AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು

ಕಿಚ್ಚ ಸುದೀಪ್ ಅವರ ಜನ್ಮದಿನದ ಪ್ರಯುಕ್ತ ಇಂದು (ಸೆಪ್ಟೆಂಬರ್ 2) ಬೆಂಗಳೂರಿನ ಜಯನಗರದಲ್ಲಿರುವ ಎಂಇಎಸ್ ಮೈದಾನದಲ್ಲಿ ಫ್ಯಾನ್ಸ್ ಭೇಟಿಗೆ ಸಮಯ ನಿಗದಿ ಆಗಿತ್ತು. ಕಿಚ್ಚ ಸುದೀಪ್ ಅವರನ್ನು ನೋಡಲು ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಫ್ಯಾನ್ಸ್ ನೆರೆದಿದ್ದರು. ಅವರ ಎದುರು ಸುದೀಪ್ ಮಾತನಾಡಿದ್ದಾರೆ.

‘ನನ್ನ ಹೆಸರಿಗೆ ಫ್ಯಾನ್ಸ್ ಕಳಂಕ ತಂದಿಲ್ಲ’; ಬರ್ತ್​ಡೇ ದಿನ ಸುದೀಪ್ ನೇರಮಾತು
Sudeep
ರಾಜೇಶ್ ದುಗ್ಗುಮನೆ
|

Updated on:Sep 02, 2024 | 2:51 PM

Share

ಕಿಚ್ಚ ಸುದೀಪ್ ಅವರು ಅನೇಕರಿಗೆ ಮಾದರಿ. ನಟನೆಯ ಜೊತೆಗೆ ಅವರಿಂದ ಅನೇಕ ಒಳ್ಳೆಯ ಕೆಲಸಗಳು ಆಗುತ್ತಿವೆ. ಅದೇ ರೀತಿ ಅವರ ಅಭಿಮಾನಿಗಳು ಕೂಡ ಸಾಮಾಜಿಕ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕದಲ್ಲಿ ಸುದೀಪ್ ಹೆಸರಲ್ಲಿ ಅಭಿಮಾನಿಗಳು ಬೋರ್​ವೆಲ್ ತೆಗೆಸಿದ್ದಾರೆ. ಶಾಲೆಗಳನ್ನು ದತ್ತು ತೆಗೆದುಕೊಂಡಿದ್ದಾರೆ. ಈ ಬಗ್ಗೆ ಸುದೀಪ್ ಅವರು ಬರ್ತ್​ಡೇ ದಿನ ಮಾತನಾಡಿದ್ದಾರೆ. ಅವರು ಅಭಿಮಾನಿಗಳ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ.

ಬೆಂಗಳೂರಿನ ಜಯನಗರದ ಎಂಇಸ್ ಮೈದಾನದಲ್ಲಿ ಕಿಚ್ಚ ಸುದೀಪ್ ಅವರ ಬರ್ತ್​ಡೇ ಆಚರಣೆಗೆ ಸ್ಥಳ ನಿಯೋಜನೆ ಮಾಡಲಾಗಿತ್ತು. ಅಲ್ಲಿಗೆ ತೆರಳಿದ ಸುದೀಪ್ ಮಾತನಾಡಿದರು. ‘ನಾನು ಮೇಕಪ್​ ಹಾಕೋದು ಅಭಿಮಾನಿಗಳಿಗೋಸ್ಕರ. ಎಲ್ಲಿಯವರೆಗೆ ನೋಡೋಕೆ ಇಷ್ಟಪಡುತ್ತಿರೋ ಅಲ್ಲಿಯವರೆಗೆ ನಿಮಗೋಸ್ಕರ ದುಡಿಯುತ್ತೇನೆ’ ಎಂದಿದ್ದಾರೆ ಸುದೀಪ್.

‘ನನ್ನಿಂದ ಅವರು ಒಳ್ಳೆಯ ಕೆಲಸ ಮಾಡುತ್ತಾರೆ. ಅವರು ಮಾಡಿರೋ ಕೆಲಸ ಅವರ ತಂದೆ ತಾಯಿಗೆ, ಊರಿನವರಿಗೆ ಈ ಶ್ರೇಯಸ್ಸು ಸಲ್ಲುತ್ತದೆ. ನಾವು ಬೆಳೆಯುತ್ತೇವೆ ಅನ್ನೋದು ತಪ್ಪಲ್ಲ. ಯಾವ ವಾತಾವರಣದಲ್ಲಿ ಬೆಳೆಯುತ್ತೇವೆ ಅನ್ನೋದು ಮುಖ್ಯವಾಗುತ್ತದೆ. ಅವರು ಒಳ್ಳೆಯ ಕೆಲಸ ಮಾಡ್ತಿರೋದು ನಾನು ಹೇಳಿದೆ ಅಂತಲ್ಲ, ಅವರಲ್ಲಿ ಒಳ್ಳೆತನ ಇದೆ. ಅದಕ್ಕಾಗಿ ನಾವಿಷ್ಟು ಒಳ್ಳೆಯವರು’ ಎಂದಿದ್ದಾರೆ ಸುದೀಪ್.

‘ನಾನು ಸಂಪಾದನೆ ಮಾಡಿರುವ ಹೆಸರಿಗೆ ಕಳಂಕ ತರುವ ಕೆಲಸವನ್ನು ಫ್ಯಾನ್ಸ್ ಮಾಡಿಲ್ಲ. ಸಿನಿಮಾ ಎಲ್ಲರೂ ಮಾಡುತ್ತಾರೆ. ಆದರೆ, ಯಶಸ್ಸು ನಂದು ಮಾತ್ರವಲ್ಲ. ವ್ಯಕ್ತಿತ್ವದಲ್ಲಿ ದೊಡ್ಡವರಾಗಬೇಕಾದರೆ ಸಿನಿಮಾ ಮಾತ್ರ ಸಾಕಾಗಲ್ಲ. ನನ್ನ ಕುಟುಂಬ, ಗೆಳೆಯರು ಎಲ್ಲರೂ ಮುಖ್ಯವಾಗುತ್ತಾರೆ’ ಎಂದಿದ್ದಾರೆ ಸುದೀಪ್.

ಇದನ್ನೂ ಓದಿ: ‘ನಾ ಕಂಡ ಕನಸನ್ನು ಸುದೀಪ್ ಈಡೇರಿಸಿದ್ದಾನೆ’; ಸಂಜೀವ್ ಖುಷಿಯಿಂದ ಹೇಳಿದ್ದ ಮಾತಿದು

‘ಮ್ಯಾಕ್ಸ್’ ಸಿನಿಮಾ ರಿಲೀಸ್ ಯಾವಾಗ ಎನ್ನುವ ಕುತೂಹಲ ಇದೆ. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ. ‘ತಾಳಿದವನು ಬಾಳಿಯಾನು. ಸಿನಿಮಾ ಮಾಡೋದಷ್ಟೇ ನನ್ನ ಕೆಲಸ. ಸಿನಿಮಾ ವಿಳಂಬ ಆಗಿದ್ದಕ್ಕೆ ಕ್ಷಮೆ ಇರಲಿ. ಸಿನಿಮಾ ಎಂದಾಗ ಸಾಕಷ್ಟು ಮಂದಿ ಇದರಲ್ಲಿ ಭಾಗಿ ಇರುತ್ತಾರೆ’ ಎಂದಿದ್ದಾರೆ ಸುದೀಪ್.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:51 pm, Mon, 2 September 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು