AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kiccha 46: ‘ಕಿಚ್ಚ 46’ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ನೀಡಿದ ಚಿತ್ರತಂಡ; ಜುಲೈ 2ರಂದು ಟೀಸರ್​ ಬಿಡುಗಡೆ

Kiccha 46 Teaser: ಸುದೀಪ್​ ಅವರ ಹೊಸ ಸಿನಿಮಾದ ಟೀಸರ್​ ರಿಲೀಸ್​ ದಿನಾಂಕವನ್ನು ಬಹಿರಂಗ ಮಾಡಲಾಗಿದೆ. ಜುಲೈ 2ರಂದು ಬೆಳಗ್ಗೆ 11.46ಕ್ಕೆ ‘ಕಿಚ್ಚ 46’ ಚಿತ್ರದ ಟೀಸರ್​ ಬಿಡುಗಡೆ ಆಗಲಿದೆ.

Kiccha 46: ‘ಕಿಚ್ಚ 46’ ಸಿನಿಮಾ ಬಗ್ಗೆ ದೊಡ್ಡ ಅಪ್​ಡೇಟ್​ ನೀಡಿದ ಚಿತ್ರತಂಡ; ಜುಲೈ 2ರಂದು ಟೀಸರ್​ ಬಿಡುಗಡೆ
ಕಿಚ್ಚ ಸುದೀಪ್​
ಮದನ್​ ಕುಮಾರ್​
|

Updated on:Jun 27, 2023 | 7:46 PM

Share

ನಟ ಕಿಚ್ಚ ಸುದೀಪ್​ (Kichcha Sudeep) ಅವರು ಹೊಸ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ 46ನೇ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಖತ್​ ಕೌತುಕ ಇದೆ. ಈ ಸಿನಿಮಾದ ಕೆಲಸಗಳು ಈಗ ಭರದಿಂದ ಸಾಗಿವೆ. ‘ವಿಕ್ರಾಂತ್​ ರೋಣ’ ಬಿಡುಗಡೆ ಆದ ಬಳಿಕ ಸುದೀಪ್​ ಅವರು ದೀರ್ಘ ಗ್ಯಾಪ್​ ಪಡೆದುಕೊಂಡಿದ್ದರು. ನಂತರ ಕ್ರಿಕೆಟ್​ ಕಡೆಗೆ ಗಮನ ನೀಡಿದ್ದರು. ಬಹಳ ದಿನಗಳ ಬಳಿಕ ಅವರು 46ನೇ ಸಿನಿಮಾದ (Kiccha 46) ಕೆಲಸಗಳಿಗೆ ಚಾಲನೆ ನೀಡಿದರು. ಈಗ ಈ ಸಿನಿಮಾ ತಂಡದಿಂದ ಹೊಸ ಅಪ್​ಡೇಟ್​ ನೀಡಲಾಗಿದೆ. ಈ ಸಿನಿಮಾದ ಟೀಸರ್​ ರಿಲೀಸ್​ ದಿನಾಂಕವನ್ನು ಬಹಿರಂಗ ಮಾಡಲಾಗಿದೆ. ಜುಲೈ 2ರಂದು ಬೆಳಗ್ಗೆ 11.46ಕ್ಕೆ ‘ಕಿಚ್ಚ 46’ ಚಿತ್ರದ ಟೀಸರ್ (Kiccha 46 Teaser)​ ಬಿಡುಗಡೆ ಆಗಲಿದೆ.

ಈಗಾಗಲೇ ತಿಳಿದಿರುವಂತೆ ಕಿಚ್ಚ ಸುದೀಪ್​ ಅವರು ಮೂರು ಸಿನಿಮಾಗಳಿಗೆ ಗ್ರೀನ್​ ಸಿಗ್ನಲ್​ ನೀಡಿದ್ದಾರೆ. ಆ ಪೈಕಿ ‘ವಿ ಕ್ರಿಯೇಷನ್ಸ್​’ನ ಕಲೈಪುಲಿ ಎಸ್​. ಧಾನು ಅವರು ನಿರ್ಮಾಣ ಮಾಡುತ್ತಿರುವ ಸಿನಿಮಾ ಮೊದಲು ಸೆಟ್ಟೇರಿದೆ. ಕೆಲವೇ ದಿನಗಳ ಹಿಂದೆ ಅವರು ಪ್ರೋಮೋ ಶೂಟಿಂಗ್​ನಲ್ಲಿ ಭಾಗಿ ಆಗಿದ್ದರು.

ಕಾಲಿವುಡ್​ನ ಖ್ಯಾತ ನಿರ್ಮಾಣ ಸಂಸ್ಥೆಯಾದ ‘ವಿ ಕ್ರಿಯೇಷನ್ಸ್​’ ಜೊತೆ ಕಿಚ್ಚ ಸುದೀಪ್​ ಅವರು ಕೈ ಜೋಡಿಸಿದ್ದು, ಅದ್ದೂರಿ ಬಜೆಟ್​ನಲ್ಲಿ ‘ಕಿಚ್ಚ 46’ ಚಿತ್ರ ನಿರ್ಮಾಣ ಆಗುತ್ತಿದೆ. ‘ಕಬಾಲಿ’, ‘ತುಪಾಕಿ’, ‘ಅಸುರನ್​’ ಮುಂತಾದ ದೊಡ್ಡ ಸಿನಿಮಾಗಳನ್ನು ನಿರ್ಮಾಣ ಮಾಡಿದ ಖ್ಯಾತಿ ಕಲೈಪುಲಿ ಎಸ್​. ಧಾನು ಅವರಿಗೆ ಇದೆ.

ಇದನ್ನೂ ಓದಿ: ಸುದೀಪ್​ಗೆ ಬೆದರಿಕೆ ಪತ್ರ ಪ್ರಕರಣ: ಡೈರೆಕ್ಟರ್ ರಮೇಶ್ ಕಿಟ್ಟಿ ಬಂಧನ

‘ಕಿಚ್ಚ 46’ ಚಿತ್ರದ ಟೀಸರ್​ ನೋಡಲು ಅಭಿಮಾನಿಗಳು ಮಾತ್ರವಲ್ಲದೇ ಸೆಲೆಬ್ರಿಟಿಗಳು ಕೂಡ ಕಾದಿದ್ದಾರೆ. ಟೀಸರ್​ ರಿಲೀಸ್​ ಡೇಟ್​ ಯಾವುದು ಎಂಬುದನ್ನು ತಿಳಿಸುವ ಸಲುವಾಗಿ ಬಿಡುಗಡೆ ಮಾಡಲಾಗಿರುವ ವಿಡಿಯೋದಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ-ನಟಿಯರು, ತಂತ್ರಜ್ಞರು ಕಾಣಿಸಿಕೊಂಡಿದ್ದಾರೆ. ಅನೂಪ್​ ಭಂಡಾರಿ, ನಿರೂಪ್​ ಭಂಡಾರಿ, ಸಪ್ತಮಿ ಗೌಡ, ಡಾಲಿ ಧನಂಜಯ್​, ವಾಸುಕಿ ವೈಭವ್​, ಡಾರ್ಲಿಂಗ್​ ಕೃಷ್ಣ, ನವೀನ್​ ಶಂಕರ್​, ಅಮೃತಾ ಅಯ್ಯಂಗಾರ್​ ಮುಂತಾದವರು ‘ಡೇಟ್​ ಗೊತ್ತಾಯ್ತಾ’ ಎಂದು ಪ್ರಶ್ನೆ ಕೇಳುವ ಮೂಲಕ ಕೌತುಕ ಮೂಡಿಸಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:17 pm, Tue, 27 June 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!