AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ಇದಕ್ಕೆ ಸುದೀಪ್​ ಉತ್ತರಿಸಿದ್ದಾರೆ.

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ
ಸುದೀಪ್
TV9 Web
| Edited By: |

Updated on: Oct 14, 2021 | 1:58 PM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಸಿನಿಮಾ ಇಂದು (ಅಕ್ಟೋಬರ್​ 14) ರಿಲೀಸ್​ ಆಗಿಲ್ಲ. ಇದಕ್ಕೆ ಅನೇಕರು ಆಕ್ರೋಶ ಹೊರಹಾಕಿದ್ದಾರೆ. ಕೆಲವೆಡೆ ಚಿತ್ರಮಂದಿರಗಳ ಮೇಲೆ ಕಲ್ಲು ತೂರಾಟ ಮಾಡಿದ ಬಗ್ಗೆಯೂ ವರದಿ ಆಗಿದೆ. ಹಾಗಾದರೆ, ಇಂದು ಸಿನಿಮಾ ರಿಲೀಸ್​ ಆಗದೇ ಇರೋಕೆ ಕಾರಣವಾಗಿದ್ದು ಯಾರು? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಹೀಗಿರುವಾಗಲೇ ಸುದೀಪ್​ ಅವರು ವಿಶೇಷ ವಿಡಿಯೋ ಸಂದೇಶ ಹರಿಬಿಟ್ಟಿದ್ದಾರೆ.

ಸಿನಿಮಾ ರಿಲೀಸ್​ ಆಗದ ಬಗ್ಗೆ ಸಿನಿಮಾ ನಿರ್ಮಾಪಕ ಸೂರಪ್ಪ ಬಾಬು ಅವರು ವಿಡಿಯೋ ಒಂದನ್ನು ಮಾಡಿ ಹರಿಬಿಟ್ಟಿದ್ದರು. ‘ಕನ್ನಡ ಕಲಾಭಿಮಾನಿಗಳಲ್ಲಿ ಹಾಗೂ ಕಿಚ್ಚ ಸುದೀಪ್​ ಅಭಿಮಾನಿಗಳಲ್ಲಿ ಮನವಿ. ವಿತರಕರು ಮಾಡಿದ ಮೋಸದಿಂದ ‘ಕೋಟಿಗೊಬ್ಬ 3’ ರಿಲೀಸ್​ ಮಾಡೋಕೆ ಆಗ್ತಿಲ್ಲ. ಎಂದಿನಂತೆ ಶುಕ್ರವಾರದಿಂದ (ಅಕ್ಟೋಬರ್​ 15) ಬೆಳಗ್ಗೆ 6 ಗಂಟೆಯಿಂದ ಶೋ ಪ್ರಸಾರವಾಗಲಿದೆ. ತಾವು ಸಹಕರಿಸಿ. ಸುದೀಪ್​ ಅವರೇ ನಿಮ್ಮ ಬಳಿಯೂ ಕ್ಷಮೆ ಕೇಳುತ್ತೇನೆ. ಈ ಬಗ್ಗೆ ಟ್ವೀಟ್​ ಮಾಡಿ’ ಎಂದು ಕೋರಿದ್ದರು ಅವರು.

ಈ ವಿಡಿಯೋಗೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದಾರೆ.

ಇದನ್ನೂ ಓದಿ: Kotigobba 3: ಬಹುನಿರೀಕ್ಷಿತ ‘ಕೋಟಿಗೊಬ್ಬ 3’ ಚಿತ್ರದ ಪ್ರದರ್ಶನ ರದ್ದು; ಕೆರಳಿದ ಅಭಿಮಾನಿಗಳಿಂದ ವಿಜಯಪುರದಲ್ಲಿ ದಾಂಧಲೆ

Kichcha Sudeep: ‘ಕೋಟಿಗೊಬ್ಬ 3’ ಬಿಡುಗಡೆಯಾಗದ ಹಿನ್ನೆಲೆ; ಫ್ಯಾನ್ಸ್ ಬಳಿ ಕ್ಷಮೆ ಕೋರಿದ ಕಿಚ್ಚ ಸುದೀಪ್

Follow Us
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್