AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಲಿರಿಕಲ್​ ಸಾಂಗ್ ಗಮನ ಸೆಳೆಯುತ್ತಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Sep 02, 2024 | 8:44 AM

Share

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ ಪ್ರಯುಕ್ತ ‘ಮ್ಯಾಕ್ಸ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ಮ್ಯಾಕ್ಸಿಮಮ್ ಮಾಸ್’ ಸಾಂಗ್ ರಿಲೀಸ್ ಆಗಲಿದೆ. ಈ ಸಾಂಗ್​ನಲ್ಲಿರೋ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡನ್ನು ಬರೆದಿದ್ದು ನಿರ್ದೇಶಕ ಅನೂಪ್ ಭಂಡಾರಿ ಅವರು. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ. ‘ಪಂಜ ಎತ್ತಿ ಬಿಟ್ಟ ಅಂದ್ರೆ ಒಂದೂವರೆ ಟನ್ ಬಾಸ್, ರಟ್ಟೇಲ್ ಬಾಳ್ ಬಲ ಎದೆಲ್ ಇದೆ ದಮ್ ಬಾಸ್’ ಎಂಬ ಸಾಲುಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಎಂಸಿ ಬಿಜ್ಜು ಹಾಡಿಗೆ ರ‍್ಯಾಪ್ ಮಾಡಿದ್ದಾರೆ. ಈ ಹಾಡು ಸದ್ಯ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ರಿಲೀಸ್ ಆಗಿದೆ. ಈ ಸಾಂಗ್ ರಿಲೀಸ್ ಆದ ಸ್ವಲ್ಪ ಹೊತ್ತಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ಸುದೀಪ್ ಜನ್ಮದಿನಕ್ಕೆ ಈ ಸಾಂಗ್ ರಿಲೀಸ್ ಆಗಿರೋದು ವಿಶೇಷ.

ಇದನ್ನೂ ಓದಿ: ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚ ಸುದೀಪ್ ಬರ್ತ್​ಡೇ ಸೆಲೆಬ್ರೇಷನ್

ಸುದೀಪ್ ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ಈಗಲೇ ರಿಲೀಸ್ ಆಗಬೇಕಿತ್ತು. ಆದರೆ, ಕನ್ನಡದಲ್ಲಿ ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣದಿಂದ ಸುದೀಪ್ ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನುವ ಮಾತಿದೆ. ಇದನ್ನು ಸುದೀಪ್ ಕೂಡ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:43 am, Mon, 2 September 24

ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ