AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ.

Max Movie: ‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ? ಸಿಹಿಸುದ್ದಿ ಕೊಟ್ಟ ಕಿಚ್ಚ ಸುದೀಪ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Jun 17, 2024 | 8:06 AM

Share

ಕಿಚ್ಚ ಸುದೀಪ್ (Kichcha Sudeep) ಅವರು ಇತ್ತೀಚೆಗೆ ಮಾಧ್ಯಮದ ಎದುರು ಬಂದಿರಲಿಲ್ಲ. ಇತ್ತೀಚೆಗೆ ಕಾರ್ತಿಕ್ ಮಹೇಶ್ ನಟನೆಯ ‘ರಾಮರಸ’ ಲಾಂಚ್​ಗೆ ಅವರು ಆಗಮಿಸಿದ್ದರು. ಕಾರ್ತಿಕ್ ತಂಡಕ್ಕೆ ಅವರು ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಆ ಬಳಿಕ ಮಾಧ್ಯಮದ ಜೊತೆ ಮಾತಿಗೆ ಸಿಕ್ಕರು. ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು ಸಂತ್ರಸ್ತರ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು. ಇದೇ ವೇಳೆ ಅವರು ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಸುದೀಪ್ ಅವರು ಒಂದು ಬ್ರೇಕ್ ಪಡೆದಿದ್ದರು. ರಾಜಕೀಯ ಪ್ರಚಾರದಲ್ಲೂ ಭಾಗಿ ಆದರು. ಹೀಗಾಗಿ, ಅವರ ಸಿನಿಮಾ ತೆರೆಮೇಲೆ ಬರದೆ ಎರಡು ವರ್ಷಗಳು ಕಳೆದಿವೆ. ಈಗ ಸುದೀಪ್ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅವರು ಚಿತ್ರದ ಬಗ್ಗೆ ಅಪ್​ಡೇಟ್ ನೀಡಿದ್ದಾರೆ. ಸಿನಿಮಾ ಆಗಸ್ಟ್​ ವೇಳೆಗೆ ರಿಲೀಸ್ ಆಗಲಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಚಿತ್ರದ ಡಬ್ಬಿಂಗ್ ಕೆಲಸ ಪೂರ್ಣಗೊಂಡಿದೆಯಂತೆ. ‘ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಆಗಸ್ಟ್​ನಲ್ಲಿ ಸಿನಿಮಾ ಬರಬಹುದು ಅಂದುಕೊಂಡಿದ್ದೇವೆ’ ಎಂದಿದ್ದಾರೆ ಸುದೀಪ್. ಕೆಲಸ ಸ್ವಲ್ಪ ವಿಳಂಬ ಆದರೂ ಸೆಪ್ಟೆಂಬರ್ ವೇಳೆಗೆ ಚಿತ್ರವನ್ನು ಕಣ್ತುಂಬಿಕೊಳ್ಳಬಹುದು. ಈ ವಿಚಾರ ಕೇಳಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

ಇದನ್ನೂ ಓದಿ: ಭರ್ಜರಿ ಅಪ್​ಡೇಟ್ ಕೊಟ್ಟ ಸುದೀಪ್: ‘ಮ್ಯಾಕ್ಸ್’ ಸಿನಿಮಾ ಚಿತ್ರೀಕರಣ ಮುಕ್ತಾಯ

‘ಮ್ಯಾಕ್ಸ್’ ಚಿತ್ರಕ್ಕೆ ವಿಜಯ್ ಕಾರ್ತಿಕೇಯ ಅವರು ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್, ವರಲಕ್ಷ್ಮಿ ಶರತ್​ಕುಮಾರ್, ಸಂಯುಕ್ತಾ ಹೊರನಾಡು, ಸುಕೃತಾ ವಾಘ್ಲೆ, ಪ್ರಮೋದ್ ಶೆಟ್ಟಿ, ಇಳವರಸು ಮೊದಲಾದವರು ನಟಿಸಿದ್ದಾರೆ. ಕಲೈಪುಲಿ ಎಸ್​. ಧನು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಈ ಚಿತ್ರದಲ್ಲಿ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು