AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿಚ್ಚ ಸುದೀಪ್ ಅಳಿಯನ ‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್: ಇದು ಮೈಸೂರಿನ ಕ್ರೈಂ ಕಥೆ

‘ಮ್ಯಾಂಗೋ ಪಚ್ಚ’ ಸಿನಿಮಾ ಮೂಲಕ ಸಂಚಿತ್ ಸಂಜೀವ್ ಅವರು ಹೀರೋ ಆಗಿದ್ದಾರೆ. ಆಯುಧ ಪೂಜೆ ದಿನವೇ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾದಲ್ಲಿ ಮೈಸೂರಿನ ಕಹಾನಿ ಇದೆ. ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಲಾಗಿದೆ. ಚಿತ್ರದ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಕಿಚ್ಚ ಸುದೀಪ್ ಅಳಿಯನ ‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್: ಇದು ಮೈಸೂರಿನ ಕ್ರೈಂ ಕಥೆ
Mango Pachcha
ಮದನ್​ ಕುಮಾರ್​
|

Updated on: Sep 30, 2025 | 6:54 PM

Share

‘ಅಭಿನಯ ಚಕ್ರವರ್ತಿ’ ಕಿಚ್ಚ ಸುದೀಪ್ (Kichcha Sudeep) ಅವರ ಕುಟುಂಬದಿಂದ ಮತ್ತೋರ್ವ ಹೀರೋ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಹೌದು, ಸುದೀಪ್ ಅವರ ಅಕ್ಕನ ಮಗ ಸಂಚಿತ್ ಸಂಜೀವ್ (Sanchith Sanjeev) ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಹೀರೋ ಆಗಿ ನಟಿಸಿದ್ದಾರೆ. ಈ ಸಿನಿಮಾದ ಟೀಸರ್ ಇಂದು (ಸೆಪ್ಟೆಂಬರ್ 30) ಬಿಡುಗಡೆ ಆಗಿದೆ. ಅಕ್ಕನ ಮಗನ ಮೊದಲ ಸಿನಿಮಾದ ಟೀಸರ್ (Mango Pachcha Teaser) ಅನ್ನು ಕಿಚ್ಚ ಸುದೀಪ್ ಅವರು ಬಿಡುಗಡೆ ಮಾಡಿದ್ದಾರೆ. ಆಯುಧ ಪೂಜೆಯ ದಿನವೇ ಸಂಚಿತ್ ನಟನೆಯ ಚೊಚ್ಚಲ ಸಿನಿಮಾದ ಟೀಸರ್ ರಿಲೀಸ್ ಆಗಿರುವುದು ವಿಶೇಷ.

‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ಮೈಸೂರು ಭಾಗದ ಕಹಾನಿ ಇದೆ. ಈಗ ಅದ್ದೂರಿಯಾಗಿ ದಸರಾ ಹಬ್ಬ ನಡೆಯುತ್ತಿದೆ. ಈ ಸಂಭ್ರಮದ ನಡುವೆಯೇ ‘ಮ್ಯಾಂಗೋ ಪಚ್ಚ’ ಟೀಸರ್ ಮೂಲಕ ಮೈಸೂರು ಭಾಗದ ಕಥೆಯ ಝಲಕ್ ತೋರಿಸಲಾಗಿದೆ. ಈ ಮೊದಲು ಬಂದಿದ್ದ ಇಂಟ್ರಡಕ್ಷನ್ ಟೀಸರ್​​ನಲ್ಲಿ ಸಂಚಿತ್ ಅವರ ರೆಟ್ರೋ ಲುಕ್‌ ಗಮನ ಸೆಳೆದಿತ್ತು. ಈಗ ಟೀಸರ್ ಸದ್ದು ಮಾಡುತ್ತಿದೆ.

ಮೈಸೂರಿನಲ್ಲೇ ‘ಮ್ಯಾಂಗೋ ಪಚ್ಚ’ ಸಿನಿಮಾದ ಶೂಟಿಂಗ್ ಮಾಡಲಾಗಿದೆ. ಕ್ರೈಂ ಥ್ರಿಲ್ಲರ್ ಕಹಾನಿಯನ್ನು ಈ ಚಿತ್ರ ಹೊಂದಿದೆ. ಮಾವ ಕಿಚ್ಚ ಸುದೀಪ್ ರೀತಿಯೇ ಸಂಚಿತ್ ಕೂಡ ಚಿತ್ರರಂಗದಲ್ಲಿ ಸ್ಟಾರ್ ಆಗಿ ಮೆರೆಯುವ ಲಕ್ಷಣಗಳು ಕಾಣುತ್ತಿವೆ ಎಂದು ಫ್ಯಾನ್ಸ್ ಕಮೆಂಟ್ ಮಾಡುತ್ತಿದ್ದಾರೆ. ಇದು ವಿವೇಕ ಅವರ ಚೊಚ್ಚಲ ನಿರ್ದೇಶನದ ಸಿನಿಮಾ.

‘ಮ್ಯಾಂಗೋ ಪಚ್ಚ’ ಸಿನಿಮಾ ಟೀಸರ್:

2001ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ‘ಮ್ಯಾಗೋ ಪಚ್ಚ’ ಸಿನಿಮಾದಲ್ಲಿವೆ. ಈ ಚಿತ್ರಕ್ಕೆ ಕೆಆರ್‌ಜಿ ಮತ್ತು ಕಿಚ್ಚ ಸುದೀಪ್ ಅವರ ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ಬಂಡವಾಳ ಹೂಡಿವೆ. ಪ್ರಿಯಾ ಸುದೀಪ್, ಕಾರ್ತಿಕ್, ಯೋಗಿ ಜಿ. ರಾಜ್ ಅವರು ನಿರ್ಮಾಪಕರಾಗಿದ್ದಾರೆ. ಟೀಸರ್ ನೋಡಿದ ಬಳಿಕ ಸಿನಿಮಾ ಮೇಲಿನ ನಿರೀಕ್ಷೆ ಹೆಚ್ಚಿದೆ.

ಇದನ್ನೂ ಓದಿ: ‘ಚಂದ್ರಪ್ರಭ ಕೆಟ್ಟದಾಗಿ ಕಾಮಿಡಿ ಮಾಡ್ತಾರೆ’; ಸುದೀಪ್ ಎದುರೇ ಹೇಳಿದ ಡಾಗ್ ಸತೀಶ್

ನಟಿ ಕಾಜಲ್ ಕುಂದರ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾಗೆ ನಾಯಕಿ ಆಗಿದ್ದಾರೆ. ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್, ಮಾಲಾಶ್ರೀ, ಬಿಗ್ ಬಾಸ್ ಖ್ಯಾತಿಯ ನಟಿ ಹಂಸ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಚರಣ್ ರಾಜ್ ಅವರು ಸಂಗೀತ ನೀಡಿದ್ದಾರೆ. ಶೇಖರ್ ಚಂದ್ರ ಅವರು ಛಾಯಾಗ್ರಾಹಣ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ