AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​

Kichcha Sudeep | Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ ಎಂಬುದು ಕಿಚ್ಚ ಸುದೀಪ್​ ಅಭಿಪ್ರಾಯ.

‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
ಪುನೀತ್​ ರಾಜ್​ಕುಮಾರ್​, ಕಿಚ್ಚ ಸುದೀಪ್​
Follow us
TV9 Web
| Updated By: ಮದನ್​ ಕುಮಾರ್​

Updated on:Aug 24, 2022 | 10:17 AM

ಸೆಪ್ಟೆಂಬರ್ 9 ಯಾವಾಗ ಬರುತ್ತೆ ಎಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಯಾಕೆಂದರೆ, ಅಂದು ಅವರ ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾ ಬಿಡುಗಡೆ ಆಗಲಿದೆ. ಅಪ್ಪು ನಿಧನರಾಗುವುದಕ್ಕೂ ಮುನ್ನ ಈ ಚಿತ್ರದಲ್ಲಿ ನಟಿಸಿದ್ದರು. ಅವರನ್ನು ಬೆಳ್ಳಿ ಪರದೆ ಮೇಲೆ ನೋಡಲು ಸಿಗುತ್ತಿರುವ ಅವಕಾಶವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ ಎಂದು ಕಿಚ್ಚ ಸುದೀಪ್ (Kichcha Sudeep)​ ಹೇಳಿದ್ದಾರೆ. ಈ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ ಬೆಂಗಳೂರಿನಲ್ಲಿ ಮಂಗಳವಾರ (ಆಗಸ್ಟ್​ 23) ರಾತ್ರಿ ನಡೆಯಿತು. ಆ ಇವೆಂಟ್​ಗೆ ಸುದೀಪ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಅವರು ಪುನೀತ್​ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು.

‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

‘ಲಕ್ಕಿ ಮ್ಯಾನ್​’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾ​ರ್​ ಅವರು ಒಟ್ಟಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದನ್ನು ದೊಡ್ಡ ಪರದೆಯಲ್ಲಿ ನೋಡುವುದೇ ಒಂದು ಹಬ್ಬ. ಅದಕ್ಕಾಗಿ ಅಭಿಮಾನಿಗಳೆಲ್ಲ ಕಾದಿದ್ದಾರೆ. ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪಿ.ಆರ್​. ಮೀನಾಕ್ಷಿ ಸುಂದರಂ, ಆರ್​. ಸುಂದರ ಕಾಮರಾಜ್​ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Lucky Man Teaser: ‘ನಿನಗೆ 2ನೇ ಚಾನ್ಸ್​ ಕೊಡ್ತೀನಿ’; ಲಕ್ಕಿ ಮ್ಯಾನ್​ಗೆ ದೇವರ ರೂಪದಲ್ಲಿ ವರ ನೀಡಿದ ಪುನೀತ್​ ರಾಜ್​ಕುಮಾರ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಆಡಿಯೋ ರಿಲೀಸ್​ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್​ಕುಮಾರ್​, ರಾಕ್​ಲೈನ್​ ವೆಂಕಟೇಶ್​, ಭಾ.ಮಾ. ಹರೀಶ್​, ಸುಂದರ್​ ರಾಜ್​ ಮುಂತಾದವರು ಕೂಡ ಆಗಮಿಸಿದ್ದರು. ಸಹೋದರನ ಚಿತ್ರಕ್ಕೆ ರಾಘಣ್ಣ ಮನಸಾರೆ ಹರಸಿದರು. ಯುವ ರಾಜ್​ಕುಮಾರ್​ ಹಾಗೂ ವಿನಯ್​ ರಾಜ್​ಕುಮಾರ್ ಕೂಡ ಅಪ್ಪು ಬಗ್ಗೆ ಮಾತನಾಡಿದರು. ಈ ಚಿತ್ರಕ್ಕೆ ವಿ2 ವಿಜಯ್​ ವಿಕ್ಕಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಜೊತೆ ಸಂಗೀತಾ ಶೃಂಗೇರಿ ಮತ್ತು ರೋಷನಿ ಪ್ರಕಾಶ್​ ಅವರು ನಾಯಕಿಯರಾಗಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:17 am, Wed, 24 August 22

ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು