Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್

Kichcha Sudeep - Darshan: ಜನವರಿ 28ರಂದು ‘ಬಿಗ್ ಬಾಸ್’ ಫಿನಾಲೆ ನಡೆದಿದೆ. ಈಗ ಸುದೀಪ್ ಮರಳಿ ಶೂಟಿಂಗ್​ಗೆ ತೆರಳಿದ್ದಾರೆ. ವಿಮಾನ ಏರುವುದಕ್ಕೂ ಮೊದಲು ಅವರು ‘Ask Kichcha’ ಸೆಷನ್ ನಡೆಸಿದ್ದಾರೆ.

Sudeep on Darshan: ದರ್ಶನ್ ಜೊತೆ ಸಮಸ್ಯೆಯೇ ಇಲ್ಲ; ನೇರ ಮಾತುಗಳಲ್ಲಿ ಹೇಳಿದ ಕಿಚ್ಚ ಸುದೀಪ್
ದರ್ಶನ್-ಸುದೀಪ್
Follow us
| Updated By: Digi Tech Desk

Updated on:Jan 30, 2024 | 12:39 PM

ಕಿಚ್ಚ ಸುದೀಪ್ ಹಾಗೂ ದರ್ಶನ್ (Darshan) ಮಧ್ಯೆ ಒಳ್ಳೆಯ ಫ್ರೆಂಡ್​​ಶಿಪ್ ಇತ್ತು. ಆದರೆ, ಕಾರಣಾಂತರಗಳಿಂದ ಇಬ್ಬರೂ ಬೇರೆ ಆದರು. ಇವರು ಎಲ್ಲಿಯೂ ಮುಖಾಮುಖಿ ಆಗುವುದಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಒಬ್ಬರನ್ನೊಬ್ಬರು ಫಾಲೋ ಮಾಡಿಕೊಳ್ಳುವುದಿಲ್ಲ. ಈ ಬೆನ್ನಲ್ಲೇ ಸುದೀಪ್ ಅವರು ಮಾಡಿರೋ ಒಂದು ಟ್ವೀಟ್ ಸಖತ್ ವೈರಲ್ ಆಗುತ್ತಿದೆ. ದರ್ಶನ್ ಬಗ್ಗೆ ಸುದೀಪ್ ಅವರು ಓಪನ್ ಆಗಿ ಹೇಳಿಕೊಂಡಿದ್ದಾರೆ. ಅವರು ಮಾಡಿರೋ ಟ್ವೀಟ್ ಬಗ್ಗೆ ಇಲ್ಲಿದೆ ವಿವರ.

ಸುದೀಪ್ ಅವರು ಟ್ವಿಟರ್​ನಲ್ಲಿ Ask Kichcha ಸೆಷನ್ ನಡೆಸುತ್ತಾರೆ. ಜನವರಿ 28ರಂದು ‘ಬಿಗ್ ಬಾಸ್’ ಫಿನಾಲೆ ಹೋಸ್ಟ್ ಮಾಡಿದರು. ಈಗ ಅವರು ಮರಳಿ ಶೂಟಿಂಗ್​ಗೆ ತೆರಳಿದ್ದಾರೆ. ವಿಮಾನ ಏರುವುದಕ್ಕೂ ಮೊದಲು ಅವರು ‘Ask Kichcha’ ಸೆಷನ್ ನಡೆಸಿದ್ದಾರೆ.

ಮುಂಜಾನೆ 7:30ಕ್ಕೆ ಸುದೀಪ್ ಟ್ವೀಟ್ ಒಂದನ್ನು ಮಾಡಿದರು. ‘ಒಂದು ಸಣ್ಣ AskKichcha ಸೆಷನ್. ನಿಮ್ಮ ಪ್ರಶ್ನೆಗಳನ್ನು ಕೇಳಿ’ ಎಂದು ಸುದೀಪ್ ಬರೆದುಕೊಂಡಿದ್ದರು. ಅಭಿಮಾನಿಯೋರ್ವ ಇದಕ್ಕೆ ಪ್ರಶ್ನೆ ಮಾಡಿದ್ದಾರೆ. ‘ಸರ್​ ನಿಮ್ದು ಮತ್ತೆ ದರ್ಶನ್ ಅವರದ್ದು ಸಮಸ್ಯೆನ ಯಾವಾಗ ಪರಿಹಾರ ಮಾಡ್ಕೋತೀರಾ? ಇನ್ನು ಎಷ್ಟು ಟೈಮ್ ತೆಗೆದುಕೊಳ್ಳುತ್ತೀರಾ’ ಎಂದು ಪ್ರಶ್ನೆ ಮಾಡಲಾಯಿತು. ಇದಕ್ಕೆ ಕಿಚ್ಚ ನೇರ ಮಾತುಗಳಲ್ಲಿ ಉತ್ತರಿಸಿದ್ದಾರೆ. ‘ಸಮಸ್ಯೆ ಏನು ಅಂತ ಇಬ್ಬರೂ ಹುಡುಕುತ್ತಾ ಇದೀವಿ’ ಎಂದಿದ್ದಾರೆ ಸುದೀಪ್. ಈ ಮೂಲಕ ಅವರು ಅಚ್ಚರಿ ಮೂಡಿಸಿದ್ದಾರೆ. ಒಬ್ಬರ ಮಧ್ಯೆ ಎಲ್ಲವೂ ಸರಿ ಇದೆ ಎಂದು ಪರೋಕ್ಷವಾಗಿ ಮಾತನಾಡಿದ್ದಾರೆ. ಸದ್ಯ ಸುದೀಪ್ ಮಾಡಿರೋ ಈ ಟ್ವೀಟ್ ಸಾಕಷ್ಟು ವೈರಲ್ ಆಗುತ್ತಿದೆ. ಸುದೀಪ್ ಅವರು ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ವೀಕ್ಷಿಸಿದ್ದರು. ಈಗ ದರ್ಶನ್ ಜೊತೆ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿಕೊಂಡಿದ್ದಾರೆ. ಇಬ್ಬರೂ ಮತ್ತೆ ಒಂದಾಗಲಿ ಎಂದು ಫ್ಯಾನ್ಸ್ ಕೋರಿಕೊಳ್ಳುತ್ತಿದ್ದಾರೆ.

ಕಿಚ್ಚ ಸುದೀಪ್​ ಅವರು ಎಕ್ಸ್ (X) ನಲ್ಲಿ ಬೆಳಗ್ಗೆ ಮಾಡಿರುವ ಪೋಸ್ಟ್

ಇದನ್ನೂ ಓದಿ: ‘ಗೆಳೆಯ ಬುಲೆಟ್ ಪ್ರಕಾಶ್ ಮನಸ್ಸಿನಲ್ಲಿದ್ದಾರೆ, ಅಂದ್ರೆ ನಿಮ್ಮನ್ನು ಪ್ರೀತ್ಸಲ್ವ?’; ರಕ್ಷಕ್​ಗೆ ಸುದೀಪ್ ಪ್ರಶ್ನೆ

ಸುದೀಪ್ ಅವರು ‘ಮ್ಯಾಕ್ಸ್’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿದೆ. ಇನ್ನು ಕೆಲವೇ ದಿನಗಳ ಶೂಟ್ ಬಾಕಿ ಇದೆ ಎನ್ನಲಾಗಿದೆ. ಇದಾದ ಬಳಿಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಲಿವೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:38 am, Mon, 29 January 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ