AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಕಿಚ್ಚ ಸುದೀಪ್​ ಧರಿಸೋ ವಾಚ್​ ಬೆಲೆ ಎಷ್ಟು ಕೋಟಿ ರೂಪಾಯಿ ಗೊತ್ತಾ?

ಸುದೀಪ್​ ಧರಿಸಿದ್ದ ವಾಚ್​ ರಿಚರ್ಡ್​ ಮಿಲ್ಲೆ (Richard Mille) ಕಂಪೆನಿಗೆ ಸೇರಿದ್ದಾಗಿದೆ. ಸ್ವಿಸ್​ ಮೂಲದ ಈ ಕಂಪೆನಿ 2001ರಲ್ಲಿ ಸ್ಥಾಪನೆಗೊಂಡಿತ್ತು.

Kichcha Sudeep: ಕಿಚ್ಚ ಸುದೀಪ್​ ಧರಿಸೋ ವಾಚ್​ ಬೆಲೆ ಎಷ್ಟು ಕೋಟಿ ರೂಪಾಯಿ ಗೊತ್ತಾ?
ಸದೀಪ್ ಧರಿಸಿದ ವಾಚ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 4:08 PM

Share

ಸೆಲೆಬ್ರಿಟಿಗಳು ಧರಿಸುವ ಬಟ್ಟೆಯಿಂದ ಹಿಡಿದು ಅವರು ಹಾಕುವ ವಾಚ್, ಶೂ, ಚೈನ್​ ಮತ್ತಿತ್ಯಾದಿ ವಿಚಾರಗಳು ಫ್ಯಾನ್ಸ್​ ಗಮನ ಸೆಳೆಯುತ್ತಲೇ ಇರುತ್ತವೆ. ಸೆಲೆಬ್ರಿಟಿಗಳು ಸ್ಪೋರ್ಟ್ಸ್​ ಬಟ್ಟೆ ತೊಟ್ಟು ಜಿಮ್​ಗೆ ಹೋದರೆ ಅದರ ಬೆಲೆಯನ್ನು ಹುಡುಕಿ, ಸಾಮಾಜಿಕ ಜಾಲತಾಣದಲ್ಲಿ ಹಾಕಿ ಅಚ್ಚರಿ ಹೊರ ಹಾಕುವವರ ಪಟ್ಟಿ ದೊಡ್ಡದಿದೆ. ಈಗ ಇಂಥದ್ದೇ ವಿಚಾರಕ್ಕೆ ಕಿಚ್ಚ ಸುದೀಪ್​ ಸುದ್ದಿಯಾಗಿದ್ದಾರೆ. ಅವರು ಧರಿಸಿದ ದುಬಾರಿ ಬೆಲೆಯ ವಾಚ್​ ಎಲ್ಲರ ಕಣ್ಣು ಕುಕ್ಕಿದೆ. ಕಿಚ್ಚ ಸುದೀಪ್​ ಕಾರು ಹಾಗೂ ಬೈಕ್​ಗಳ ಬಗ್ಗೆ ಕ್ರೇಜ್​ ಹೊಂದಿದ್ದಾರೆ. ಅವರ ಕಾರ್​​ ಕಲೆಕ್ಷನ್​ ಎಲ್ಲರ ಗಮನ ಸೆಳೆಯುವಂಥದ್ದು. ಇದರ ಜತೆಗೆ ಅವರು ವಾಚ್​ ಪ್ರಿಯರು! ಅವರ ಬಳಿ ಸಾಕಷ್ಟು ದುಬಾರಿ ವಾಚ್​ಗಳಿವೆ ಅನ್ನೋದು ವಿಶೇಷ. ಇತ್ತೀಚೆಗೆ ಅವರು ಧರಿಸಿದ್ದ ವಾಚ್​ ಒಂದು ಎಲ್ಲರ ಗಮನ ಸೆಳೆದಿದೆ.

ಕಿಚ್ಚ ಸುದೀಪ್​ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ. ಇದೇ ವಿಶೇಷ ದಿನದಂದು ಕನ್ನಡ ಸಂಘಟನೆಗಳೆಲ್ಲ ಸೇರಿ ಸುದೀಪ್​ಗೆ ಸನ್ಮಾನ ಮಾಡಿದ್ದವು. ಈ ವೇಳೆ ಸುದೀಪ್​ ಧರಿಸಿದ್ದ ವಾಚ್​ ಎಲ್ಲರ ಗಮನ ಸೆಳೆದಿದೆ. ಅವರು ಧರಿಸಿದ್ದ ವಾಚ್​ ಯಾವುದು? ಇದರ ಬೆಲೆ ಎಷ್ಟು ಎನ್ನುವ ಬಗ್ಗೆ ಅಭಿಮಾನಿಗಳು ಗೂಗಲ್​ನಲ್ಲಿ ಸರ್ಚ್​ ಮಾಡಿದ್ದಾರೆ.

ಸುದೀಪ್​ ಧರಿಸಿದ್ದ ವಾಚ್​ ರಿಚರ್ಡ್​ ಮಿಲ್ಲೆ (Richard Mille) ಕಂಪೆನಿಗೆ ಸೇರಿದ್ದಾಗಿದೆ. ಸ್ವಿಸ್​ ಮೂಲದ ಈ ಕಂಪೆನಿ 2001ರಲ್ಲಿ ಸ್ಥಾಪನೆಗೊಂಡಿತ್ತು. ಐಷಾರಾಮಿ ವಾಚ್​ಗಳನ್ನು ಸಿದ್ಧಪಡಿಸೋದಕ್ಕೆ ಈ ಕಂಪೆನಿ ಹೆಸರುವಾಸಿಯಾಗಿದೆ.

ಸುದೀಪ್​ ಧರಿಸಿರೋ ವಾಚ್​ ಬೆಲೆ 1.5 ಕೋಟಿ ರೂಪಾಯಿ ಇದೆ ಎಂದು ಅಂದಾಜಿಸಲಾಗಿದೆ. ಈ ಸಂಸ್ಥೆ ಸಿದ್ಧಪಡಿಸುವ ವಾಚ್​ನ ಆರಂಭಿಕ ಬೆಲೆ 1 ಕೋಟಿ ಮೇಲಿದೆ. ಸದ್ಯ, ಸುದೀಪ್​ ವಾಚ್​ ಮೌಲ್ಯ ಕೇಳಿ ಅನೇಕರು ಅಚ್ಚರಿ ಹೊರ ಹಾಕಿದ್ದಾರೆ. ಸುದೀಪ್​ಗೆ ಕಾರು, ಬೈಕ್ ಕ್ರೇಜ್ ಇದೆ ಎಂಬುದು ಅಭಿಮಾನಿಗಳಿಗೆ ಗೊತ್ತಿತ್ತು. ಇದರ ಜತೆಗೆ ವಾಚ್ ಕ್ರೇಜ್ ಇದೆ ಎಂಬ ವಿಚಾರವೂ ಈಗ ಅಭಿಮಾನಿಗಳಿಗೆ ತಿಳಿದಂತಾಗಿದೆ.

ಇದನ್ನೂ ಓದಿ: Kichcha Sudeep: ನಟ ಕಿಚ್ಚ ಸುದೀಪ್​​ಗೆ ಸನ್ಮಾನ ಮಾಡಲಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ