AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ಇದಕ್ಕೆ ಸುದೀಪ್​ ಉತ್ತರಿಸಿದ್ದಾರೆ.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ
ಸುದೀಪ್
TV9 Web
| Edited By: |

Updated on: Oct 14, 2021 | 1:58 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಇಂದು (ಅಕ್ಟೋಬರ್​ 14) ರಿಲೀಸ್​ ಆಗಿಲ್ಲ. ಇದಕ್ಕೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಕೆಲವೆಡೆ ಚಿತ್ರಮಂದಿರಗಳ ಮೇಲೆ ಕಲ್ಲು ತೂರಾಟ ಮಾಡಿದ ಬಗ್ಗೆಯೂ ವರದಿ ಆಗಿದೆ. ಹಾಗಾದರೆ, ಇಂದು ಸಿನಿಮಾ ರಿಲೀಸ್​ ಆಗದೇ ಇರೋಕೆ ಕಾರಣವಾಗಿದ್ದು ಯಾರು? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಹೀಗಿರುವಾಗಲೇ ಸುದೀಪ್​ ಅವರು ವಿಶೇಷ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ.

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದು ಕೋರಿದ್ದರು ಅವರು.

ಈ ವಿಡಿಯೋಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದಾರೆ.

ಇದನ್ನೂ ಓದಿ: Kotigobba 3: ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಪ್ರದರ್ಶನ ರದ್ದು; ಕೆರಳಿದ ಅಭಿಮಾನಿಗಳಿಂದ ವಿಜಯಪುರದಲ್ಲಿ ದಾಂಧಲೆ

Kichcha Sudeep: ‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನೆಲೆ; ಫ್ಯಾನ್ಸ್ ಬಳಿ ಕ್ಷಮೆ ಕೋರಿದ ಕಿಚ್ಚ ಸುದೀಪ್

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್