AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪ ಮಾಡಿದ ನಿರ್ಮಾಪಕರಿಗೆ ಕಿಚ್ಚ ಸುದೀಪ್ ಎಚ್ಚರಿಕೆ: ಮಾನನಷ್ಟ ಮೊಕದ್ದಮೆ ಹೂಡಲು ಸಜ್ಜು

Kichcha Sudeep: ತಮ್ಮ ವಿರುದ್ಧ ವಂಚನೆ ಆರೋಪ ಮಾಡಿದ ನಿರ್ಮಾಪಕರಿಗೆ ನೊಟೀಸ್ ಕಳಿಸಿರುವ ಸುದೀಪ್ 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಸಿದ್ದಾರೆ.

ಆರೋಪ ಮಾಡಿದ ನಿರ್ಮಾಪಕರಿಗೆ ಕಿಚ್ಚ ಸುದೀಪ್ ಎಚ್ಚರಿಕೆ: ಮಾನನಷ್ಟ ಮೊಕದ್ದಮೆ ಹೂಡಲು ಸಜ್ಜು
ಸುದೀಪ್
ಮಂಜುನಾಥ ಸಿ.
|

Updated on: Jul 08, 2023 | 11:38 AM

Share

ನಟ ಕಿಚ್ಚ ಸುದೀಪ್ (Sudeep) ವಿರುದ್ಧ ಇತ್ತೀಚೆಗೆ ಇಬ್ಬರು ನಿರ್ಮಾಪಕರು ವಂಚನೆ ಆರೋಪವನ್ನು ಮಾಡಿದ್ದರು. ಸುದ್ದಿಗೋಷ್ಠಿ ನಡೆಸಿದ್ದ ನಿರ್ಮಾಪಕರಾದ (Producer) ಎಂಎನ್ ಸುರೇಶ್ (MN Suresh) ಮತ್ತು ಎಂಎನ್ ಕುಮಾರ್, ”ಸುದೀಪ್ ಸಿನಿಮಾ ಮಾಡಿಕೊಡುವುದಾಗಿ ಹೇಳಿ ಎಂಟು ಕೋಟಿ ಅಡ್ವಾನ್ಸ್ ಹಣ ಪಡೆದಿದ್ದಾರೆ. ಆದರೆ ಹಣ ಪಡೆದು ವರ್ಷಗಳಾದರೂ ಇನ್ನೂ ಡೇಟ್ಸ್ ನೀಡಿಲ್ಲ ಎಂದಿದ್ದರು. ಅಲ್ಲದೆ, ಸುದೀಪ್, ಆರ್​ಆರ್​ ನಗರದಲ್ಲಿ ಖರೀದಿಸಿದ ಮನೆಗೆ ತಾವು ಕೊಟ್ಟ ಹಣ ಬಳಕೆ ಮಾಡಿಕೊಂಡಿದ್ದಾರೆ. ವಿಕ್ರಾಂತ್ ರೋಣ ಸಿನಿಮಾವನ್ನು ನಾವು ನಿರ್ಮಿಸಬೇಕಿತ್ತು ಅದನ್ನು ಸಹ ತಪ್ಪಿಸಿದರು ಎಂದು ಆರೋಪಿಸಿದ್ದರು.

ನಿರ್ಮಾಪಕರುಗಳ ಆರೋಪಗಳಿಗೆ ನೇರ ಪ್ರತಿಕ್ರಿಯೆ ನೀಡದಿದ್ದ ಸುದೀಪ್, ಇದೀಗ ತಮ್ಮ ವಕೀಲರಿಂದ ನೊಟೀಸ್ ಕಳುಹಿಸಿದ್ದಾರೆ. ನಿರ್ಮಾಪಕ ದ್ವಯರು ಮಾಡಿರುವ ಎಲ್ಲ ಆರೋಪಗಳು ಆಧಾರರಹಿತ, ಸುಳ್ಳುಗಳಾಗಿದ್ದು ನೊಟೀಸ್ ಪಡೆದ ಮೂರು ದಿನಗಳ ಒಳಗಾಗಿ ಬೇಷರತ್ ಕ್ಷಮೆ ಕೋರದಿದ್ದರೆ 10 ಕೋಟಿ ಮಾನನಷ್ಟೆ ಮೊಕದ್ದಮೆ ಹೂಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ:Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

ವಕೀಲ ಸಿವಿ ನಾಗೇಶ್ ಅವರ ಕಚೇರಿಯಿಂದ ನೊಟೀಸ್ ಕಳುಹಿಸಲಾಗಿದ್ದು, ”ನಮ್ಮ ಕಕ್ಷಿಧಾರ ಸುದೀಪ್ ಗೌರವಾನ್ವಿತ ನಟರಾಗಿದ್ದು ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ಮಾನಹಾನಿಗೆ ಯತ್ನಿಸಿದ್ದೀರ. ನಿಮ್ಮ ವಿರುದ್ಧ ಐಪಿಸಿ ಸೆಕ್ಷನ್ 499 ಹಾಗೂ 500ರ ಅಡಿಯಲ್ಲಿ ಕ್ರಿಮಿನಲ್ ಹಾಗೂ ಸಿವಿಲ್ ಮೊಕದ್ದಮೆಗಳನ್ನು ಹೂಡಲಾಗುವುದು. ನೊಟೀಸ್ ತಲುಪಿದ ಮೂರು ದಿನಗಳ ಒಳಗಾಗಿ ಉತ್ತರ ನೀಡಬೇಕು, ಅಲ್ಲದೆ ಎಲ್ಲ ಮಾಧ್ಯಮಗಳಲ್ಲಿಯೂ ಪ್ರಸಾರವಾಗುವಂತೆ ಬೇಷರತ್ ಕ್ಷಮೆ ಕೇಳಬೇಕು” ಎಂದು ನೊಟೀಸ್​ನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿಂದೆ ನಿರ್ಮಾಪಕರಾದ ಎಂಎನ್ ಸುರೇಶ್ ಮತ್ತು ಎಂಎನ್ ಕುಮಾರ್ ಅವರುಗಳು ಇದೇ ವಿಷಯವಾಗಿ ವಾಣಿಜ್ಯ ಮಂಡಳಿಗೆ ಪತ್ರ ಬರೆದಾಗಲೂ ತಾವು ನೊಟೀಸ್ ನೀಡಿದ್ದರ ಬಗ್ಗೆಯೂ ಹೊಸ ನೊಟೀಸ್​ನಲ್ಲಿ ಉಲ್ಲೇಖಿಸಲಾಗಿದ್ದು, ತಾವು ಅವರ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರ ದುರ್ಲಾಭ ಪಡೆದುಕೊಂಡು ಅವರು ಹೀಗೆ ಮಾಡುತ್ತಿದ್ದಾರೆಂದು ಹೇಳಿದ್ದಾರೆ ಸುದೀಪ್.

ನಿರ್ಮಾಪಕರುಗಳು ಸುದೀಪ್ ವಿರುದ್ಧ ಆರೋಪ ಮಾಡಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡು ಪರೋಕ್ಷವಾಗಿ ಪ್ರತಿಕ್ರಿಯೆ ನೀಡಿದ್ದರು ಸುದೀಪ್, ”ದುರುಪಯೋಗಕ್ಕೆ ಅಥವಾ ವಂಚನೆಗೆ ನನ್ನ ಒಳ್ಳೆಯತನ ಒಂದು ಸಾಧನ ಅಲ್ಲ. ಸತ್ಯವಾಗಿದ್ದಾಗ ಅದು ಪ್ರಜ್ವಲಿಸುತ್ತದೆ. ದುರಹಂಕಾರದಿಂದ ಅದರ ಕಾಂತಿ ಕಳೆಗುಂದಲು ನಾನು ಬಿಡುವುದಿಲ್ಲ. ವಿನಯದಿಂದಿರಿ, ಸತ್ಯವಂತರಾಗಿರಿ, ಇದು ತಿಳಿದಿರಲಿ’ ಎಂಬ ಸಾಲನ್ನು ಸುದೀಪ್​ ಅವರು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಸುದೀಪ್ ಈಗ ಕಳಿಸಿರುವ ನೊಟೀಸ್​ಗೆ ನಿರ್ಮಾಪಕರು ಹೇಗೆ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ