AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kichcha Sudeep: ‘ಕೋಟಿಗೊಬ್ಬ 3’ ರಿಲೀಸ್​: ಬೆಳ್ಳಂಬೆಳಗ್ಗೆಯೇ ಥಿಯೇಟರ್​ ಮುಂದೆ ಹೇಗಿದೆ ಕಿಚ್ಚನ ಫ್ಯಾನ್ಸ್​ ಸಂಭ್ರಮ?

Kotigobba 3: ‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ಗುರುವಾರ (ಅ.14) ವಿಘ್ನ ಎದುರಾಗಿದ್ದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆಯಿಂದ ವಾಪಸ್​ ತೆರಳಿದ್ದರು. ಆದರೆ ಇಂದು ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಡಗರ ಜೋರಾಗಿದೆ.

Kichcha Sudeep: ‘ಕೋಟಿಗೊಬ್ಬ 3’ ರಿಲೀಸ್​: ಬೆಳ್ಳಂಬೆಳಗ್ಗೆಯೇ ಥಿಯೇಟರ್​ ಮುಂದೆ ಹೇಗಿದೆ ಕಿಚ್ಚನ ಫ್ಯಾನ್ಸ್​ ಸಂಭ್ರಮ?
ಚಿತ್ರಮಂದಿರದ ಮುಂದೆ ಅಭಿಮಾನಿಗಳ ಸಂಭ್ರಮ
TV9 Web
| Edited By: |

Updated on:Oct 15, 2021 | 7:35 AM

Share

ಕಿಚ್ಚ ಸುದೀಪ್​ ನಟನೆಯ ‘ಕೋಟಿಗೊಬ್ಬ 3’ ಚಿತ್ರಕ್ಕೆ ಗುರುವಾರ (ಅ.14) ಅಡ್ಡಿ ಉಂಟಾಗಿತ್ತು. ವಿತರಕರಿಂದ ಎದುರಾಗಿದ್ದ ಸಮಸ್ಯೆಯ ಕಾರಣಕ್ಕೆ ಚಿತ್ರ ರಿಲೀಸ್​ ಆಗಿರಲಿಲ್ಲ. ಆದರೆ ಇಂದು (ಅ.15) ಎಲ್ಲ ವಿಘ್ನಗಳನ್ನು ನಿವಾರಿಸಿಕೊಂಡು, ಕೋಟಿಗೊಬ್ಬ ಗ್ರ್ಯಾಂಡ್​ ಎಂಟ್ರಿ ನೀಡಿದ್ದಾನೆ. ರಾಜ್ಯದ ಹಲವು ಕಡೆಗಳಲ್ಲಿ ಮುಂಜಾನೆ 7 ಗಂಟೆಗೆ ಮೊದಲ ಪ್ರದರ್ಶನ ಶುರು ಆಗಿದೆ. ಚಿತ್ರಮಂದಿರಗಳ ಮುಂದೆ ಜಮಾಯಿಸಿರುವ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ. ಕಿಚ್ಚ ಸುದೀಪ್​ಗೆ ಜೈಕಾರ ಹಾಕಿ ಈ ಚಿತ್ರವನ್ನು ಅದ್ದೂರಿಯಾಗಿ ಸ್ವಾಗತಿಸಲಾಗಿದೆ.

ಬೆಂಗಳೂರಿನ ಜೆಪಿ ನಗರದ ಸಿದ್ದೇಶ್ವರ ಚಿತ್ರಮಂದಿರ, ಗಾಂಧಿನಗರದ ಭೂಮಿಕಾ ಥಿಯೇಟರ್​, ಎಸ್​.ಪಿ. ರಸ್ತೆಯಲ್ಲಿರುವ ಶಾರದಾ ಟಾಕೀಸ್​ ಸೇರಿದಂತೆ ಹಲವು ಕಡೆಗಳಲ್ಲಿ ಫ್ಯಾನ್ಸ್​ ಜಮಾಯಿಸಿದ್ದಾರೆ. ಪಟಾಕಿ ಸಿಡಿಸಿ ಸಂಭ್ರಮಿಸಲಾಗುತ್ತಿದೆ. ನಿನ್ನೆಯಿಂದಲೇ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದ ಅಭಿಮಾನಿಗಳೆಲ್ಲ ಇಂದು ಆದಷ್ಟು ಬೇಗ ಟಿಕೆಟ್​ ನೀಡುವಂತೆ ಚಿತ್ರಮಂದಿರದವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಒಟ್ಟಾರೆಯಾಗಿ ಸುದೀಪ್​ ಫ್ಯಾನ್ಸ್​ ಬೆಳ್ಳಂಬೆಳಗ್ಗೆಯೇ ಸಖತ್​ ಆಗಿ ಸೆಲೆಬ್ರೇಟ್​ ಮಾಡುತ್ತಿದ್ದಾರೆ.

‘ಕೋಟಿಗೊಬ್ಬ 3’ ಚಿತ್ರದ ರಿಲೀಸ್​ಗೆ ಗುರುವಾರ (ಅ.14) ವಿಘ್ನ ಎದುರಾಗಿದ್ದ ಹಿನ್ನೆಲೆಯಲ್ಲಿ ಅಭಿಮಾನಿಗಳು ನಿರಾಸೆಯಿಂದ ವಾಪಸ್​ ತೆರಳಿದ್ದರು. ಆದರೆ ಇಂದು ಅದ್ದೂರಿಯಾಗಿ ಸಿನಿಮಾ ಬಿಡುಗಡೆ ಆಗಿದ್ದು, ಫ್ಯಾನ್ಸ್​ ಸಡಗರ ಜೋರಾಗಿದೆ.

ಶಿವ ಕಾರ್ತಿಕ್​ ನಿರ್ದೇಶನದ ಈ ಸಿನಿಮಾ ಬಗ್ಗೆ ಸಿನಿಪ್ರಿಯರಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಮನೆ ಮಾಡಿದೆ. ಸೂರಪ್ಪ ಬಾಬು ನಿರ್ಮಾಣ ಮಾಡಿದ್ದು, ನಿನ್ನೆ ರಿಲೀಸ್​ ಆಗದೇ ಇರುವುದಕ್ಕೆ ಅವರು ಕಿಚ್ಚನ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದರು. ಸೂರಪ್ಪ ಬಾಬು ಮಾತಿಗೆ ಪ್ರತಿಕ್ರಿಯಿ ನೀಡಿದ್ದ ಸುದೀಪ್, ‘ನೀವು ಯಾರಿಂದ ತೊಂದ್ರೆಗೆ ಸಿಲುಕಿದ್ರಿ ಅನ್ನೋದು ಗೊತ್ತು. ಅದಕ್ಕೆ ಕಾಲ ಉತ್ತರ ಕೊಡುತ್ತದೆ. ಸಿನಿಮಾ ನಾಳೆಯಿಂದ (ಅಕ್ಟೋಬರ್​ 15) ಭರ್ಜರಿ ಪ್ರದರ್ಶನ ಕಾಣುತ್ತದೆ. ನಾವೆಲ್ಲರೂ ಇದ್ದೇವೆ ಬಾಬು. ಅಭಿಮಾನಿಗಳೇ ಯಾವುದೇ ಚಿತ್ರಮಂದಿರಗಳಿಗೆ ಡ್ಯಾಮೇಜ್​ ಮಾಡಬೇಡಿ. ಚಿತ್ರಮಂದಿರಗಳಿಗೆ ಏನೂ ತೊಂದರೆ ಮಾಡಬೇಡಿ. ಅವರು ಪ್ರೀತಿಯಿಂದ ನಮಗೆ ಚಿತ್ರಮಂದಿರ ಕೊಟ್ಟಿದ್ದಾರೆ. ನಾಳೆಯಿಂದ ಒಳ್ಳೆ ಪ್ರದರ್ಶನ ಕಾಣುತ್ತದೆ. ನಿಮ್ಮ ಪ್ರೀತಿಗೆ ಧನ್ಯವಾದ. ಒಂದು ದಿನ ಆಗಿರುವ ಡ್ಯಾಮೇಜ್​ಗೆ ವಿಷಾದವಿರಲಿ’ ಎಂದಿದ್ದರು. ಆ ಮಾತಿಗೆ ತಕ್ಕಂತೆಯೇ ಇಂದು ಚಿತ್ರ ಬಿಡುಗಡೆ ಆಗಿದೆ.

ಗುರುವಾರ ಸಂಜೆಯೇ ವಿತರಕರು ಬದಲಾಗಿದ್ದಾರೆ. ಜಾಕ್​ ಮಂಜು, ಬಿಕೆ ಗಂಗಾಧರ್​ ಹಾಗೂ ಸಯ್ಯದ್​ ಸಲಾಂ ಅವರು ವಿತರಣೆಯ ಜವಾಬ್ದಾರಿ ಹೊತ್ತುಕೊಂಡಿದ್ದು, ‘ಕೋಟಿಗೊಬ್ಬ 3’ ಸರಾಗವಾಗಿ ತೆರೆಕಾಣುವಂತೆ ಮಾಡಿದ್ದಾರೆ.

ಇದನ್ನೂ ಓದಿ:

‘ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತು’; ‘ಕೋಟಿಗೊಬ್ಬ 3’ ರದ್ದಾಗಿದ್ದಕ್ಕೆ ಸುದೀಪ್​ ವಿಡಿಯೋ ಸಂದೇಶ

ವಯಸ್ಸಿನ ಬಗ್ಗೆ ರಮ್ಯಾ ಆಡಿದ ಮಾತಿಗೆ ಕಿಚ್ಚನ ಪ್ರತಿಕ್ರಿಯೆ; ‘ಕೋಟಿಗೊಬ್ಬ 3’ ಸುದ್ದಿಗೋಷ್ಠಿಯಲ್ಲಿ ಸುದೀಪ್​ ಹೇಳಿದ್ದೇನು?

Published On - 7:25 am, Fri, 15 October 21

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!