AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮುಂಗಾರು ಮಳೆ ಮಾಡಿದ್ರೆ ಅಟ್ಟರ್​ ಫ್ಲಾಪ್ ಆಗುತ್ತಿತ್ತು’; ಓಪನ್ ಆಗಿ ಹೇಳಿದ್ದ ಸುದೀಪ್

ಕಿಚ್ಚ ಸುದೀಪ್ ಸ್ಟಾರ್ ನಟ. ಅವರು ಚಿತ್ರರಂಗಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿದೆ. ಈ ವೇಳೆ ಅವರಿಗೆ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುದೀಪ್ ಅವರನ್ನು ಆರಾಧಿಸುವ ಅನೇಕರಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಭಾಷೆಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಅವರು ‘ಮುಂಗಾರು ಮಳೆ’ ಸಿನಿಮಾ ಮಾಡಿದ್ದರೆ ಫ್ಲಾಪ್ ಆಗುತ್ತಿತ್ತಂತೆ.

‘ನಾನು ಮುಂಗಾರು ಮಳೆ ಮಾಡಿದ್ರೆ ಅಟ್ಟರ್​ ಫ್ಲಾಪ್ ಆಗುತ್ತಿತ್ತು’; ಓಪನ್ ಆಗಿ ಹೇಳಿದ್ದ ಸುದೀಪ್
ಗಣೇಶ್​-ಸುದೀಪ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 10, 2024 | 7:59 AM

Share

‘ಮುಂಗಾರು ಮಳೆ’ 2006ರಲ್ಲಿ ರಿಲೀಸ್ ಆದ ಸಿನಿಮಾ. ಈ ಚಿತ್ರವನ್ನು ಜನರು ಸಾಕಷ್ಟು ಇಷ್ಟಪಟ್ಟರು. ನೂರಾರು ದಿನಗಳ ಕಾಲ ಸಿನಿಮಾ ಪ್ರದರ್ಶನ ಕಂಡಿತ್ತು. ನಟ ಗಣೇಶ್ ಹಾಗೂ ನಿರ್ದೇಶಕ ಯೋಗರಾಜ್ ಭಟ್ ಖ್ಯಾತಿ ಹೆಚ್ಚಿತು. ಗಣೇಶ್ ನಟನೆಯನ್ನು ಎಲ್ಲರೂ ಹೊಗಳಿದರು. ಅವರು ದೇವ್​ದಾಸ್ ತರ ಆ್ಯಕ್ಟಿಂಗ್ ಮಾಡಿದ್ದು ಜನರಿಗೆ ಇಷ್ಟ ಆಗಿತ್ತು. ಈ ಸಿನಿಮಾನ ಸುದೀಪ್ (Kichcha Sudeep) ಮಾಡಿದ್ದರೆ? ಹೀಗೊಂದು ಪ್ರಶ್ನೆ ಕೆಲವರಿಗೆ ಒಮ್ಮೆಯಾದರೂ ಎದುರಾಗಿರುತ್ತದೆ. ಸುದೀಪ್ ಪ್ರಕಾರ ಈ ಚಿತ್ರವನ್ನು ಅವರು ಮಾಡಿದ್ದರೆ ದೊಡ್ಡ ಫ್ಲಾಪ್ ಆಗುತ್ತಿತ್ತಂತೆ. ಈ ಮೊದಲು ಸುದೀಪ್ ಅವರು ಈ ವಿಚಾರದ ಬಗ್ಗೆ ಮಾತನಾಡಿದ್ದರು.

ಸುದೀಪ್ ಅವರು ಸ್ಟಾರ್ ನಟ. ಅವರು ಚಿತ್ರರಂಗಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿದೆ. ಈ ವೇಳೆ ಅವರಿಗೆ ಅಪಾರ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸುದೀಪ್ ಅವರನ್ನು ಆರಾಧಿಸುವ ಅನೇಕರಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ, ತೆಲುಗು ಭಾಷೆಯಲ್ಲೂ ಅವರು ನಟಿಸಿ ಫೇಮಸ್ ಆಗಿದ್ದಾರೆ. ಅವರು ನಟನೆಯಲ್ಲಿ ಸಾಕಷ್ಟು ಪಳಗಿದ್ದಾರೆ. ಯಾವುದೇ ಪಾತ್ರ ಕೊಟ್ಟರೂ ಮಾಡಿ ತೋರಿಸುತ್ತಾರೆ. ಆದರೆ, ‘ಮುಂಗಾರು ಮಳೆ’ ಚಿತ್ರದಲ್ಲಿನ ಪ್ರೀತಮ್ ಪಾತ್ರವನ್ನು ಗಣೇಶ್ ರೀತಿ ಮಾಡಲು ಸಾಧ್ಯವಿರಲಿಲ್ಲ ಎಂದು ಸುದೀಪ್ ಈ ಮೊದಲು ಹೇಳಿಕೊಂಡಿದ್ದರು.

ಸುದೀಪ್ ಬಿಗ್ ಬಾಸ್ ನಡೆಸಿಕೊಡುತ್ತಾರೆ. ಸೀಸನ್ 6ರಲ್ಲಿ ಗಣೇಶ್ ಅವರು ಸಿನಿಮಾ ಪ್ರಚಾರಕ್ಕಾಗಿ ಬಿಗ್ ಬಾಸ್ ವೇದಿಕೆ ಏರಿದ್ದರು. ಈ ವೇಳೆ ಸುದೀಪ್ ಅವರು ಒಂದು ಪ್ರಶ್ನೆ ಕೇಳಿದ್ದರು. ‘ನಾವಿಬ್ಬರೂ ಸಿನಿಮಾ ಎಕ್ಸ್​​ಚೇಂಜ್ ಮಾಡಿದ್ರೆ ನನ್ನ ಯಾವ ಸಿನಿಮಾನ ನೀವು ಮಾಡಲು ಬಯಸುತ್ತೀರಿ ಮತ್ತು ನಿಮ್ಮ ಯಾವ ಸಿನಿಮಾನ ನಾನು ಮಾಡಬೇಕು ಎಂದು ನಿಮಗೆ ಅನಿಸುತ್ತದೆ’ ಎಂದು ಕೇಳಿದ್ದಾರೆ ಸುದೀಪ್. ಇದಕ್ಕೆ ಗಣೇಶ್ ಅವರು ನೇರವಾಗಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

‘ಆತರ ಐಡಿಯಾನೇ ಇಲ್ಲ. ನೀವು ಎಲ್ಲಾ ಸಿನಿಮಾಗಳಲ್ಲೂ ಬೆಸ್ಟ್ ಕೊಟ್ಟಿದೀರಾ. ಅದನ್ನು ರಿಪ್ಲೇಸ್ ಮಾಡೋಕೆ ಯಾರಿಂದಲೂ ಸಾಧ್ಯ ಇಲ್ಲ’ ಎಂದರು ಗಣೇಶ್. ತಮ್ಮ ಮೇಲೆ ಗಣೇಶ್ ಇಟ್ಟಿರುವ ಗೌರವ ಹಾಗೂ ಪ್ರೀತಿಗೆ ಸುದೀಪ್ ಅವರಿಗೆ ಖುಷಿ ಆಯಿತು. ಅವರು ಧನ್ಯವಾದ ಹೇಳಿದರು. ಜೊತೆಗೆ ಸಿನಿಮಾ ಹೆಸರನ್ನು ಹೇಳಲೇಬೇಕು ಎಂದು ಒತ್ತಾಯ ಮಾಡಿದರು. ಆಗ ಗಣೇಶ್ ಅವರು ‘ನಲ್ಲ ಹಾಗೂ ಸ್ವಾತಿ ಮುತ್ತು’ ಸಿನಿಮಾ ಹೆಸರನ್ನು ಹೇಳಿದರು.

ಇದನ್ನೂ ಓದಿ: ‘ಮ್ಯಾಕ್ಸ್​ ಸಿನಿಮಾ ಅಪ್​ಡೇಟ್​ ಬಗ್ಗೆ ವ್ಯಂಗ್ಯ ಬೇಡ’: ಸುದೀಪ್​ ಖಡಕ್​ ಎಚ್ಚರಿಕೆ

ನಂತರ ಗಣೇಶ್ ಅವರು ಮಾತನಾಡಿದರು. ‘ನನ್ನ ನಟನೆಯ ಮುಂಗಾರು ಮಳೆ ಚಿತ್ರವನ್ನು ನೀವು ಮಾಡಬೇಕಿತ್ತು’ ಎಂದು ಹೇಳಿದರು ಅವರು. ‘ಬಹುಶಃ ನಾನು ನಟಿಸಿದ್ದರೆ ಆ ಸಿನಿಮಾ ಅಟ್ಟರ ಫ್ಲಾಪ್ ಆಗಿರೋದು. ನಾನು ಇರೋದು ಹೇಳ್ತೀನಿ. ಕೆಲವು ಸಿನಿಮಾ ಕ್ಯಾರೆಕ್ಟರ್​​ನಿಂದ ಓಡಿರುತ್ತದೆ. ಬರೆಯುವವರು ಅದನ್ನೇ ತಲೆಯಲ್ಲಿಟ್ಟುಕೊಂಡು ಬರೆದಿರುತ್ತಾರೆ. ಮುಂಗಾರುಮಳೆ ಪಾತ್ರಕ್ಕೆ ನೀವು ಹೇಳಿ ಮಾಡಿಸಿದಂಥ ಕಲಾವಿದರು. ಅದನ್ನು ಬಿಟ್ಟು ಬೇರೆ ಯಾವುದೇ ಸಿನಿಮಾ ಹೇಳಿದ್ದರೂ ಒಪ್ಪಿಕೊಳ್ಳುತ್ತಿದೆ’ ಎಂದಿದ್ದರು ಸುದೀಪ್.

ಮ್ಯಾಕ್ಸ್ ಸಿನಿಮಾ

ಕಿಚ್ಚ ಸುದೀಪ್ ಅವರು ಸದ್ಯ ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ನಿರೀಕ್ಷೆ ಹೆಚ್ಚಿದೆ. ಸುದೀಪ್ ಬಿಗ್ ಬಾಸ್ ಹಾಗೂ ಸಿಸಿಎಲ್ ಲೀಗ್​ನಲ್ಲಿ ಬ್ಯುಸಿ ಆಗಿದ್ದಾರೆ, ಸಿನಿಮಾ ಬಗ್ಗೆ ಅಪ್​ಡೇಟ್ ನೀಡುವುದಿಲ್ಲ ಎಂದು ಕೆಲವರು ಟೀಕೆ ಮಾಡಿದ್ದರು. ಇದಕ್ಕೆ ಕಿಚ್ಚ ಸುದೀಪ್ ಅವರು ಇತ್ತೀಚೆಗೆ ತಿರುಗೇಟು ನೀಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು