Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಜೀವನದಲ್ಲಿ ಬಾಸ್ ಎಂದು ಕರೆಯೋದು ಇಬ್ಬರಿಗೆ ಮಾತ್ರ’; ಕಿಚ್ಚ ಸುದೀಪ್

ಕಿಚ್ಚ ಸುದೀಪ್ ಅವರು ಚಿತ್ರರಂಗದಲ್ಲಿ ಇದ್ದು 3 ದಶಕಗಳು ಪೂರ್ಣಗೊಳ್ಳುತ್ತಾ ಬಂದಿದೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಜೀವನದಲ್ಲಿ ಬಾಸ್ ಎಂದು ಕರೆದಿದ್ದು ಇಬ್ಬರಿಗೆ ಮಾತ್ರವಂತೆ. ಈ ಬಗ್ಗೆ ಸಂದರ್ಶನ ಒಂದರಲ್ಲಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

‘ನಾನು ಜೀವನದಲ್ಲಿ ಬಾಸ್ ಎಂದು ಕರೆಯೋದು ಇಬ್ಬರಿಗೆ ಮಾತ್ರ’; ಕಿಚ್ಚ ಸುದೀಪ್
ಸುದೀಪ್
Follow us
ರಾಜೇಶ್ ದುಗ್ಗುಮನೆ
|

Updated on: Jul 08, 2024 | 2:56 PM

ಕಿಚ್ಚ ಸುದೀಪ್ ಅವರು ಸದ್ಯ ಹಲವು ಸಿನಿಮಾಗಳಲ್ಲಿ ಬ್ಯುಸಿ ಇದ್ದಾರೆ. ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಅವರು ಅನೇಕರಿಗೆ ಮಾದರಿ. ಅನೇಕ ಹೀರೋಗಳಿಗೆ ಸುದೀಪ್ ಅವರೇ ಫೇವರಿಟ್. ಅನೇಕ ಯುವ ನಟರಿಗೆ ಸುದೀಪ್ ಅವರು ಸ್ಫೂರ್ತಿ. ಹಾಗಾದರೆ ಸುದೀಪ್ ಅವರಿಗೆ ಯಾರು ಸ್ಫೂರ್ತಿ, ಅವರ ನೆಚ್ಚಿನ ಹೀರೋ ಯಾರು? ಈ ಬಗ್ಗೆ ಸುದೀಪ್ ಅವರು ಮಾತನಾಡಿದ್ದಾರೆ.

‘ಕಲಾ ಮಾಧ್ಯಮ’ ಯೂಟ್ಯೂಬ್ ಚಾನೆಲ್​ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಸುದೀಪ್ ಅವರು ಮಾತನಾಡಿದ್ದಾರೆ. ‘ಗೌರಿ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಈ ಚಿತ್ರದ ಮೂಲಕ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ ಬಣ್ಣದ ಲೋಕಕ್ಕೆ ಕಾಲಿಡುತ್ತಿದ್ದಾರೆ. ಅವರು ಸುದೀಪ್ ಅವರನ್ನು ಸಂದರ್ಶನ ಮಾಡಿದ್ದಾರೆ. ಇದರಲ್ಲಿ ಹಲವು ರೀತಿಯ ಪ್ರಶ್ನೆಗಳನ್ನು ಅವರು ಸುದೀಪ್​ಗೆ ಕೇಳಿದ್ದಾರೆ.

ಇದನ್ನೂ ಓದಿ: ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್

‘ನನ್ನ ನೆಚ್ಚಿನ ಕಲಾವಿದರು ನೀವು, ನಿಮ್ಮ ನೆಚ್ಚಿನ ಕಲಾವಿದರು ಯಾರು?’ ಎಂದು ಕೇಳಿದರು ಸಮರ್ಜಿತ್ ಲಂಕೇಶ್. ಇದಕ್ಕೆ ಸುದೀಪ್ ಅವರು ಉತ್ತರ ನೀಡಿದ್ದಾರೆ. ‘ನನ್ನ ಫೇವರಿಟ್ ಹೀರೋ ವಿಷ್ಣು ಸರ್. ಇದನ್ನು ಸಾಕಷ್ಟು ಬಾರಿ ಹೇಳಿದ್ದೇನೆ. ಜೀವನದಲ್ಲಿ ನಾನು ಇಬ್ಬರಿಗೆ ಮಾತ್ರ ಬಾಸ್ ಎಂದು ಕರೆದಿದ್ದು. ನಮ್ಮ ತಂದೆಗೆ, ಅದನ್ನು ಇವತ್ತಿಗೂ ಕರೆಯುತ್ತೇನೆ. ಹಾಗೂ ವಿಷ್ಣು ಸರ್​ಗೆ. ವಿಷ್ಣು ಅವರ ಪರ್ಸನಾಲಿಟಿ ಸಖತ್ ಇಷ್ಟ. ಅವರ ಗತ್ತು, ಇರೋ ರೀತಿ ಸಖತ್ ಇಷ್ಟ. ಅವರು ಯಾವಾಗಲೂ ನನ್ನ ಫೇವರಿಟ್’ ಎಂದಿದ್ದಾರೆ ಸುದೀಪ್.

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಶೂಟಿಂಗ್ ಪೂರ್ಣಗೊಂಡಿದೆ. ಶೀಘ್ರವೇ ಈ ಸಿನಿಮಾದ ರಿಲೀಸ್ ಡೇಟ್ ಬಗ್ಗೆ ಮಾಹಿತಿ ನೀಡುವುದಾಗಿ ನಿರ್ಮಾಣ ಸಂಸ್ಥೆಯಿಂದ ಅಪ್​ಡೇಟ್ ಸಿಕ್ಕಿದೆ. ಈ ಚಿತ್ರದಲ್ಲಿ ಸುದೀಪ್ ಅವರು ಪೊಲೀಸ್ ಪಾತ್ರ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಲಂಡನ್‌ನ ಟರ್ಕಿಶ್ ಕಾನ್ಸುಲೇಟ್ ಹೊರಗೆ ಕುರಾನ್ ಸುಟ್ಟ ವ್ಯಕ್ತಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ಉಕ್ರೇನ್‌ನ ಚೆರ್ನೋಬಿಲ್ ಪರಮಾಣು ಸ್ಥಾವರದ ಮೇಲೆ ರಷ್ಯಾದ ಡ್ರೋನ್‌ ದಾಳಿ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ತುಂಬಿದ ಕೊಡ ತುಳಕಿತಲೇ ಪರಾಕ್: ಮೈಲಾರಲಿಂಗೇಶ್ವರನ ಕಾರ್ಣಿಕ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಯತ್ನಾಳ್​​ಗೆ ನೋಟೀಸ್ ಕೊಟ್ಟಿದ್ದು ನಾನಲ್ಲ, ಶಿಸ್ತು ಸಮಿತಿ: ವಿಜಯೇಂದ್ರ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
ಮುಖ್ಯವಾಹಿನಿಗೆ ಬರುವ ಪ್ರಮಾಣಿಕ ಪ್ರಯತ್ನ ಬಾಗಪ್ಪ ಮಾಡುತ್ತಿದ್ದ: ಮಲಗೊಂಡ
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
‘ನಮ್ಮ ಪ್ರೀತಿಯ ರಾಮು’ ಸಿನಿಮಾ ನೋಡಿ ಖುಷಿಪಟ್ಟ ದರ್ಶನ್ ಅಭಿಮಾನಿಗಳು
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಆರೋಪಿಗಳು ಬಾಗಪ್ಪನ ಹತ್ಯೆ ನಂತರ ಕಾಡಲ್ಲಿ ಓಡಾಡಿಕೊಂಡಿದ್ದರು: ಎಸ್​ ಪಿ
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಪವಿತ್ರಾ ಬದುಕಿನ ಏಳು-ಬೀಳಿನ ಬಗ್ಗೆ ಬಿಗ್​ಬಾಸ್ ನೀತು ಮಾತು
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಟ್ರಂಪ್ ಜೊತೆಗಿನ ಮೋದಿ ಮಾತುಕತೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್ ಮೆಚ್ಚುಗೆ
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್
ಅಮೆರಿಕ ಪ್ರವಾಸ ಮುಗಿಸಿ ಭಾರತಕ್ಕೆ ಹೊರಟ ಪ್ರಧಾನಿ ಮೋದಿ; ಇಲ್ಲಿವೆ ಹೈಲೈಟ್ಸ್