AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್

Kichcha Sudeep: ಪ್ರಕಾಶ್ ರಾಜ್ ಸೇರಿ ಅನೇಕರು ಸುದೀಪ್ ಬಗ್ಗೆ ನೇರವಾದ ಮಾತುಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇವುಗಳ ಬಗ್ಗೆ ಸುದೀಪ್ ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ.

ಬಿಜೆಪಿಗೆ ಬೆಂಬಲ ಘೋಷಿಸಿದ ಬೆನ್ನಲ್ಲೇ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆದ ಕಿಚ್ಚ ಸುದೀಪ್; ಸೆಟ್​ನ ಫೋಟೋ ಲೀಕ್
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Apr 07, 2023 | 7:50 AM

Share

ಕಿಚ್ಚ ಸುದೀಪ್ ಅವರು ಇತ್ತೀಚೆಗೆ ಬಿಜೆಪಿಗೆ ಬೆಂಬಲ ಘೋಷಿಸಿದರು. ಮೇ 10ರಂದು ನಡೆಯುವ ಚುನಾವಣೆಯಲ್ಲಿ ಗೆಲ್ಲಲೇಬೇಕು ಎನ್ನುವ ಹುಮ್ಮಸ್ಸಿನಲ್ಲಿರುವ ಬಿಜೆಪಿ ಪರ ಸುದೀಪ್ ನಿಂತಿರುವುದು ಕಮಲ ಪಡೆಗೆ ದೊಡ್ಡ ಬಲ ಸಿಕ್ಕಂತೆ ಆಗಿದೆ. ಸುದೀಪ್ (Kichcha Sudeep) ರಾಜಕೀಯ ಪಕ್ಷದ ಪರ ನಿಂತಿರುವ ಬಗ್ಗೆ ಸಾಕಷ್ಟು ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಹೀಗಿರುವಾಗಲೇ ಸುದೀಪ್ ಅವರು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಬಿಗ್ ಬಾಸ್ ರಾಜೀವ್ ನಟನೆಯ ‘ಉಸಿರೇ ಉಸಿರೇ’ ಸಿನಿಮಾದಲ್ಲಿ (Usire Usire Movie) ಕಿಚ್ಚ ಅತಿಥಿ ಪಾತ್ರ ಮಾಡುತ್ತಿದ್ದಾರೆ. ತಮ್ಮ ಭಾಗದ ಶೂಟ್ ಪೂರ್ಣಗೊಳಿಸಲು ಅವರು ಸೆಟ್​ಗೆ ಬಂದಿದ್ದಾರೆ. ಸೆಟ್​ನ ಫೋಟೋ ಅನ್ನು ಕೆಲವರು ಲೀಕ್ ಮಾಡಿದ್ದಾರೆ.

ಕಿಚ್ಚ ಸುದೀಪ್ ಅವರು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡಿದ್ದಕ್ಕೆ ಅನೇಕರು ಅಸಮಾಧಾನ ಹೊರಹಾಕಿದ್ದಾರೆ. ಪ್ರಕಾಶ್ ರಾಜ್ ಸೇರಿ ಅನೇಕರು ಸುದೀಪ್ ಬಗ್ಗೆ ನೇರವಾದ ಮಾತುಗಳಲ್ಲಿ ಅಸಮಾಧಾನ ಹೊರಹಾಕಿದ್ದಾರೆ. ಆದರೆ, ಇವುಗಳ ಬಗ್ಗೆ ಸುದೀಪ್ ಅಷ್ಟಾಗಿ ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಅವರು ‘ಉಸಿರೇ ಉಸಿರೇ’ ಸಿನಿಮಾ ಶೂಟ್​ನಲ್ಲಿ ಬ್ಯುಸಿ ಇದ್ದಾರೆ.

‘ಉಸಿರೇ ಉಸಿರೇ’ ಚಿತ್ರದ ಹೀರೋ ರಾಜೀವ್ ‘ಕನ್ನಡ ಬಿಗ್​ ಬಾಸ್ ಸೀಸನ್ 8’ರಲ್ಲಿ ಸ್ಪರ್ಧಿಯಾಗಿದ್ದರು. ರಾಜೀವ್ ಹಾಗೂ ಕಿಚ್ಚ ಸುದೀಪ್​ ನಡುವೆ ಒಳ್ಳೆಯ ಗೆಳೆತನವಿದೆ. ಸುದೀಪ್ ಅವರನ್ನು ರಾಜೀವ್ ಪ್ರೀತಿಯಿಂದ ಅಣ್ಣ ಎಂದೇ ಸಂಭೋದಿಸುತ್ತಾರೆ​. ಇಬ್ಬರಿಗೂ ಕ್ರಿಕೆಟ್​ ಮೇಲೆ ಎಲ್ಲಿಲ್ಲದ ಆಸಕ್ತಿ. ಇಬ್ಬರ ನಡುವೆ ಒಳ್ಳೆಯ ಬಾಂಧವ್ಯ ಬೆಳೆಯೋಕೆ ಸಿಸಿಎಲ್​ ಕೂಡ ಕಾರಣ. ಹೀಗಾಗಿ ರಾಜೀವ್​ ನಟಿಸುತ್ತಿರುವ ‘ಉಸಿರೇ ಉಸಿರೇ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ಕೂಡ ಬಣ್ಣ ಹಚ್ಚುತ್ತಿದ್ದಾರೆ. ಸುದೀಪ್ ಅವರು ಈ ಚಿತ್ರಕ್ಕಾಗಿ ಎರಡು ದಿನಗಳ ಕಾಲ್​ಶೀಟ್ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ:ಸುದೀಪ್, ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ, ಜನ ದನಿ ಎದುರಿಸಲು ತಯಾರಾಗಿ: ಪ್ರಕಾಶ್ ರಾಜ್ 

‘ವಿಕ್ರಾಂತ್ ರೋಣ’ ತೆರೆಕಂಡ ಬಳಿಕ ಸುದೀಪ್ ಅವರ ಹೊಸ ಸಿನಿಮಾ ಘೋಷಣೆ ಆಗಿಲ್ಲ. ಸುದೀಪ್ ಅವರು ಬ್ಯಾಕ್​ ಟು ಬ್ಯಾಕ್ 3 ಸಿನಿಮಾ ಒಪ್ಪಿಕೊಂಡಿದ್ದಾರೆ. ಚುನಾವಣೆ ಪ್ರಚಾರ ಮುಗಿದ ಬಳಿಕ ಅವರು ಈ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿಗೆ ಮಾಮ ಅಂತ ಸುದೀಪ್​ ಕರೆಯೋದು ಯಾಕೆ? ಇಲ್ಲಿದೆ ಕಿಚ್ಚ ನೀಡಿದ ವಿವರಣೆ

ಎನ್. ಗೊಂಬೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರದೀಪ್ ಯಾದವ್ ‘ಉಸಿರೇ ಉಸಿರೇ’ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಿ.ಎಂ. ವಿಜಯ್ ನಿರ್ದೇಶನ ಮಾಡುತ್ತಿದ್ದಾರೆ. ರಾಜೀವ್​ಗೆ ನಾಯಕಿಯಾಗಿ ಶ್ರೀಜಿತ ಘೋಷ್ ನಟಿಸುತ್ತಿದ್ದು, ಇದು ಅವರ ಕನ್ನಡದ ಚೊಚ್ಚಲ ಚಿತ್ರ. ಖ್ಯಾತ ನಟ ಅಲಿ ಕೂಡ ಈ ಸಿನಿಮಾದಲ್ಲಿದ್ದಾರೆ. ತಾರಾ, ಸುಚೇಂದ್ರ ಪ್ರಸಾದ್, ರಾಜೇಶ್ ನಟರಂಗ, ಬ್ರಹ್ಮಾನಂದಮ್, ಸಾಧುಕೋಕಿಲ, ದೇವರಾಜ್, ಮಂಜು ಪಾವಗಡ, ಮುಂತಾದವರು ತಾರಾಬಳಗದಲ್ಲಿದ್ದಾರೆ. ಚಿತ್ರಕ್ಕೆ ವಿವೇಕ್ ಚಕ್ರವರ್ತಿ ಸಂಗೀತ ನೀಡುತ್ತಿದ್ದಾರೆ. ಸರವಣನ್ ಛಾಯಾಗ್ರಹಣ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:07 am, Fri, 7 April 23

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!