AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಸೋತಿದ್ದಕ್ಕೆ ಬೇಸರ ಆಗಿಲ್ಲ’; ಸಿಸಿಎಲ್ ಫೈನಲ್ ಬಳಿಕ ಸುದೀಪ್ ಮಾತು

ಇನ್ನು ಮಹಿಳಾ ಐಪಿಎಲ್ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿದೆ. ಇದಕ್ಕೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸುದೀಪ್ ಅವರಿಗೂ ಈ ವಿಚಾರ ಖುಷಿ ನೀಡಿದೆ. ಮಹಿಳಾ ತಂಡಕ್ಕೆ ಶುಭ ಕೋರಿದ ಅವರು, ಬೆಂಗಳೂರು ತಂಡಕ್ಕೆ ವಿಶ್ ತಿಳಿಸಿದ್ದಾರೆ.

‘ನಾವು ಸೋತಿದ್ದಕ್ಕೆ ಬೇಸರ ಆಗಿಲ್ಲ’; ಸಿಸಿಎಲ್ ಫೈನಲ್ ಬಳಿಕ ಸುದೀಪ್ ಮಾತು
ಸುದೀಪ್
ರಾಜೇಶ್ ದುಗ್ಗುಮನೆ
|

Updated on: Mar 18, 2024 | 7:33 AM

Share

ಕಿಚ್ಚ ಸುದೀಪ್ (Kichcha Sudeep) ಅವರ ‘ಕರ್ನಾಟಕ ಬುಲ್ಡೋಜರ್ಸ್’ ತಂಡ ಸಿಸಿಎಲ್​ ಪಂದ್ಯದಲ್ಲಿ 12 ರನ್​ಗಳ ಸೋಲು ಕಂಡಿದೆ. ಇದು ಸುದೀಪ್ ಹಾಗೂ ಕರ್ನಾಟಕ ಬುಲ್ಡೋಜರ್ಸ್ ಅಭಿಮಾನಿಗಳಿಗೆ ಬೇಸರ ತಂದಿದೆ. ಫಿನಾಲೆಯವರೆಗೆ ಬಂದು ಕಪ್ ಗೆದ್ದಿಲ್ಲ ಎಂಬ ವಿಚಾರ ಹೆಚ್ಚು ಬೇಸರ ತರಿಸಿದೆ. ಫೈನಲ್ ಬಳಿಕ ಕಿಚ್ಚ ಸುದೀಪ್ ಅವರು ಮಾತನಾಡಿದ್ದಾರೆ. ‘ನಾವು ಸೋತಿದ್ದಕ್ಕೆ ಬೇಸರ ಇಲ್ಲ’ ಎಂದು ಸುದೀಪ್ ಹೇಳಿದ್ದಾರೆ. ಅದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ.

‘ನಾವು ಸೋತ ಬಗ್ಗೆ ನನಗೆ ಬೇಸರ ಇಲ್ಲ. ನಾವು ತುಂಬಾ ಕಳಪೆ‌ ಪ್ರದರ್ಶನ ನೀಡಿದ್ದರೆ ಬೇಸರ ಆಗುತ್ತಿತ್ತು.  ಆದರೆ ಮ್ಯಾಚ್ ಆಡಿದ ರೀತಿಗೆ ತುಂಬಾ ಖುಷಿ ಇದೆ. ನಮ್ಮ ತಂಡ ಕೂಡ ತುಂಬಾ ಚೆನ್ನಾಗಿ ಆಡಿದೆ’ ಎಂದು ಸುದೀಪ್ ಮೆಚ್ಚುಗೆ ಸೂಚಿಸಿದ್ದಾರೆ. ಎರಡೂ ತಂಡಗಳ ಮಧ್ಯೆ ಸಮಬಲದ ಹೋರಾಟ ಇತ್ತು.

ಇದನ್ನೂ ಓದಿ: CCL 2024: ಸಿಸಿಎಲ್​ನಲ್ಲಿ ಕಿಚ್ಚ ಸುದೀಪ್ ತಂಡಕ್ಕೆ ಸೋಲು; ಗೆದ್ದು ಬೀಗಿದ ಬೆಂಗಾಲ್ ಟೈಗರ್ಸ್

ಇನ್ನು ಮಹಿಳಾ ಐಪಿಎಲ್ ಮ್ಯಾಚ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದಿದೆ. ಇದಕ್ಕೆ ಎಲ್ಲ ಕಡೆಗಳಿಂದ ವಿಶ್​ಗಳು ಬರುತ್ತಿವೆ. ಸುದೀಪ್ ಅವರಿಗೂ ಈ ವಿಚಾರ ಖುಷಿ ನೀಡಿದೆ. ಮಹಿಳಾ ತಂಡಕ್ಕೆ ಶುಭ ಕೋರಿದ ಅವರು, ಬೆಂಗಳೂರು ತಂಡಕ್ಕೆ ವಿಶ್ ತಿಳಿಸಿದ್ದಾರೆ. ‘ಈ ಸಲ ಕಪ್ ನಮ್ಮದಾಗಿದೆ’ ಎಂದು ಅವರು ಹೆಮ್ಮೆಯಿಂದ ಹೇಳಿದ್ದಾರೆ.

ಸ್ಕೋರ್ ವಿವರ..

ಸಿಸಿಎಲ್​ನಲ್ಲಿ 10 ಓವರ್​ಗಳ ನಾಲ್ಕು ಇನ್ನಿಂಗ್ಸ್ ಆಡಿಸಲಾಗುತ್ತದೆ. ಎರಡೂ ತಂಡಗಳು ತಲಾ 10 ಓವರ್​ನ ಎರಡು ಇನ್ನಿಂಗ್ಸ್ ಆಡಬೇಕು. ಮೊದಲು ಬ್ಯಾಟ್ ಮಾಡಿದ ಬೆಂಗಾಲ್ ಟೈಗರ್ಸ್ 118 ರನ್ ಹೊಡೆಯಿತು. ಆ ಬಳಿಕ ಕರ್ನಾಟಕ ಬುಲ್ಡೋಜರ್ಸ್ 86 ರನ್​ ಗಳಿಸಿತು. ಹೀಗಾಗಿ ಬೆಂಗಾಲ್ ಟೈಗರ್ಸ್ 32 ರನ್​ಗಳ ಮುನ್ನಡೆ ಸಾಧಿಸಿತು. ಎರಡನೇ ಇನ್ನಿಂಗ್ಸ್​ನಲ್ಲಿ ಬೆಂಗಾಲ್ ಟೈಗರ್ಸ್ 105 ರನ್​ ಕಲೆ ಹಾಕಿ, 138 ರನ್​ಗಳ ಬೃಹತ್ ಟಾರ್ಗೆಟ್ ನೀಡಿತು. ಬೃಹತ್ ಮೊತ್ತ ಬೆನ್ನು ಹತ್ತಿದ ಕರ್ನಾಟಕ ತಂಡ 10 ಒವರ್​ನಲ್ಲಿ 125 ರನ್​ ಕಲೆ ಹಾಕಿತು. ಈ ಮೂಲಕ ಬೆಂಗಾಲ್ ಟೈಗರ್ಸ್ ತಂಡ 12 ರನ್​ಗಳ ಗೆಲುವು ಕಂಡಿತು. ಒಳ್ಳೆಯ ಫೈಟ್​ ಕೊಟ್ಟು ಸೋತೆವು ಎನ್ನುವ ಖುಷಿ ಸುದೀಪ್ ಅವರಿಗೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು