ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಲಿರಿಕಲ್​ ಸಾಂಗ್ ಗಮನ ಸೆಳೆಯುತ್ತಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​
ಸುದೀಪ್
Follow us
|

Updated on:Sep 02, 2024 | 8:44 AM

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ ಪ್ರಯುಕ್ತ ‘ಮ್ಯಾಕ್ಸ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ಮ್ಯಾಕ್ಸಿಮಮ್ ಮಾಸ್’ ಸಾಂಗ್ ರಿಲೀಸ್ ಆಗಲಿದೆ. ಈ ಸಾಂಗ್​ನಲ್ಲಿರೋ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡನ್ನು ಬರೆದಿದ್ದು ನಿರ್ದೇಶಕ ಅನೂಪ್ ಭಂಡಾರಿ ಅವರು. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ. ‘ಪಂಜ ಎತ್ತಿ ಬಿಟ್ಟ ಅಂದ್ರೆ ಒಂದೂವರೆ ಟನ್ ಬಾಸ್, ರಟ್ಟೇಲ್ ಬಾಳ್ ಬಲ ಎದೆಲ್ ಇದೆ ದಮ್ ಬಾಸ್’ ಎಂಬ ಸಾಲುಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಎಂಸಿ ಬಿಜ್ಜು ಹಾಡಿಗೆ ರ‍್ಯಾಪ್ ಮಾಡಿದ್ದಾರೆ. ಈ ಹಾಡು ಸದ್ಯ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ರಿಲೀಸ್ ಆಗಿದೆ. ಈ ಸಾಂಗ್ ರಿಲೀಸ್ ಆದ ಸ್ವಲ್ಪ ಹೊತ್ತಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ಸುದೀಪ್ ಜನ್ಮದಿನಕ್ಕೆ ಈ ಸಾಂಗ್ ರಿಲೀಸ್ ಆಗಿರೋದು ವಿಶೇಷ.

ಇದನ್ನೂ ಓದಿ: ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚ ಸುದೀಪ್ ಬರ್ತ್​ಡೇ ಸೆಲೆಬ್ರೇಷನ್

ಸುದೀಪ್ ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ಈಗಲೇ ರಿಲೀಸ್ ಆಗಬೇಕಿತ್ತು. ಆದರೆ, ಕನ್ನಡದಲ್ಲಿ ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣದಿಂದ ಸುದೀಪ್ ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನುವ ಮಾತಿದೆ. ಇದನ್ನು ಸುದೀಪ್ ಕೂಡ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:43 am, Mon, 2 September 24

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ