AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​

Kichcha Sudeep | Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ ಎಂಬುದು ಕಿಚ್ಚ ಸುದೀಪ್​ ಅಭಿಪ್ರಾಯ.

‘ಲಕ್ಕಿ ಮ್ಯಾನ್​​ ಸಿನಿಮಾವನ್ನು ಎಲ್ಲರೂ ತಬ್ಬಿಕೊಳ್ಳಿ,​ ಮತ್ತೆ ಬೇಕು ಅಂದ್ರೂ ಇದು ಸಿಗಲ್ಲ’; ಕಿಚ್ಚ ಸುದೀಪ್​
ಪುನೀತ್​ ರಾಜ್​ಕುಮಾರ್​, ಕಿಚ್ಚ ಸುದೀಪ್​
TV9 Web
| Edited By: |

Updated on:Aug 24, 2022 | 10:17 AM

Share

ಸೆಪ್ಟೆಂಬರ್ 9 ಯಾವಾಗ ಬರುತ್ತೆ ಎಂದು ಪುನೀತ್​ ರಾಜ್​ಕುಮಾರ್​ (Puneeth Rajkumar) ಅಭಿಮಾನಿಗಳು ಕಾಯುತ್ತಾ ಇದ್ದಾರೆ. ಯಾಕೆಂದರೆ, ಅಂದು ಅವರ ‘ಲಕ್ಕಿ ಮ್ಯಾನ್​’ (Lucky Man Movie) ಸಿನಿಮಾ ಬಿಡುಗಡೆ ಆಗಲಿದೆ. ಅಪ್ಪು ನಿಧನರಾಗುವುದಕ್ಕೂ ಮುನ್ನ ಈ ಚಿತ್ರದಲ್ಲಿ ನಟಿಸಿದ್ದರು. ಅವರನ್ನು ಬೆಳ್ಳಿ ಪರದೆ ಮೇಲೆ ನೋಡಲು ಸಿಗುತ್ತಿರುವ ಅವಕಾಶವನ್ನು ಯಾರೂ ಮಿಸ್​ ಮಾಡಿಕೊಳ್ಳಬೇಡಿ ಎಂದು ಕಿಚ್ಚ ಸುದೀಪ್ (Kichcha Sudeep)​ ಹೇಳಿದ್ದಾರೆ. ಈ ಸಿನಿಮಾದ ಆಡಿಯೋ ರಿಲೀಸ್​ ಕಾರ್ಯಕ್ರಮ ಬೆಂಗಳೂರಿನಲ್ಲಿ ಮಂಗಳವಾರ (ಆಗಸ್ಟ್​ 23) ರಾತ್ರಿ ನಡೆಯಿತು. ಆ ಇವೆಂಟ್​ಗೆ ಸುದೀಪ್​ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ವೇದಿಕೆ ಮೇಲೆ ಮಾತನಾಡಿದ ಅವರು ಪುನೀತ್​ ಬಗ್ಗೆ ಭಾವುಕ ನುಡಿಗಳನ್ನು ಹಂಚಿಕೊಂಡರು.

‘ಈ ಸಿನಿಮಾ ರಿಲೀಸ್​ ಆದಾಗ ಎಲ್ಲರೂ ಎರಡೂ ಕೈಗಳನ್ನು ಚಾಚಿ ತಬ್ಬಿಕೊಂಡು ನೋಡಿ. ಯಾಕೆಂದರೆ, ಮತ್ತೆ ಬೇಕು ಎಂದರೂ ಕೂಡ ಇದು ಸಿಗಲ್ಲ. ಇರುವಾಗ ನಾವು ಬೆಲೆ ಕೊಡುತ್ತೇವೆ. ಕಳೆದುಕೊಂಡ ನಂತರ ಅದಕ್ಕೆ ಇನ್ನೂ ಜಾಸ್ತಿ ಬೆಲೆ ಕೊಡುತ್ತೇವೆ. ಈ ಸಿನಿಮಾದಲ್ಲಿ ಪುನೀತ್​ ರಾಜ್​ಕುಮಾರ್​ ಅವರು ದೇವರ ಪಾತ್ರ ಮಾಡಿದ್ದಾರೆ. ಅದೊಂದು ನಂಬಿಕೆ. ಅವರು ಬದುಕಿದ ರೀತಿಯೇ ಆಗಿತ್ತು. ನಾವೆಲ್ಲರೂ ಅವರನ್ನು ಮಿಸ್​ ಮಾಡಿಕೊಳ್ಳುತ್ತೇವೆ. ಆದರೆ ಟ್ರೇಲರ್​ ನೋಡುವಾಗ ನಾನು ಸ್ಮೈಲ್​ ಮಾಡುತ್ತಿದ್ದೆ. ಯಾಕೆಂದರೆ ಅವರಿಗೆ ಈ ಸಿನಿಮಾ ಹೆಚ್ಚು ಹೊಂದಿಕೆ ಆಗುತ್ತಿದೆ. ಎಲ್ಲರೂ ಈ ಸಿನಿಮಾವನ್ನು ತಬ್ಬಿಕೊಂಡು ಅನುಭವಿಸಿ’ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ.

‘ಲಕ್ಕಿ ಮ್ಯಾನ್​’ ಸಿನಿಮಾದ ಒಂದು ಹಾಡಿನಲ್ಲಿ ಪ್ರಭುದೇವ ಮತ್ತು ಪುನೀತ್​ ರಾಜ್​ಕುಮಾ​ರ್​ ಅವರು ಒಟ್ಟಿಗೆ ಡ್ಯಾನ್ಸ್​ ಮಾಡಿದ್ದಾರೆ. ಅದನ್ನು ದೊಡ್ಡ ಪರದೆಯಲ್ಲಿ ನೋಡುವುದೇ ಒಂದು ಹಬ್ಬ. ಅದಕ್ಕಾಗಿ ಅಭಿಮಾನಿಗಳೆಲ್ಲ ಕಾದಿದ್ದಾರೆ. ಪ್ರಭುದೇವ ಅವರ ಸಹೋದರ ಎಸ್​. ನಾಗೇಂದ್ರ ಪ್ರಸಾದ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಪಿ.ಆರ್​. ಮೀನಾಕ್ಷಿ ಸುಂದರಂ, ಆರ್​. ಸುಂದರ ಕಾಮರಾಜ್​ ಅವರು ನಿರ್ಮಾಣ ಮಾಡಿದ್ದಾರೆ.

ಇದನ್ನೂ ಓದಿ
Image
‘ದೇವರ ಪಾತ್ರದಲ್ಲಿ ದೇವ್ರನ್ನೇ ನೋಡಲು ಕಾಯ್ತಿದೀನಿ’: ಪುನೀತ್​ ಬಗ್ಗೆ ಯುವ ರಾಜ್​ಕುಮಾರ್​ ಭಾವುಕ ನುಡಿ
Image
ಪುನೀತ್ ನಟನೆಯ ‘ಲಕ್ಕಿ ಮ್ಯಾನ್​’ ಚಿತ್ರದ ಆಡಿಯೋ ರಿಲೀಸ್ ಲೈವ್ ನೋಡಿ
Image
Lucky Man Teaser: ‘ನಿನಗೆ 2ನೇ ಚಾನ್ಸ್​ ಕೊಡ್ತೀನಿ’; ಲಕ್ಕಿ ಮ್ಯಾನ್​ಗೆ ದೇವರ ರೂಪದಲ್ಲಿ ವರ ನೀಡಿದ ಪುನೀತ್​ ರಾಜ್​ಕುಮಾರ್​
Image
Puneeth Rajkumar: ‘ಲಕ್ಕಿ ಮ್ಯಾನ್​’ ಚಿತ್ರದಲ್ಲಿನ ಪುನೀತ್​ ಪೋಟೋಗಳು; ‘ನಮ್ಮ ಬಾಸ್​ ಸೂಪರ್​’ ಎಂದ ಫ್ಯಾನ್ಸ್​

ಆಡಿಯೋ ರಿಲೀಸ್​ ಕಾರ್ಯಕ್ರಮಕ್ಕೆ ರಾಘವೇಂದ್ರ ರಾಜ್​ಕುಮಾರ್​, ರಾಕ್​ಲೈನ್​ ವೆಂಕಟೇಶ್​, ಭಾ.ಮಾ. ಹರೀಶ್​, ಸುಂದರ್​ ರಾಜ್​ ಮುಂತಾದವರು ಕೂಡ ಆಗಮಿಸಿದ್ದರು. ಸಹೋದರನ ಚಿತ್ರಕ್ಕೆ ರಾಘಣ್ಣ ಮನಸಾರೆ ಹರಸಿದರು. ಯುವ ರಾಜ್​ಕುಮಾರ್​ ಹಾಗೂ ವಿನಯ್​ ರಾಜ್​ಕುಮಾರ್ ಕೂಡ ಅಪ್ಪು ಬಗ್ಗೆ ಮಾತನಾಡಿದರು. ಈ ಚಿತ್ರಕ್ಕೆ ವಿ2 ವಿಜಯ್​ ವಿಕ್ಕಿ ಸಂಗೀತ ನೀಡಿದ್ದಾರೆ. ಡಾರ್ಲಿಂಗ್​ ಕೃಷ್ಣ ಜೊತೆ ಸಂಗೀತಾ ಶೃಂಗೇರಿ ಮತ್ತು ರೋಷನಿ ಪ್ರಕಾಶ್​ ಅವರು ನಾಯಕಿಯರಾಗಿ ನಟಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:17 am, Wed, 24 August 22

ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್