Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪ ಮಾಡಿದ ನಿರ್ಮಾಪಕರಿಗೆ ಕಿಚ್ಚ ಸುದೀಪ್ ಎಚ್ಚರಿಕೆ: ಮಾನನಷ್ಟ ಮೊಕದ್ದಮೆ ಹೂಡಲು ಸಜ್ಜು

Kichcha Sudeep: ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ ನಿರ್ಮಾಪಕರಿಗೆ ನೊಟೀಸ್ ಕಳಿಸಿರುವ ಸುದೀಪ್ 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಆರೋಪ ಮಾಡಿದ ನಿರ್ಮಾಪಕರಿಗೆ ಕಿಚ್ಚ ಸುದೀಪ್ ಎಚ್ಚರಿಕೆ: ಮಾನನಷ್ಟ ಮೊಕದ್ದಮೆ ಹೂಡಲು ಸಜ್ಜು
ಸುದೀಪ್
Follow us
ಮಂಜುನಾಥ ಸಿ.
|

Updated on: Jul 08, 2023 | 11:38 AM

ನಟ ಕಿಚ್ಚ ಸುದೀಪ್ (Sudeep) ವಿರುದ್ಧ ಇತ್ತೀಚೆಗೆ ಇಬ್ಬರು ನಿರ್ಮಾಪಕರು ವಂಚನೆ ಆರೋಪವನ್ನು ಮಾಡಿದ್ದರು. ಸುದ್ದಿಗೋಷ್ಠಿ ನಡೆಸಿದ್ದ ನಿರ್ಮಾಪಕರಾದ (Producer) ಎಂಎನ್ ಸುರೇಶ್ (MN Suresh) ಮತ್ತು ಎಂಎನ್ ಕುಮಾರ್, ”ಸುದೀಪ್ ಸಿನಿಮಾ ಮಾಡಿಕೊಡುವುದಾಗಿ ಹೇಳಿ ಎಂಟು ಕೋಟಿ ಅಡ್ವಾನ್ಸ್ ಹಣ ಪಡೆದಿದ್ದಾರೆ. ಆದರೆ ಹಣ ಪಡೆದು ವರ್ಷಗಳಾದರೂ ಇನ್ನೂ ಡೇಟ್ಸ್ ನೀಡಿಲ್ಲ ಎಂದಿದ್ದರು. ಅಲ್ಲದೆ, ಸುದೀಪ್, ಆರ್​ಆರ್​ ನಗರದಲ್ಲಿ ಖರೀದಿಸಿದ ಮನೆಗೆ ತಾವು ಕೊಟ್ಟ ಹಣ ಬಳಕೆ ಮಾಡಿಕೊಂಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾವನ್ನು ನಾವು ನಿರ್ಮಿಸಬೇಕಿತ್ತು ಅದನ್ನು ಸಹ ತಪ್ಪಿಸಿದರು ಎಂದು ಆರೋಪಿಸಿದ್ದರು.

ನಿರ್ಮಾಪಕರುಗಳ ಆರೋಪಗಳಿಗೆ ನೇರ ಪ್ರತಿಕ್ರಿಯೆ ನೀಡದಿದ್ದ ಸುದೀಪ್, ಇದೀಗ ತಮ್ಮ ವಕೀಲರಿಂದ ನೊಟೀಸ್ ಕಳುಹಿಸಿದ್ದಾರೆ. ನಿರ್ಮಾಪಕ ದ್ವಯರು ಮಾಡಿರುವ ಎಲ್ಲ ಆರೋಪಗಳು ಆಧಾರರಹಿತ, ಸುಳ್ಳುಗಳಾಗಿದ್ದು ನೊಟೀಸ್ ಪಡೆದ ಮೂರು ದಿನಗಳ ಒಳಗಾಗಿ ಬೇಷರತ್ ಕ್ಷಮೆ ಕೋರದಿದ್ದರೆ 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

ವಕೀಲ ಸಿವಿ ನಾಗೇಶ್ ಅವರ ಕಚೇರಿಯಿಂದ ನೊಟೀಸ್ ಕಳುಹಿಸಲಾಗಿದ್ದು, ”ನಮ್ಮ ಕಕ್ಷಿಧಾರ ಸುದೀಪ್ ಗೌರವಾನ್ವಿತ ನಟರಾಗಿದ್ದು ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ಮಾನಹಾನಿಗೆ ಯತ್ನಿಸಿದ್ದೀರ. ನಿಮ್ಮ ವಿರುದ್ಧ ಐಪಿಸಿ ಸೆಕ್ಷನ್ 499 ಹಾಗೂ 500ರ ಅಡಿಯಲ್ಲಿ ಕ್ರಿಮಿನಲ್ ಹಾಗೂ ಸಿವಿಲ್ ಮೊಕದ್ದಮೆಗಳನ್ನು ಹೂಡಲಾಗುವುದು. ನೊಟೀಸ್ ತಲುಪಿದ ಮೂರು ದಿನಗಳ ಒಳಗಾಗಿ ಉತ್ತರ ನೀಡಬೇಕು, ಅಲ್ಲದೆ ಎಲ್ಲ ಮಾಧ್ಯಮಗಳಲ್ಲಿಯೂ ಪ್ರಸಾರವಾಗುವಂತೆ ಬೇಷರತ್ ಕ್ಷಮೆ ಕೇಳಬೇಕು” ಎಂದು ನೊಟೀಸ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ನಿರ್ಮಾಪಕರಾದ ಎಂಎನ್ ಸುರೇಶ್ ಮತ್ತು ಎಂಎನ್ ಕುಮಾರ್ ಅವರುಗಳು ಇದೇ ವಿಷಯವಾಗಿ ವಾಣಿಜ್ಯ ಮಂಡಳಿಗೆ ಪತ್ರ ಬರೆದಾಗಲೂ ತಾವು ನೊಟೀಸ್ ನೀಡಿದ್ದರ ಬಗ್ಗೆಯೂ ಹೊಸ ನೊಟೀಸ್​ನಲ್ಲಿ ಉಲ್ಲೇಖಿಸಲಾಗಿದ್ದು, ತಾವು ಅವರ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರ ದುರ್ಲಾಭ ಪಡೆದುಕೊಂಡು ಅವರು ಹೀಗೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ ಸುದೀಪ್.

ನಿರ್ಮಾಪಕರುಗಳು ಸುದೀಪ್ ವಿರುದ್ಧ ಆರೋಪ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದರು ಸುದೀಪ್, ”ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ, ಇದು ತಿಳಿದಿರಲಿ’ ಎಂಬ ಸಾಲನ್ನು ಸುದೀಪ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಸುದೀಪ್ ಈಗ ಕಳಿಸಿರುವ ನೊಟೀಸ್​ಗೆ ನಿರ್ಮಾಪಕರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ