AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಷ್ಣುವರ್ಧನ್ ಬರ್ತ್​ಡೇಗೆ ಕಾಮನ್ ಡಿಪಿ ಅನಾವರಣ ಮಾಡಿದ ಕಿಚ್ಚ ಸುದೀಪ್

ಸುದೀಪ್ ಅವರು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಮೊದಲಿನಿಂದಲೂ ಅವರನ್ನು ಅನುಸರಿಸುತ್ತಾ ಬರುತ್ತಿದ್ದಾರೆ. ‘ವಿಷ್ಣುವರ್ಧನ್’ ಹೆಸರಿನ ಸಿನಿಮಾ ಕೂಡ ಮಾಡಿದ್ದು, ಈ ಚಿತ್ರದಲ್ಲಿ ಅವರು ವಿಷ್ಣುವಿನ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದರು.

ವಿಷ್ಣುವರ್ಧನ್ ಬರ್ತ್​ಡೇಗೆ ಕಾಮನ್ ಡಿಪಿ ಅನಾವರಣ ಮಾಡಿದ ಕಿಚ್ಚ ಸುದೀಪ್
ವಿಷ್ಣುವರ್ಧನ್
ರಾಜೇಶ್ ದುಗ್ಗುಮನೆ
|

Updated on: Sep 18, 2023 | 8:21 AM

Share

ನಟ ವಿಷ್ಣುವರ್ಧನ್ ಅವರಿಗೆ ಇಂದು (ಸೆಪ್ಟೆಂಬರ್ 18) ಜನ್ಮದಿನ. ಅವರು ಇಂದು ನಮ್ಮೊಂದಿಗೆ ಇಲ್ಲ ಎಂಬ ನೋವಿನ ಮಧ್ಯೆಯೂ ಅವರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಹಲವು ರೀತಿಯಲ್ಲಿ ಸಾಮಾಜಿಕ ಕೆಲಸ ಮಾಡಲಾಗುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ವಿಷ್ಣುವರ್ಧನ್ (Vishnuvardhan) ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಈ ಮಧ್ಯೆ ಕಿಚ್ಚ ಸುದೀಪ್ ಅವರು ವಿಷ್ಣು ಅವರ ‘ಕಾಮನ್ ಡಿಪಿ’ ಬಿಡುಗಡೆ’ ಮಾಡಿದ್ದಾರೆ. ಸದ್ಯ ಎಲ್ಲರೂ ಈ ಫೋಟೋನ ಪ್ರಾಫೈಲ್ ಪಿಕ್ಚರ್​ಗೆ ಹಾಕಿಕೊಂಡು ಸಂಭ್ರಮಿಸುತ್ತಿದ್ದಾರೆ.

ವಿಷ್ಣುವರ್ಧನ್ ಅವರಿಗೆ ಸಾಹಸ ಸಿಂಹ ಎಂಬ ಬಿರುದು ಇದೆ. ಈ ಕಾರಣದಿಂದ ಅದೇ ಥೀಮ್​ನಲ್ಲಿ ಕಾಮನ್ ಡಿಪಿ ಸಿದ್ಧಪಡಿಸಲಾಗಿದೆ. ಸಿಂಹದ ಮುಖ ಇರುವ ಆಸನದ ಮೇಲೆ ವಿಷ್ಣು ಕುಳಿತಿದ್ದಾರೆ. ಅವರ ಅಭಿಮಾನಿಗಳು ಜನರಿದ್ದಾರೆ. ‘ಹ್ಯಾಪಿ ಬರ್ತ್​ಡೇ ಯಜಮಾನ್ರೆ’ ಎಂದು ಕೆಳ ಭಾಗದಲ್ಲಿ ಬರೆಯಲಾಗಿದೆ. ಸುದೀಪ್ ಅವರು ಇದನ್ನು ಅನಾವರಣ ಮಾಡಿ ವಿಷ್ಣುವರ್ಧನ್ ಅವರಿಗೆ ಬರ್ತ್​ಡೇ ಶುಭಾಶಯ ತಿಳಿಸಿದ್ದಾರೆ.

‘ನಮ್ಮ ಪ್ರೀತಿಯ ವಿಷ್ಣು ಸರ್ ಅವರ ಸಿಡಿಪಿ ಬಿಡುಗಡೆ ಮಾಡಲು ತುಂಬಾ ಖುಷಿಯಿದೆ. ಅವರ ಎಲ್ಲಾ ಅಭಿಮಾನಿಗಳಿಗೆ ದೊಡ್ಡ ದಿನ’ ಎಂದು ಸುದೀಪ್ ಬರೆದುಕೊಂಡಿದ್ದಾರೆ. ಸದ್ಯ ಈ ಟ್ವೀಟ್​ನ ಅಭಿಮಾನಿಗಳು ರೀಟ್ವೀಟ್ ಮಾಡಿಕೊಳ್ಳುತ್ತಿದ್ದಾರೆ.

ಸುದೀಪ್ ಅವರು ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಮೊದಲಿನಿಂದಲೂ ಅವರನ್ನು ಅನುಸರಿಸುತ್ತಾ ಬರುತ್ತಿದ್ದಾರೆ. ‘ವಿಷ್ಣುವರ್ಧನ್’ ಹೆಸರಿನ ಸಿನಿಮಾ ಕೂಡ ಮಾಡಿದ್ದು, ಈ ಚಿತ್ರದಲ್ಲಿ ಅವರು ವಿಷ್ಣುವಿನ ಅಭಿಮಾನಿಯಾಗಿ ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಒಂದೇ ದಿನ ಕನ್ನಡದ ಮೂವರು ಸ್ಟಾರ್ ಕಲಾವಿದರ ಬರ್ತ್​ಡೇ; ಸಿನಿಪ್ರಿಯರಿಗೆ ಈ ದಿನ ಸಖತ್ ವಿಶೇಷ

ವಿಷ್ಣುವರ್ಧನ್ ಅವರು ‘ನಾಗರಹಾವು’ ಸಿನಿಮಾ ಮೂಲಕ ಫೇಮಸ್ ಆದರು. ಅವರು ಹೀರೋ ಆಗಿ ಗಮನ ಸೆಳೆದರು. ಆ ಬಳಿಕ ಅವರು ಸಾಲು ಸಾಲು ಹಿಟ್ ಸಿನಿಮಾ ನೀಡಿದರು. ಚಿತ್ರರಂಗದ ಬೇಡಿಕೆಯ ಹೀರೋ ಎನಿಸಿಕೊಂಡರು. 2009ರ ಡಿಸೆಂಬರ್ 30ರಂದು ವಿಷ್ಣು ನಿಧನ ಹೊಂದಿದರು. 2010ರಲ್ಲಿ ಅವರ ನಟನೆಯ ಕೊನೆಯ ಸಿನಿಮಾ ‘ಆಪ್ತರಕ್ಷಕ’ ಚಿತ್ರ ರಿಲೀಸ್ ಆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್