AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ 47ನೇ ಸಿನಿಮಾ ಹೆಸರು ‘ಮಾರ್ಕ್’: ಸಖತ್ ಮಾಸ್ ಆಗಿದೆ ಟೈಟಲ್ ಟೀಸರ್

ನಟ ಕಿಚ್ಚ ಸುದೀಪ್ ಅವರು ತಮ್ಮ 47ನೇ ಸಿನಿಮಾದ ಕೆಲಸಗಳನ್ನು ಪಟಪಟನೆ ಮುಗಿಸುತ್ತಿದ್ದಾರೆ. ಈ ಸಿನಿಮಾದ ಟೈಟಲ್ ಏನು ಎಂಬುದನ್ನು ಚಿತ್ರತಂಡ ಈಗ ಬಹಿರಂಗಪಡಿಸಿದೆ. ‘ಮಾರ್ಕ್’ ಎಂದು ಹೆಸರು ಇಡಲಾಗಿದೆ. ಇದನ್ನು ತಿಳಿಸಲು ರಗಡ್ ಆದಂತಹ ಟೀಸರ್ ಅನಾವರಣ ಮಾಡಲಾಗಿದೆ. ಚಿತ್ರದ ಬಗ್ಗೆ ಇಲ್ಲಿದೆ ಇನ್ನಷ್ಟು ಮಾಹಿತಿ..

ಸುದೀಪ್ 47ನೇ ಸಿನಿಮಾ ಹೆಸರು ‘ಮಾರ್ಕ್’: ಸಖತ್ ಮಾಸ್ ಆಗಿದೆ ಟೈಟಲ್ ಟೀಸರ್
Kichcha Sudeep
ಮದನ್​ ಕುಮಾರ್​
| Edited By: |

Updated on:Sep 05, 2025 | 2:33 PM

Share

ಅಭಿಮಾನಿಗಳು ಕಿಚ್ಚ ಸುದೀಪ್ (Kichcha Sudeep) ಅವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಸಜ್ಜಾಗಿದ್ದಾರೆ. ಸೆಪ್ಟೆಂಬರ್ 2ರಂದು ಸುದೀಪ್ ಬರ್ತ್​ಡೇ. ಆ ಖುಷಿಯನ್ನು ಹೆಚ್ಚಿಸಲು ಒಂದು ದಿನ ಮೊದಲೇ ಹೊಸ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿದೆ. ಕಿಚ್ಚ ಸುದೀಪ್ ಅಭಿನಯದ 47ನೇ ಸಿನಿಮಾ ಇದಾಗಿದ್ದು, ಟೈಟಲ್ ಏನು ಎಂಬುದನ್ನು ಈ ಟೀಸರ್ ಮೂಲಕ ತಿಳಿಸಲಾಗಿದೆ. ಇಷ್ಟು ದಿನ ಈ ಸಿನಿಮಾವನ್ನು ತಾತ್ಕಾಲಿಕವಾಗಿ ‘K 47’ ಎಂದು ಕರೆಯಲಾಗುತ್ತಿತ್ತು. ಈ ಚಿತ್ರದ ಶೀರ್ಷಿಕೆ ‘ಮಾರ್ಕ್’ (Mark Movie) ಎಂಬುದು ಈಗ ಬಹಿರಂಗ ಆಗಿದೆ.

‘ಮಾರ್ಕ್’ ಸಿನಿಮಾದ ಮೇಲೆ ಅಭಿಮಾನಿಗಳು ಸಖತ್ ನಿರೀಕ್ಷೆ ಹೊಂದಿದ್ದಾರೆ. ‘ಸತ್ಯಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್ಸ್’ ಬ್ಯಾನರ್‌ಗಳು ಜೊತೆಯಾಗಿ ಈ ಸಿನಿಮಾವನ್ನು ನಿರ್ಮಿಸುತ್ತಿವೆ. ಇದು ಸುದೀಪ್ ಅವರ ವೃತ್ತಿಜೀವನದಲ್ಲಿ ಒಂದು ಮೈಲಿಗಲ್ಲಾಗಲಿದೆ ಎಂದು ಚಿತ್ರತಂಡ ಹೇಳಿದೆ. ಟೈಟಲ್ ಟೀಸರ್ ನೋಡಿದ ಸುದೀಪ್ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

ಈ ಮೊದಲು ‘ಮ್ಯಾಕ್ಸ್’ ಸಿನಿಮಾದ ಮೂಲಕ ನಿರ್ದೇಶಕ ವಿಜಯ್ ಕಾರ್ತಿಕೇಯ ಅವರು ಬ್ಲಾಕ್ ಬಸ್ಟರ್ ಹಿಟ್ ನೀಡಿದ್ದರು. ಅವರೇ ಈಗ ‘ಮಾರ್ಕ್’ ಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ. ಸುದೀಪ್ ಮತ್ತು ವಿಜಯ್ ಕಾರ್ತಿಕೇಯ ಅವರ ಕಾಂಬಿನೇಷನ್​​ನಲ್ಲಿ ಬರುತ್ತಿರುವ ಎರಡನೇ ಸಿನಿಮಾ ಇದು. ಆ ಕಾರಣದಿಂದಲೂ ನಿರೀಕ್ಷೆ ಜೋರಾಗಿದೆ.

‘ಮಾರ್ಕ್’ ಸಿನಿಮಾ ಟೈಟಲ್ ಟೀಸರ್:

ಈ ಸಿನಿಮಾಗೆ ಅರ್ಜುನ್ ತ್ಯಾಗರಾಜನ್ ಮತ್ತು ಸೆಂಥಿಲ್ ತ್ಯಾಗರಾಜನ್ ಅವರು ಬಂಡವಾಳ ಹೂಡಿದ್ದಾರೆ. ಸಿನಿಮಾ ತಂಡದಲ್ಲಿ ಅನುಭವಿ ಕಲಾವಿದರು ಮತ್ತು ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಬಿ. ಲೋಕನಾಥ್ ಅವರು ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಶೇಖರ್ ಚಂದ್ರ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಇದನ್ನೂ ಓದಿ: ‘ಸು ಫ್ರಮ್ ಸೋ’ ನಿರ್ದೇಶಕರ ಜೊತೆ ಸುದೀಪ್ ಸಿನಿಮಾ ಮಾತುಕತೆ ನಡೆದಿದೆಯಾ?

ಎಂ.ಟಿ. ಶ್ರೀರಾಮ್ ಅವರ ‘ಮಾರ್ಕ್’ ಸಿನಿಮಾಗೆ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವ ನೀಡಲಿದೆ ಎಂದು ನಿರ್ಮಾಪಕ ಟಿ.ಜಿ. ತ್ಯಾಗರಾಜನ್ ಅವರು ಹೇಳಿದ್ದಾರೆ. ಟೈಟಲ್ ಟೀಸರ್ ಮೂಲಕ ಸಿನಿಮಾದ ಕಥೆ ಬಗ್ಗೆ ಸುಳಿವು ನೀಡಲಾಗಿದೆ. ಸಿನಿಮಾ ಶೂಟಿಂಗ್‌ ಸದ್ಯದಲ್ಲೇ ಮುಕ್ತಾಯ ಆಗಲಿದೆ. ಇದೇ ವರ್ಷ ಕ್ರಿಸ್​​ಮಸ್ ಹಬ್ಬಕ್ಕೆ ‘ಮಾರ್ಕ್’ ಬಿಡುಗಡೆ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:10 pm, Mon, 1 September 25

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!
ಕ್ಷಮೆ ಕೇಳಿದ ಮೇಲೂ ಕೆನ್ನೆಗೆ ಬಾರಿಸಿದ ಯುವತಿಗೆ ಮನಬಂದಂತೆ ಥಳಿಸಿದ ಯುವಕ!