಲ ಹೆಚ್ಚಾಗಿದೆ.

‘ಎಡಗೈಯೇ ಅಪಘಾತಕ್ಕೆ ಕಾರಣ’ ಎಂಬ ಶೀರ್ಷಿಕೆಯೇ ಹೇಳುವ ಹಾಗೆ ಎಡಗೈ ಹೆಚ್ಚಾಗಿ ಬಳಸುವ ವ್ಯಕ್ತಿಗಳ ಕಷ್ಟದ ಬಗ್ಗೆ ಈ ಇರುವ ಸಿನಿಮಾ ಇದು. ನಿರ್ದೇಶಕ ಸಮರ್ಥ್ ಅವರು ಡಾರ್ಕ್ ಕಾಮಿಡಿ ಮೂಲಕ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ. ಈ ಚಿತ್ರದಲ್ಲಿ ದಿಗಂತ್ ಜೊತೆ ನಿಧಿ ಸುಬ್ಬಯ್ಯ ಹಾಗೂ ಧನು ಹರ್ಷ ನಟಿಸಿದ್ದಾರೆ. ‘ಪಂಚರಂಗಿ’ ಬಳಿಕ ದಿಗಂತ್ ಮತ್ತು ನಿಧಿ ಸುಬ್ಬಯ್ಯ ಒಟ್ಟಿಗೆ ತೆರೆ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರಮೇಶ್ ಅರವಿಂದ್-ದಿಗಂತ್ ಈಗ ಅಣ್ಣ-ತಮ್ಮ; ‘ದೈಜಿ’ ಚಿತ್ರದಲ್ಲಿ ಒಟ್ಟಾಗಿ ನಟನೆ

ಈ ಚಿತ್ರಕ್ಕಾಗಿ ‘ಬ್ಲಿಂಕ್’ ಮತ್ತು ‘ಶಾಖಹಾರಿ’ ಸಿನಿಮಾಗಳ ನಿರ್ಮಾಪಕರು ಕೈ ಜೋಡಿಸಿದ್ದಾರೆ. ಇಬ್ಬರು ಒಟ್ಟಿಗೆ ಸೇರಿ ಈ ಸಿನಿಮಾವನ್ನು ಬಿಡುಗಡೆ ಮಾಡುತ್ತಿದ್ದಾರೆ. ‘ಶಾಖಹಾರಿ’ ನಿರ್ಮಾಪಕ ರಾಜೇಶ್ ಕೀಳಂಬಿ, ‘ಬ್ಲಿಂಕ್’ ನಿರ್ಮಾಪಕ ರವಿಚಂದ್ರ ಅವರು ‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರವನ್ನು ನೋಡಿ ಇಷ್ಟ ಪಟ್ಟು ರಿಲೀಸ್ ಮಾಡಲು ಕೈ ಜೋಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:49 am, Sun, 8 June 25

ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಭಾರೀ ಮಳೆಯಲ್ಲೂ ಪ್ರಧಾನಿ ಮೋದಿಗೆ ಬಂಗಾಳದ ದುರ್ಗಾಪುರದಲ್ಲಿ ಭರ್ಜರಿ ಸ್ವಾಗತ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಕೆಡಿಪಿ ಸಭೆಯಲ್ಲಿ ಗಂಭೀರ ಚರ್ಚೆ, ಇತ್ತ ಧಿಕಾರಿ ರಮ್ಮಿ ಆಟದಲ್ಲಿ ಮಗ್ನ
ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ
ಮಳೆಗಾಲದಲ್ಲಿ ಮಕ್ಕಳ ಪ್ರತಿನಿತ್ಯದ ಗೋಳಿದು, ಶಾಸಕರಿಗಿಲ್ಲ ಕಾಳಜಿ