AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ವಿಳಂಬ ಆಗಿದೆ. ಈ ಚಿತ್ರ ಯಾವಾಗ ಬಿಡುಗಡೆ ಆಗಲಿದೆ ಎಂದು ಫ್ಯಾನ್ಸ್ ಕೇಳುತ್ತಲೇ ಇದ್ದಾರೆ. ಈ ನಡುವೆ ಚಿತ್ರತಂಡದಿಂದ ಬಿಗ್ ಅಪ್​ಡೇಟ್​ ನೀಡಲು ಸಿದ್ಧತೆ ನಡೆದಿದೆ. ಆ ಕುರಿತು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Nov 24, 2024 | 7:51 PM

Share

ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್​ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್​ ಅವರು ನಟಿಸಿದ ಸಿನಿಮಾ ಇದು. ‘ಮ್ಯಾಕ್ಸ್’ ಚಿತ್ರಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರೀಕರಣ ಮಾಡಲಾಗಿದೆ. ಬಹುಪಾಲು ಶೂಟಿಂಗ್ ತಮಿಳುನಾಡಿನಲ್ಲಿ ನಡೆದಿದೆ. ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಗುಡ್​ ನ್ಯೂಸ್​ ಸಿಗಲಿ ಎಂಬುದು ಫ್ಯಾನ್ಸ್ ಆಸೆ.

ಇದನ್ನೂ ಓದಿ: ‘ಪುಣ್ಯಾತ್ಮರು ಯಾವಾಗ ದೊಡ್ಮನಸ್ಸು ಮಾಡ್ತಾರೋ ಗೊತ್ತಿಲ್ಲ’; ‘ಬಿಗ್ ಬಾಸ್’ ವೇದಿಕೆ ಮೇಲೆ  ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಮಾತು

ಒಂದು ಹೊಸ ಪೋಸ್ಟರ್​ ಮೂಲಕ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ‘ದೊಡ್ಡ ಅನೌನ್ಸ್​ಮೆಂಟ್​ ಸಲುವಾಗಿ ಸಿದ್ಧರಾಗಿ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಆದಷ್ಟು ಬೇಗ ‘ಮ್ಯಾಕ್ಸ್’ ಸಿನಿಮಾವನ್ನು ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಸಖತ್ ಮಾಸ್​ ಆಗಿ ‘ಮ್ಯಾಕ್ಸ್’ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ಟೀಸರ್​ ಸಾಕ್ಷಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವರಲಕ್ಷ್ಮೀ ಶರತ್ ಕುಮಾರ್, ಪ್ರಮೋದ್ ಶೆಟ್ಟಿ, ಸಂಯುಕ್ತಾ ಹೊರನಾಡು ಮುಂತಾದವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!