AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್

Kichcha Sudeep - Darshan: ಜನವರಿ 28ರಂದು ‘ಬಿಗ್ ಬಾಸ್’ ಫಿನಾಲೆ ನಡೆದಿದೆ. ಈಗ ಸುದೀಪ್ ಮರಳಿ ಶೂಟಿಂಗ್​ಗೆ ತೆರಳಿದ್ದಾರೆ. ವಿಮಾನ ಏರುವುದಕ್ಕೂ ಮೊದಲು ಅವರು ‘Ask Kichcha’ ಸೆಷನ್ ನಡೆಸಿದ್ದಾರೆ.

Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್
ದರ್ಶನ್-ಸುದೀಪ್
ರಾಜೇಶ್ ದುಗ್ಗುಮನೆ
| Edited By: |

Updated on:Jan 30, 2024 | 12:39 PM

Share

ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಇತ್ತು. ಆದರೆ, ಕಾರಣಾಂತರಗಳಿಂದ ಇಬ್ಬರೂ ಬೇರೆ ಆದರು. ಇವರು ಎಲ್ಲಿಯೂ ಮುಖಾಮುಖಿ ಆಗುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡಿಕೊಳ್ಳುವುದಿಲ್ಲ. ಈ ಬೆನ್ನಲ್ಲೇ ಸುದೀಪ್ ಅವರು ಮಾಡಿರೋ ಒಂದು ಟ್ವೀಟ್ ಸಖತ್ ವೈರಲ್ ಆಗುತ್ತಿದೆ. ದರ್ಶನ್ ಬಗ್ಗೆ ಸುದೀಪ್ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ಅವರು ಮಾಡಿರೋ ಟ್ವೀಟ್ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ಟ್ವಿಟರ್​ನಲ್ಲಿ Ask Kichcha ಸೆಷನ್ ನಡೆಸುತ್ತಾರೆ. ಜನವರಿ 28ರಂದು ‘ಬಿಗ್ ಬಾಸ್’ ಫಿನಾಲೆ ಹೋಸ್ಟ್ ಮಾಡಿದರು. ಈಗ ಅವರು ಮರಳಿ ಶೂಟಿಂಗ್​ಗೆ ತೆರಳಿದ್ದಾರೆ. ವಿಮಾನ ಏರುವುದಕ್ಕೂ ಮೊದಲು ಅವರು ‘Ask Kichcha’ ಸೆಷನ್ ನಡೆಸಿದ್ದಾರೆ.

ಮುಂಜಾನೆ 7:30ಕ್ಕೆ ಸುದೀಪ್ ಟ್ವೀಟ್ ಒಂದನ್ನು ಮಾಡಿದರು. ‘ಒಂದು ಸಣ್ಣ AskKichcha ಸೆಷನ್. ನಿಮ್ಮ ಪ್ರಶ್ನೆಗಳನ್ನು ಕೇಳಿ’ ಎಂದು ಸುದೀಪ್ ಬರೆದುಕೊಂಡಿದ್ದರು. ಅಭಿಮಾನಿಯೋರ್ವ ಇದಕ್ಕೆ ಪ್ರಶ್ನೆ ಮಾಡಿದ್ದಾರೆ. ‘ಸರ್​ ನಿಮ್ದು ಮತ್ತೆ ದರ್ಶನ್ ಅವರದ್ದು ಸಮಸ್ಯೆನ ಯಾವಾಗ ಪರಿಹಾರ ಮಾಡ್ಕೋತೀರಾ? ಇನ್ನು ಎಷ್ಟು ಟೈಮ್ ತೆಗೆದುಕೊಳ್ಳುತ್ತೀರಾ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಕಿಚ್ಚ ನೇರ ಮಾತುಗಳಲ್ಲಿ ಉತ್ತರಿಸಿದ್ದಾರೆ. ‘ಸಮಸ್ಯೆ ಏನು ಅಂತ ಇಬ್ಬರೂ ಹುಡುಕುತ್ತಾ ಇದೀವಿ’ ಎಂದಿದ್ದಾರೆ ಸುದೀಪ್. ಈ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ. ಒಬ್ಬರ ಮಧ್ಯೆ ಎಲ್ಲವೂ ಸರಿ ಇದೆ ಎಂದು ಪರೋಕ್ಷವಾಗಿ ಮಾತನಾಡಿದ್ದಾರೆ. ಸದ್ಯ ಸುದೀಪ್ ಮಾಡಿರೋ ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಸುದೀಪ್ ಅವರು ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ವೀಕ್ಷಿಸಿದ್ದರು. ಈಗ ದರ್ಶನ್ ಜೊತೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಇಬ್ಬರೂ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರು ಎಕ್ಸ್ (X) ನಲ್ಲಿ ಬೆಳಗ್ಗೆ ಮಾಡಿರುವ ಪೋಸ್ಟ್

ಇದನ್ನೂ ಓದಿ: ‘ಗೆಳೆಯ ಬುಲೆಟ್ ಪ್ರಕಾಶ್ ಮನಸ್ಸಿನಲ್ಲಿದ್ದಾರೆ, ಅಂದ್ರೆ ನಿಮ್ಮನ್ನು ಪ್ರೀತ್ಸಲ್ವ?’; ರಕ್ಷಕ್​ಗೆ ಸುದೀಪ್ ಪ್ರಶ್ನೆ

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಇನ್ನು ಕೆಲವೇ ದಿನಗಳ ಶೂಟ್ ಬಾಕಿ ಇದೆ ಎನ್ನಲಾಗಿದೆ. ಇದಾದ ಬಳಿಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:38 am, Mon, 29 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್