AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ಜುಲೈ 6 ಎಂದರೆ ಸುದೀಪ್​ ಪಾಲಿಗೆ ಭಾರಿ ವಿಶೇಷ; ‘ಹುಚ್ಚ’ ಚಿತ್ರ ತೆರೆಕಂಡು ಕಳೆಯಿತು 22 ವರ್ಷ

Kichcha Sudeep Movies: ‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ 22 ವರ್ಷ ಹಾಗೂ ‘ಈಗ’ ಚಿತ್ರ ತೆರೆಕಂಡು 11 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಆ ಸಿನಿಮಾಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ.

Kichcha Sudeep: ಜುಲೈ 6 ಎಂದರೆ ಸುದೀಪ್​ ಪಾಲಿಗೆ ಭಾರಿ ವಿಶೇಷ; ‘ಹುಚ್ಚ’ ಚಿತ್ರ ತೆರೆಕಂಡು ಕಳೆಯಿತು 22 ವರ್ಷ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on: Jul 06, 2023 | 5:05 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಭಾರತೀಯ ಚಿತ್ರರಂಗದಲ್ಲಿ ಸ್ಟಾರ್​ ಹೀರೋ ಆಗಿ ಮಿಂಚುತ್ತಿದ್ದಾರೆ. ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದು 1997ರಲ್ಲಿ. ಅಂದಿನಿಂದ ಇಂದಿನ ತನಕ ಬಣ್ಣದ ಲೋಕದಲ್ಲಿ ಬೇಡಿಕೆ ಉಳಿಸಿಕೊಳ್ಳುವುದು ಸುಲಭದ ಮಾತಲ್ಲ. ಅನೇಕ ಏಳು-ಬೀಳುಗಳನ್ನು ಕಂಡವರು ಕಿಚ್ಚ ಸುದೀಪ್​. ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ಬಿಗ್​ ಬಾಸ್​ ನಿರೂಪಕನಾಗಿ ಅವರು ಹಂತ-ಹಂತವಾಗಿ ಬೆಳೆದುಬಂದರು. ಅವರ ವೃತ್ತಿ ಜೀವನದಲ್ಲಿ ಕೆಲವು ಸಿನಿಮಾಗಳಿಗೆ ವಿಶೇಷ ಸ್ಥಾನ ಇದೆ. ಆ ಪಟ್ಟಿಯಲ್ಲಿ ‘ಹುಚ್ಚ’ (Huchcha Movie) ಮತ್ತು ‘ಈಗ’ ಸಿನಿಮಾಗಳು ಕೂಡ ಇವೆ. ಈ ಎರಡೂ ಸಿನಿಮಾಗಳು ತೆರೆಕಂಡಿದ್ದು ಜುಲೈ 6ರಂದು ಎಂಬುದು ವಿಶೇಷ.

2001ರ ಜುಲೈ 6ರಂದು ‘ಹುಚ್ಚ’ ಸಿನಿಮಾ ತೆರೆಕಂಡಿತು. ಇಂದಿಗೆ ಬರೋಬ್ಬರಿ 22 ವರ್ಷ ಪೂರೈಸಿದೆ. ‘ಹುಚ್ಚ’ ಚಿತ್ರಕ್ಕೆ ಓಂ ಪ್ರಕಾಶ್​ ರಾವ್​ ನಿರ್ದೇಶನ ಮಾಡಿದ್ದರು. ರಾಜೇಶ್​ ರಾಮನಾಥ್​ ಸಂಗೀತ ನೀಡಿದ್ದರು. ಆ ಸಿನಿಮಾದ ‘ಉಸಿರೇ ಉಸಿರೇ..’ ಹಾಡನ್ನು ಅಭಿಮಾನಿಗಳು ಈಗಲೂ ಗುನುಗುತ್ತಾರೆ. ಸುದೀಪ್ ಅವರಿಗೆ ಜೋಡಿಯಾಗಿ ರೇಖಾ ವೇದವ್ಯಾಸ್​ ನಟಿಸಿದ್ದರು. 22 ವರ್ಷ ಕಳೆದರೂ ಅಭಿಮಾನಿಗಳ ಫೇವರಿಟ್​ ಪಟ್ಟಿಯಲ್ಲಿ ‘ಹುಚ್ಚ’ ಸಿನಿಮಾಗೆ ಸ್ಥಾನ ಇದೆ. ಅದರಲ್ಲಿನ ಸುದೀಪ್​ ಅವರ ನಟನೆಗೆ ಫಿದಾ ಆಗದವರಿಲ್ಲ.

ಸುದೀಪ್​ ಅಭಿನಯದ ‘ಈಗ’ ಸಿನಿಮಾ 2012ರ ಜುಲೈ 6ರಂದು ಬಿಡುಗಡೆ ಆಯಿತು. ನಿರ್ದೇಶಕ ರಾಜಮೌಳಿ ಅವರ ಜೊತೆ ಕಿಚ್ಚ ಸುದೀಪ್​ ಅವರ ಕಾಂಬಿನೇಷನ್​ಗೆ ಜನರು ಫಿದಾ ಆದರು. ತುಂಬ ಡಿಫರೆಂಟ್​ ಆದ ಕಾನ್ಸೆಪ್ಟ್​ನಲ್ಲಿ ಮೂಡಿಬಂದ ಆ ಪ್ಯಾನ್​ ಇಂಡಿಯಾ ಚಿತ್ರದಲ್ಲಿ ಗ್ರಾಫಿಕ್ಸ್​ ಬಳಕೆ ಹೇರಳವಾಗಿತ್ತು. ಸುದೀಪ್​ ಅವರು ನೆಗೆಟಿವ್​ ಶೇಡ್​ನ ಪಾತ್ರದಲ್ಲಿ ಕಾಣಿಸಿಕೊಂಡು ಚಪ್ಪಾಳೆ ಗಿಟ್ಟಿಸಿದರು. ಬಾಕ್ಸ್​ ಆಫೀಸ್​ನಲ್ಲಿ ‘ಈಗ’ ಸಿನಿಮಾ ಸೂಪರ್​ ಹಿಟ್​ ಆಯಿತು. ಆ ಗೆಲುವಿಗೆ ಈಗ 11 ವರ್ಷ ಆಗಿದೆ.

ಇದನ್ನೂ ಓದಿ: Kichcha Sudeep: ಕ್ಯಾನ್ಸರ್​ನಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯನ್ನು ಭೇಟಿಯಾಗಿ ಆಸೆ ಈಡೇರಿಸಿದ ಕಿಚ್ಚ ಸುದೀಪ್​

‘ಹುಚ್ಚ’ ಸಿನಿಮಾ ಬಿಡುಗಡೆಯಾಗಿ 22 ವರ್ಷ ಹಾಗೂ ‘ಈಗ’ ಚಿತ್ರ ತೆರೆಕಂಡು 11 ವರ್ಷಗಳು ಕಳೆದಿರುವ ಈ ಸಂದರ್ಭದಲ್ಲಿ ಅಭಿಮಾನಿಗಳು ಸೋಶಿಯಲ್​ ಮೀಡಿಯಾದಲ್ಲಿ ಆ ಸಿನಿಮಾಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಂದಿನ ಕಾಲ ಹೇಗಿತ್ತು ಎಂಬುದನ್ನು ಮೆಲುಕು ಹಾಕಲಾಗುತ್ತಿದೆ. ಪ್ರಸ್ತುತ ಸುದೀಪ್​ ಅವರು 46ನೇ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಟೀಸರ್​ ಇತ್ತೀಚೆಗಷ್ಟೇ ರಿಲೀಸ್​ ಆಗಿ ಹವಾ ಎಬ್ಬಿಸಿದೆ. ಈ ಸಿನಿಮಾದಲ್ಲಿ ಭರ್ಜರಿ ಆ್ಯಕ್ಷನ್​ ಇರಲಿದೆ ಎಂಬುದು ಟೀಸರ್​ ನೋಡಿದರೆ ಗೊತ್ತಾಗುತ್ತದೆ. ವಿಜಯ್​ ಕಾರ್ತಿಕೇಯ ಅವರು ನಿರ್ದೇಶನ ಮಾಡುತ್ತಿದ್ದು, ಕಾಲಿವುಡ್​ ನಿರ್ಮಾಪಕ ಕಲೈಪುಲಿ ಎಸ್​. ಧಾನು ಅವರು ಬಂಡವಾಳ ಹೂಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!