AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಕೋಟಿಗೊಬ್ಬ 3’ ರಿಲೀಸ್​: ಬೆಳ್ಳಂಬೆಳಗ್ಗೆಯೇ ಥಿಯೇಟರ್​ ಮುಂದೆ ಹೇಗಿದೆ ಕಿಚ್ಚನ ಫ್ಯಾನ್ಸ್​ ಸಂಭ್ರಮ?

Kotigobba 3: ‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ಗುರುವಾರ (ಅ.14) ವಿಘ್ನ ಎದುರಾಗಿದ್ದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆಯಿಂದ ವಾಪಸ್​ ತೆರಳಿದ್ದರು. ಆದರೆ ಇಂದು ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಡಗರ ಜೋರಾಗಿದೆ.

Kichcha Sudeep: ‘ಕೋಟಿಗೊಬ್ಬ 3’ ರಿಲೀಸ್​: ಬೆಳ್ಳಂಬೆಳಗ್ಗೆಯೇ ಥಿಯೇಟರ್​ ಮುಂದೆ ಹೇಗಿದೆ ಕಿಚ್ಚನ ಫ್ಯಾನ್ಸ್​ ಸಂಭ್ರಮ?
ಚಿತ್ರಮಂದಿರದ ಮುಂದೆ ಅಭಿಮಾನಿಗಳ ಸಂಭ್ರಮ
TV9 Web
| Edited By: |

Updated on:Oct 15, 2021 | 7:35 AM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರಕ್ಕೆ ಗುರುವಾರ (ಅ.14) ಅಡ್ಡಿ ಉಂಟಾಗಿತ್ತು. ವಿತರಕರಿಂದ ಎದುರಾಗಿದ್ದ ಸಮಸ್ಯೆಯ ಕಾರಣಕ್ಕೆ ಚಿತ್ರ ರಿಲೀಸ್​ ಆಗಿರಲಿಲ್ಲ. ಆದರೆ ಇಂದು (ಅ.15) ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು, ಕೋಟಿಗೊಬ್ಬ ಗ್ರ್ಯಾಂಡ್​ ಎಂಟ್ರಿ ನೀಡಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ಮುಂಜಾನೆ 7 ಗಂಟೆಗೆ ಮೊದಲ ಪ್ರದರ್ಶನ ಶುರು ಆಗಿದೆ. ಚಿತ್ರಮಂದಿರಗಳ ಮುಂದೆ ಜಮಾಯಿಸಿರುವ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಿಚ್ಚ ಸುದೀಪ್​ಗೆ ಜೈಕಾರ ಹಾಕಿ ಈ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ.

ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಗಾಂಧಿನಗರದ ಭೂಮಿಕಾ ಥಿಯೇಟರ್​, ಎಸ್​.ಪಿ. ರಸ್ತೆಯಲ್ಲಿರುವ ಶಾರದಾ ಟಾಕೀಸ್​ ಸೇರಿದಂತೆ ಹಲವು ಕಡೆಗಳಲ್ಲಿ ಫ್ಯಾನ್ಸ್​ ಜಮಾಯಿಸಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ. ನಿನ್ನೆಯಿಂದಲೇ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದ ಅಭಿಮಾನಿಗಳೆಲ್ಲ ಇಂದು ಆದಷ್ಟು ಬೇಗ ಟಿಕೆಟ್​ ನೀಡುವಂತೆ ಚಿತ್ರಮಂದಿರದವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಸುದೀಪ್​ ಫ್ಯಾನ್ಸ್​ ಬೆಳ್ಳಂಬೆಳಗ್ಗೆಯೇ ಸಖತ್​ ಆಗಿ ಸೆಲೆಬ್ರೇಟ್​ ಮಾಡುತ್ತಿದ್ದಾರೆ.

‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ಗುರುವಾರ (ಅ.14) ವಿಘ್ನ ಎದುರಾಗಿದ್ದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆಯಿಂದ ವಾಪಸ್​ ತೆರಳಿದ್ದರು. ಆದರೆ ಇಂದು ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಡಗರ ಜೋರಾಗಿದೆ.

ಶಿವ ಕಾರ್ತಿಕ್​ ನಿರ್ದೇಶನದ ಈ ಸಿನಿಮಾ ಬಗ್ಗೆ ಸಿನಿಪ್ರಿಯರಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು, ನಿನ್ನೆ ರಿಲೀಸ್​ ಆಗದೇ ಇರುವುದಕ್ಕೆ ಅವರು ಕಿಚ್ಚನ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು. ಸೂರಪ್ಪ ಬಾಬು ಮಾತಿಗೆ ಪ್ರತಿಕ್ರಿಯಿ ನೀಡಿದ್ದ ಸುದೀಪ್, ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದರು. ಆ ಮಾತಿಗೆ ತಕ್ಕಂತೆಯೇ ಇಂದು ಚಿತ್ರ ಬಿಡುಗಡೆ ಆಗಿದೆ.

ಗುರುವಾರ ಸಂಜೆಯೇ ವಿತರಕರು ಬದಲಾಗಿದ್ದಾರೆ. ಜಾಕ್​ ಮಂಜು, ಬಿಕೆ ಗಂಗಾಧರ್​ ಹಾಗೂ ಸಯ್ಯದ್​ ಸಲಾಂ ಅವರು ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದ್ದು, ‘ಕೋಟಿಗೊಬ್ಬ 3’ ಸರಾಗವಾಗಿ ತೆರೆಕಾಣುವಂತೆ ಮಾಡಿದ್ದಾರೆ.

ಇದನ್ನೂ ಓದಿ:

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Published On - 7:25 am, Fri, 15 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ