AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಈ ಹಾಡಿನ ಲಿರಿಕಲ್​ ಸಾಂಗ್ ಗಮನ ಸೆಳೆಯುತ್ತಿದೆ. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ.

ಸುದೀಪ್ ಜನ್ಮದಿನ: ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂದ ಮ್ಯಾಕ್ಸ್​
ಸುದೀಪ್
ರಾಜೇಶ್ ದುಗ್ಗುಮನೆ
|

Updated on:Sep 02, 2024 | 8:44 AM

Share

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ ಪ್ರಯುಕ್ತ ‘ಮ್ಯಾಕ್ಸ್’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್ ಆಗಿದೆ. ‘ಮ್ಯಾಕ್ಸಿಮಮ್ ಮಾಸ್’ ಸಾಂಗ್ ರಿಲೀಸ್ ಆಗಲಿದೆ. ಈ ಸಾಂಗ್​ನಲ್ಲಿರೋ ಪಂಚಿಂಗ್​ ಡೈಲಾಗ್​ಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡನ್ನು ಬರೆದಿದ್ದು ನಿರ್ದೇಶಕ ಅನೂಪ್ ಭಂಡಾರಿ ಅವರು. ‘ಅಪ್ಪಂಗೆ ಹುಟ್ಟಿದ್ರೆ ತೊಡೆತಟ್ಟಿ ಬಾರೋ’ ಎಂಬ ಸಾಲುಗಳಿಂದ ಈ ಹಾಡು ಆರಂಭ ಆಗುತ್ತದೆ. ‘ಪಂಜ ಎತ್ತಿ ಬಿಟ್ಟ ಅಂದ್ರೆ ಒಂದೂವರೆ ಟನ್ ಬಾಸ್, ರಟ್ಟೇಲ್ ಬಾಳ್ ಬಲ ಎದೆಲ್ ಇದೆ ದಮ್ ಬಾಸ್’ ಎಂಬ ಸಾಲುಗಳು ಗಮನ ಸೆಳೆದಿವೆ.

‘ಮ್ಯಾಕ್ಸಿಮಮ್ ಮಾಸ್’ ಹಾಡಿಗೆ ಖ್ಯಾತ ಸಂಗೀತ ಸಂಯೋಜಕ ಬಿ. ಅಜನೀಶ್ ಲೋಕನಾಥ್ ಮ್ಯೂಸಿಕ್ ಕೊಟ್ಟಿದ್ದಾರೆ. ಚೇತನ್ ಗಂಧರ್ವ ಅವರು ಈ ಹಾಡನ್ನು ಹಾಡಿದ್ದಾರೆ. ಎಂಸಿ ಬಿಜ್ಜು ಹಾಡಿಗೆ ರ‍್ಯಾಪ್ ಮಾಡಿದ್ದಾರೆ. ಈ ಹಾಡು ಸದ್ಯ ‘ಸರೆಗಮ ಕನ್ನಡ’ ಯೂಟ್ಯೂಬ್ ಚಾನೆಲ್ ಮೂಲಕ ರಿಲೀಸ್ ಆಗಿದೆ. ಈ ಸಾಂಗ್ ರಿಲೀಸ್ ಆದ ಸ್ವಲ್ಪ ಹೊತ್ತಲ್ಲಿ ಸಾವಿರಾರು ಬಾರಿ ವೀಕ್ಷಣೆ ಕಂಡಿದೆ. ಸುದೀಪ್ ಜನ್ಮದಿನಕ್ಕೆ ಈ ಸಾಂಗ್ ರಿಲೀಸ್ ಆಗಿರೋದು ವಿಶೇಷ.

ಇದನ್ನೂ ಓದಿ: ಮಧ್ಯರಾತ್ರಿ ಹೇಗಿತ್ತು ನೋಡಿ ಕಿಚ್ಚ ಸುದೀಪ್ ಬರ್ತ್​ಡೇ ಸೆಲೆಬ್ರೇಷನ್

ಸುದೀಪ್ ಅವರ ನಟನೆಯ ‘ಮ್ಯಾಕ್ಸ್’ ಸಿನಿಮಾ ಈಗಲೇ ರಿಲೀಸ್ ಆಗಬೇಕಿತ್ತು. ಆದರೆ, ಕನ್ನಡದಲ್ಲಿ ಬೇರೆ ಬೇರೆ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಕಾರಣದಿಂದ ಸುದೀಪ್ ಅವರು ಸಿನಿಮಾ ರಿಲೀಸ್ ದಿನಾಂಕವನ್ನು ಮುಂದೂಡಿಕೊಂಡಿದ್ದಾರೆ ಎನ್ನುವ ಮಾತಿದೆ. ಇದನ್ನು ಸುದೀಪ್ ಕೂಡ ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:43 am, Mon, 2 September 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ