‘ನಾವು ಸೋತಿದ್ದಕ್ಕೆ ಬೇಸರ ಆಗಿಲ್ಲ’; ಸಿಸಿಎಲ್ ಫೈನಲ್ ಬಳಿಕ ಸುದೀಪ್ ಮಾತು

ಇನ್ನು ಮಹಿಳಾ ಐಪಿಎಲ್ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿದೆ. ಇದಕ್ಕೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸುದೀಪ್ ಅವರಿಗೂ ಈ ವಿಚಾರ ಖುಷಿ ನೀಡಿದೆ. ಮಹಿಳಾ ತಂಡಕ್ಕೆ ಶುಭ ಕೋರಿದ ಅವರು, ಬೆಂಗಳೂರು ತಂಡಕ್ಕೆ ವಿಶ್ ತಿಳಿಸಿದ್ದಾರೆ.

‘ನಾವು ಸೋತಿದ್ದಕ್ಕೆ ಬೇಸರ ಆಗಿಲ್ಲ’; ಸಿಸಿಎಲ್ ಫೈನಲ್ ಬಳಿಕ ಸುದೀಪ್ ಮಾತು
ಸುದೀಪ್
Follow us
|

Updated on: Mar 18, 2024 | 7:33 AM

ಕಿಚ್ಚ ಸುದೀಪ್ (Kichcha Sudeep) ಅವರ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ಸಿಸಿಎಲ್​ ಪಂದ್ಯದಲ್ಲಿ 12 ರನ್​ಗಳ ಸೋಲು ಕಂಡಿದೆ. ಇದು ಸುದೀಪ್ ಹಾಗೂ ಕರ್ನಾಟಕ ಬುಲ್ಡೋಜರ್ಸ್ ಅಭಿಮಾನಿಗಳಿಗೆ ಬೇಸರ ತಂದಿದೆ. ಫಿನಾಲೆಯವರೆಗೆ ಬಂದು ಕಪ್ ಗೆದ್ದಿಲ್ಲ ಎಂಬ ವಿಚಾರ ಹೆಚ್ಚು ಬೇಸರ ತರಿಸಿದೆ. ಫೈನಲ್ ಬಳಿಕ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ. ‘ನಾವು ಸೋತಿದ್ದಕ್ಕೆ ಬೇಸರ ಇಲ್ಲ’ ಎಂದು ಸುದೀಪ್ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ.

‘ನಾವು ಸೋತ ಬಗ್ಗೆ ನನಗೆ ಬೇಸರ ಇಲ್ಲ. ನಾವು ತುಂಬಾ ಕಳಪೆ‌ ಪ್ರದರ್ಶನ ನೀಡಿದ್ದರೆ ಬೇಸರ ಆಗುತ್ತಿತ್ತು.  ಆದರೆ ಮ್ಯಾಚ್ ಆಡಿದ ರೀತಿಗೆ ತುಂಬಾ ಖುಷಿ ಇದೆ. ನಮ್ಮ ತಂಡ ಕೂಡ ತುಂಬಾ ಚೆನ್ನಾಗಿ ಆಡಿದೆ’ ಎಂದು ಸುದೀಪ್ ಮೆಚ್ಚುಗೆ ಸೂಚಿಸಿದ್ದಾರೆ. ಎರಡೂ ತಂಡಗಳ ಮಧ್ಯೆ ಸಮಬಲದ ಹೋರಾಟ ಇತ್ತು.

ಇದನ್ನೂ ಓದಿ: CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್

ಇನ್ನು ಮಹಿಳಾ ಐಪಿಎಲ್ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿದೆ. ಇದಕ್ಕೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸುದೀಪ್ ಅವರಿಗೂ ಈ ವಿಚಾರ ಖುಷಿ ನೀಡಿದೆ. ಮಹಿಳಾ ತಂಡಕ್ಕೆ ಶುಭ ಕೋರಿದ ಅವರು, ಬೆಂಗಳೂರು ತಂಡಕ್ಕೆ ವಿಶ್ ತಿಳಿಸಿದ್ದಾರೆ. ‘ಈ ಸಲ ಕಪ್ ನಮ್ಮದಾಗಿದೆ’ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.

ಸ್ಕೋರ್ ವಿವರ..

ಸಿಸಿಎಲ್​ನಲ್ಲಿ 10 ಓವರ್​ಗಳ ನಾಲ್ಕು ಇನ್ನಿಂಗ್ಸ್ ಆಡಿಸಲಾಗುತ್ತದೆ. ಎರಡೂ ತಂಡಗಳು ತಲಾ 10 ಓವರ್​ನ ಎರಡು ಇನ್ನಿಂಗ್ಸ್ ಆಡಬೇಕು. ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ಟೈಗರ್ಸ್ 118 ರನ್ ಹೊಡೆಯಿತು. ಆ ಬಳಿಕ ಕರ್ನಾಟಕ ಬುಲ್ಡೋಜರ್ಸ್ 86 ರನ್​ ಗಳಿಸಿತು. ಹೀಗಾಗಿ ಬೆಂಗಾಲ್ ಟೈಗರ್ಸ್ 32 ರನ್​ಗಳ ಮುನ್ನಡೆ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಬೆಂಗಾಲ್ ಟೈಗರ್ಸ್ 105 ರನ್​ ಕಲೆ ಹಾಕಿ, 138 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಬೃಹತ್ ಮೊತ್ತ ಬೆನ್ನು ಹತ್ತಿದ ಕರ್ನಾಟಕ ತಂಡ 10 ಒವರ್​ನಲ್ಲಿ 125 ರನ್​ ಕಲೆ ಹಾಕಿತು. ಈ ಮೂಲಕ ಬೆಂಗಾಲ್ ಟೈಗರ್ಸ್ ತಂಡ 12 ರನ್​ಗಳ ಗೆಲುವು ಕಂಡಿತು. ಒಳ್ಳೆಯ ಫೈಟ್​ ಕೊಟ್ಟು ಸೋತೆವು ಎನ್ನುವ ಖುಷಿ ಸುದೀಪ್ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ