Kichcha Sudeep: ‘ಕೋಟಿಗೊಬ್ಬ 3’ ಚಿತ್ರದ ಓಟಿಟಿ ರಿಲೀಸ್​ ಬಗ್ಗೆ ಬಹುಕೋಟಿ ಗಾಸಿಪ್​; ಚಿತ್ರತಂಡದ ಸ್ಪಷ್ಟನೆ ಏನು?

Kotigobba 3: ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ‘ಕೋಟಿಗೊಬ್ಬ 3’ ಏಪ್ರಿಲ್​ 29ರಂದು ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ವೈರಸ್​ ಹೆಚ್ಚಾದ ಕಾರಣ ಲಾಕ್​ಡೌನ್​ ಜಾರಿ ಮಾಡಿರುವುದರಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

Kichcha Sudeep: ‘ಕೋಟಿಗೊಬ್ಬ 3’ ಚಿತ್ರದ ಓಟಿಟಿ ರಿಲೀಸ್​ ಬಗ್ಗೆ ಬಹುಕೋಟಿ ಗಾಸಿಪ್​; ಚಿತ್ರತಂಡದ ಸ್ಪಷ್ಟನೆ ಏನು?
ಕೋಟಿಗೊಬ್ಬ 3 ಸಿನಿಮಾ ಪೋಸ್ಟರ್​
Follow us
|

Updated on: May 18, 2021 | 8:49 AM

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ನಿರೀಕ್ಷೆ ಇದೆ. ಯಾವಾಗ ಈ ಚಿತ್ರ ರಿಲೀಸ್​ ಆಗುತ್ತೆ ಎಂದು ಸಿನಿಪ್ರಿಯರು ಕಾಯುತ್ತಿದ್ದಾರೆ. ಆದರೆ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿತ್ರಮಂದಿರಗಳಲ್ಲಿ ರಿಲೀಸ್​ ಮಾಡುವುದು ಸದ್ಯಕ್ಕಂತೂ ಸಾಧ್ಯವಿಲ್ಲ. ಇದೇ ಗ್ಯಾಪ್​ನಲ್ಲಿ ಕೆಲವು ಗಾಸಿಪ್​ಗಳು ಕೂಡ ಹರಿದಾಡುತ್ತಿವೆ. ಅದೆಕ್ಕೆಲ್ಲ ಈಗ ನಿರ್ಮಾಪಕ ಸೂರಪ್ಪ ಬಾಬ ಅವರಿಂದಲೇ ಸ್ಪಷ್ಟನೆ ಸಿಕ್ಕಿದೆ.

ಲಾಕ್​ಡೌನ್​ ಸಂದರ್ಭ ಆಗಿರುವುದರಿಂದ ಅನೇಕ ಸಿನಿಮಾಗಳು ಓಟಿಟಿ ಪ್ಲಾಟ್​ಫಾರ್ಮ್​ನ ಮೊರೆ ಹೋಗುತ್ತಿವೆ. ಇತ್ತೀಚೆಗೆ ಸಲ್ಮಾನ್​ ಖಾನ್​ ನಟನೆಯ ‘ರಾಧೆ: ಯುವರ್​ ಮೋಸ್ಟ್​ ವಾಂಟೆಡ್​ ಭಾಯ್​’ ಚಿತ್ರ ಓಟಿಟಿಯಲ್ಲಿ ತೆರೆಕಂಡಿತು. ಅದೇ ರೀತಿ ಕೋಟಿಗೊಬ್ಬ 3 ಸಿನಿಮಾ ಕೂಡ ನೇರವಾಗಿ ಆನ್​ಲೈನ್​ನಲ್ಲಿ ರಿಲೀಸ್​ ಆಗಲಿದೆ ಎಂದು ಕೆಲವರು ಗಾಸಿಪ್​ ಹಬ್ಬಿಸಿದ್ದಾರೆ. ಓಟಿಟಿ ಕಂಪನಿಯೊಂದರಿಂದ 35 ಕೋಟಿ ರೂ.ಗಳಿಗೆ ಆಫರ್​ ಬಂದಿದೆ ಎಂಬ ಮಾಹಿತಿ ಹರಿದಾಡಿದೆ. ಆದರೆ ಅದನ್ನು ನಿರ್ಮಾಪಕ ಸೂರಪ್ಪ ಬಾಬು ತಳ್ಳಿಹಾಕಿದ್ದಾರೆ.

ತಮ್ಮ ಚಿತ್ರವು ಥಿಯೇಟರ್​ನಲ್ಲಿ 100 ಕೋಟಿ ರೂ. ಗಳಿಸುವ ಸಾಮರ್ಥ್ಯ ಹೊಂದಿರುವಾಗ ಕೇವಲ 35 ಕೋಟಿ ರೂ.ಗಳಿಗೆ ಓಟಿಟಿಯಲ್ಲಿ ರಿಲೀಸ್​ ಮಾಡುವುದು ಸಾಧ್ಯವೇ ಇಲ್ಲ ಎಂದು ಮಾಧ್ಯಮಗಳಿಗೆ ಸೂರಪ್​ ಬಾಬು ಪ್ರತಿಕ್ರಿಯೆ ನೀಡಿದ್ದಾರೆ. ಆ ಮೂಲಕ ಯಾವುದೇ ಕಾರಣಕ್ಕೂ ‘ಕೋಟಿಗೊಬ್ಬ 3’ ಚಿತ್ರ ಓಟಿಟಿಯಲ್ಲಿ ಬಿಡುಗಡೆ ಆಗುವುದಿಲ್ಲ ಎಂಬುದು ಸ್ಪಷ್ಟವಾದಂತಾಗಿದೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ಈ ವರ್ಷ ಏಪ್ರಿಲ್​ 29ರಂದು ಈ ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ ಕೊರೊನಾ ವೈರಸ್​ ಹೆಚ್ಚಾದ ಕಾರಣ ಲಾಕ್​ಡೌನ್​ ಜಾರಿ ಮಾಡಿರುವುದರಿಂದ ರಿಲೀಸ್​ ದಿನಾಂಕ ಮುಂದೂಡಲ್ಪಟ್ಟಿದೆ.

ಈ ಚಿತ್ರದಲ್ಲಿ ಸುದೀಪ್​ ಅವರ ಗೆಟಪ್​ ಗಮನ ಸೆಳೆಯುತ್ತಿದೆ. ಅವರಿಗೆ ಜೋಡಿಯಾಗಿ ಮಡೊನ್ನಾ ಸೆಬಾಸ್ಟಿಯನ್​ ನಟಿಸಿದ್ದಾರೆ. ಚಿತ್ರದ ‘ಪಟಾಕಿ ಪೋರಿಯೋ..’ ಹಾಡಿನಲ್ಲಿ ನಟಿ ಆಶಿಕಾ ರಂಗನಾಥ್​ ಹೆಜ್ಜೆ ಹಾಕಿದ್ದಾರೆ. ಶ್ರದ್ಧಾ ದಾಸ್​, ರವಿಶಂಕರ್​, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್​ ಈ ಚಿತ್ರದ ನಿರ್ದೇಶಕರು.

ಇದನ್ನೂ ಓದಿ:

Kichcha Sudeep: ಕೊರೊನಾದಿಂದ ಸುದೀಪ್​ ಗುಣಮುಖ; ಕಷ್ಟದ ದಿನಗಳನ್ನು ಎದುರಿಸಿ ಬಂದ ಕಿಚ್ಚ ಹೇಳಿದ್ದೇನು?

‘ಗಂಡನ ಪ್ರಾಣ ಉಳಿಸಿದ್ರು ಸುದೀಪಣ್ಣ’; ಕಣ್ಣೀರು ಹಾಕುತ್ತ ಕಿಚ್ಚನಿಗೆ ಧನ್ಯವಾದ ತಿಳಿಸಿದ ಅಭಿಮಾನಿ ಸೌಮ್ಯ

ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಮತ್ತೊಂದು ಭೂಹಗರಣದಲ್ಲಿ ಪಾರ್ವತಿ ಸಿದ್ದರಾಮಯ್ಯ, ವಿವರ ನೀಡಿದ ಗಂಗರಾಜು
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಕಾರ್ಯಕರ್ತನಾಗಿ ಪಕ್ಷ ನೀಡಿರುವ ಜವಾಬ್ದಾರಿ ನಿಭಾಯಿಸುತ್ತಿರುವೆ: ನಿಖಿಲ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಅರಚುತ್ತಾ, ಕಿರುಚುತ್ತಾ, ರಿಷಭ್ ಪಂತ್ ರನೌಟ್ ತಪ್ಪಿಸಿದ ಸರ್ಫರಾಝ್ ಖಾನ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಕುಮಾರಸ್ವಾಮಿ ಬಿಜೆಪಿ ಜತೆ ಸೇರಿದ್ದು ಎರಡೂ ಪಕ್ಷಗಳಿಗೆ ಲಾಭವಾಗಿದೆ: ಯತ್ನಾಳ್
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಮೆಟ್ರೊ ಪ್ಲಾಟ್‌ಫಾರ್ಮ್‌ನಲ್ಲಿ ನಿಂತು ಹಳಿ ಮೇಲೆ ಮೂತ್ರ ಮಾಡಿದ ವ್ಯಕ್ತಿ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಚನ್ನಪಟ್ಟಣ ಕ್ಷೇತ್ರಕ್ಕೆ ತಾನು ಅಭ್ಯರ್ಥಿಯೆಂದು ಇವತ್ತು ಡಿಕೆಶಿ ಹೇಳಲಿಲ್ಲ
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಸ್ವಯಂಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿರುವ ವ್ಯಾಪಾರಸ್ಥರು!
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಆನೆಗಳ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್, ವಿಡಿಯೋ ನೋಡಿ
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ಇಡಿ ದಾಳಿ: ಮೈಸೂರು ಮುಡಾ ಕಚೇರಿಯಲ್ಲಿ ಸಾರ್ವಜನಿಕರ ಕೆಲಸಗಳಿಗೆ ಬ್ರೇಕ್
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ
ವಿರಾಟ್ ಕೊಹ್ಲಿ ಔಟಾದಾಗ ರೋಹಿತ್ ಶರ್ಮಾ ರಿಯಾಕ್ಷನ್ ಹೇಗಿತ್ತು ನೋಡಿ