AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಅಳಿಯನ ‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್: ಇದು ಮೈಸೂರಿನ ಕ್ರೈಂ ಕಥೆ

‘ಮ್ಯಾಂಗೋ ಪಚ್ಚ’ ಸಿನಿಮಾ ಮೂಲಕ ಸಂಚಿತ್ ಸಂಜೀವ್ ಅವರು ಹೀರೋ ಆಗಿದ್ದಾರೆ. ಆಯುಧ ಪೂಜೆ ದಿನವೇ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಮೈಸೂರಿನ ಕಹಾನಿ ಇದೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಚಿತ್ರದ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಕಿಚ್ಚ ಸುದೀಪ್ ಅಳಿಯನ ‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್: ಇದು ಮೈಸೂರಿನ ಕ್ರೈಂ ಕಥೆ
Mango Pachcha
ಮದನ್​ ಕುಮಾರ್​
|

Updated on: Sep 30, 2025 | 6:54 PM

Share

‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep) ಅವರ ಕುಟುಂಬದಿಂದ ಮತ್ತೋರ್ವ ಹೀರೋ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೌದು, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ (Sanchith Sanjeev) ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಇಂದು (ಸೆಪ್ಟೆಂಬರ್ 30) ಬಿಡುಗಡೆ ಆಗಿದೆ. ಅಕ್ಕನ ಮಗನ ಮೊದಲ ಸಿನಿಮಾದ ಟೀಸರ್ (Mango Pachcha Teaser) ಅನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ. ಆಯುಧ ಪೂಜೆಯ ದಿನವೇ ಸಂಚಿತ್ ನಟನೆಯ ಚೊಚ್ಚಲ ಸಿನಿಮಾದ ಟೀಸರ್ ರಿಲೀಸ್ ಆಗಿರುವುದು ವಿಶೇಷ.

‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಮೈಸೂರು ಭಾಗದ ಕಹಾನಿ ಇದೆ. ಈಗ ಅದ್ದೂರಿಯಾಗಿ ದಸರಾ ಹಬ್ಬ ನಡೆಯುತ್ತಿದೆ. ಈ ಸಂಭ್ರಮದ ನಡುವೆಯೇ ‘ಮ್ಯಾಂಗೋ ಪಚ್ಚ’ ಟೀಸರ್ ಮೂಲಕ ಮೈಸೂರು ಭಾಗದ ಕಥೆಯ ಝಲಕ್ ತೋರಿಸಲಾಗಿದೆ. ಈ ಮೊದಲು ಬಂದಿದ್ದ ಇಂಟ್ರಡಕ್ಷನ್ ಟೀಸರ್​​ನಲ್ಲಿ ಸಂಚಿತ್ ಅವರ ರೆಟ್ರೋ ಲುಕ್‌ ಗಮನ ಸೆಳೆದಿತ್ತು. ಈಗ ಟೀಸರ್ ಸದ್ದು ಮಾಡುತ್ತಿದೆ.

ಮೈಸೂರಿನಲ್ಲೇ ‘ಮ್ಯಾಂಗೋ ಪಚ್ಚ’ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಕ್ರೈಂ ಥ್ರಿಲ್ಲರ್ ಕಹಾನಿಯನ್ನು ಈ ಚಿತ್ರ ಹೊಂದಿದೆ. ಮಾವ ಕಿಚ್ಚ ಸುದೀಪ್ ರೀತಿಯೇ ಸಂಚಿತ್ ಕೂಡ ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುವ ಲಕ್ಷಣಗಳು ಕಾಣುತ್ತಿವೆ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಇದು ವಿವೇಕ ಅವರ ಚೊಚ್ಚಲ ನಿರ್ದೇಶನದ ಸಿನಿಮಾ.

‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್:

2001ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ‘ಮ್ಯಾಗೋ ಪಚ್ಚ’ ಸಿನಿಮಾದಲ್ಲಿವೆ. ಈ ಚಿತ್ರಕ್ಕೆ ಕೆಆರ್‌ಜಿ ಮತ್ತು ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ಬಂಡವಾಳ ಹೂಡಿವೆ. ಪ್ರಿಯಾ ಸುದೀಪ್, ಕಾರ್ತಿಕ್, ಯೋಗಿ ಜಿ. ರಾಜ್ ಅವರು ನಿರ್ಮಾಪಕರಾಗಿದ್ದಾರೆ. ಟೀಸರ್ ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಚಂದ್ರಪ್ರಭ ಕೆಟ್ಟದಾಗಿ ಕಾಮಿಡಿ ಮಾಡ್ತಾರೆ’; ಸುದೀಪ್ ಎದುರೇ ಹೇಳಿದ ಡಾಗ್ ಸತೀಶ್

ನಟಿ ಕಾಜಲ್ ಕುಂದರ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ಮಾಲಾಶ್ರೀ, ಬಿಗ್ ಬಾಸ್ ಖ್ಯಾತಿಯ ನಟಿ ಹಂಸ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಅವರು ಛಾಯಾಗ್ರಾಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್