Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ಇದಕ್ಕೆ ಸುದೀಪ್​ ಉತ್ತರಿಸಿದ್ದಾರೆ.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ
ಸುದೀಪ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Oct 14, 2021 | 1:58 PM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಇಂದು (ಅಕ್ಟೋಬರ್​ 14) ರಿಲೀಸ್​ ಆಗಿಲ್ಲ. ಇದಕ್ಕೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಕೆಲವೆಡೆ ಚಿತ್ರಮಂದಿರಗಳ ಮೇಲೆ ಕಲ್ಲು ತೂರಾಟ ಮಾಡಿದ ಬಗ್ಗೆಯೂ ವರದಿ ಆಗಿದೆ. ಹಾಗಾದರೆ, ಇಂದು ಸಿನಿಮಾ ರಿಲೀಸ್​ ಆಗದೇ ಇರೋಕೆ ಕಾರಣವಾಗಿದ್ದು ಯಾರು? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಹೀಗಿರುವಾಗಲೇ ಸುದೀಪ್​ ಅವರು ವಿಶೇಷ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ.

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದು ಕೋರಿದ್ದರು ಅವರು.

ಈ ವಿಡಿಯೋಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದಾರೆ.

ಇದನ್ನೂ ಓದಿ: Kotigobba 3: ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಪ್ರದರ್ಶನ ರದ್ದು; ಕೆರಳಿದ ಅಭಿಮಾನಿಗಳಿಂದ ವಿಜಯಪುರದಲ್ಲಿ ದಾಂಧಲೆ

Kichcha Sudeep: ‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನೆಲೆ; ಫ್ಯಾನ್ಸ್ ಬಳಿ ಕ್ಷಮೆ ಕೋರಿದ ಕಿಚ್ಚ ಸುದೀಪ್

‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
‘ಗ್ಲೋಬಲ್ ಕನ್ನಡಿ’ಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
Daily Horoscope: ಸೂರ್ಯ ಮೀನ ರಾಶಿಗೆ, ಚಂದ್ರ ಮಿಥುನ ರಾಶಿಯಲ್ಲಿ ಸಂಚಾರ
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್
‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್