Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್
ಸುದೀಪ್
Follow us
|

Updated on: Jun 17, 2024 | 8:06 AM

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಮಾಧ್ಯಮದ ಎದುರು ಬಂದಿರಲಿಲ್ಲ. ಇತ್ತೀಚೆಗೆ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್​ಗೆ ಅವರು ಆಗಮಿಸಿದ್ದರು. ಕಾರ್ತಿಕ್ ತಂಡಕ್ಕೆ ಅವರು ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಆ ಬಳಿಕ ಮಾಧ್ಯಮದ ಜೊತೆ ಮಾತಿಗೆ ಸಿಕ್ಕರು. ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಇದೇ ವೇಳೆ ಅವರು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್​ ವೇಳೆಗೆ ರಿಲೀಸ್ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆಯಂತೆ. ‘ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್​ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್. ಕೆಲಸ ಸ್ವಲ್ಪ ವಿಳಂಬ ಆದರೂ ಸೆಪ್ಟೆಂಬರ್ ವೇಳೆಗೆ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: ಭರ್ಜರಿ ಅಪ್​ಡೇಟ್ ಕೊಟ್ಟ ಸುದೀಪ್: ‘ಮ್ಯಾಕ್ಸ್’ ಸಿನಿಮಾ ಚಿತ್ರೀಕರಣ ಮುಕ್ತಾಯ

‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡು, ಸುಕೃತಾ ವಾಘ್ಲೆ, ಪ್ರಮೋದ್ ಶೆಟ್ಟಿ, ಇಳವರಸು ಮೊದಲಾದವರು ನಟಿಸಿದ್ದಾರೆ. ಕಲೈಪುಲಿ ಎಸ್​. ಧನು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ತಾಜಾ ಸುದ್ದಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Devotional: ತಥಾಸ್ತು ದೇವತೆಗಳ ಬಗ್ಗೆ ತಿಳಿಯಲು ಈ ವಿಡಿಯೋ ನೋಡಿ
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
Daily Horoscope: ವಾಹನದಿಂದ ಅಪಘಾತ, ಸಣ್ಣ ಅಂತರದಿಂದ ಬಚಾವ್
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?