AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ವಿಳಂಬ ಆಗಿದೆ. ಈ ಚಿತ್ರ ಯಾವಾಗ ಬಿಡುಗಡೆ ಆಗಲಿದೆ ಎಂದು ಫ್ಯಾನ್ಸ್ ಕೇಳುತ್ತಲೇ ಇದ್ದಾರೆ. ಈ ನಡುವೆ ಚಿತ್ರತಂಡದಿಂದ ಬಿಗ್ ಅಪ್​ಡೇಟ್​ ನೀಡಲು ಸಿದ್ಧತೆ ನಡೆದಿದೆ. ಆ ಕುರಿತು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Nov 24, 2024 | 7:51 PM

Share

ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್​ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್​ ಅವರು ನಟಿಸಿದ ಸಿನಿಮಾ ಇದು. ‘ಮ್ಯಾಕ್ಸ್’ ಚಿತ್ರಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರೀಕರಣ ಮಾಡಲಾಗಿದೆ. ಬಹುಪಾಲು ಶೂಟಿಂಗ್ ತಮಿಳುನಾಡಿನಲ್ಲಿ ನಡೆದಿದೆ. ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಗುಡ್​ ನ್ಯೂಸ್​ ಸಿಗಲಿ ಎಂಬುದು ಫ್ಯಾನ್ಸ್ ಆಸೆ.

ಇದನ್ನೂ ಓದಿ: ‘ಪುಣ್ಯಾತ್ಮರು ಯಾವಾಗ ದೊಡ್ಮನಸ್ಸು ಮಾಡ್ತಾರೋ ಗೊತ್ತಿಲ್ಲ’; ‘ಬಿಗ್ ಬಾಸ್’ ವೇದಿಕೆ ಮೇಲೆ  ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಮಾತು

ಒಂದು ಹೊಸ ಪೋಸ್ಟರ್​ ಮೂಲಕ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ‘ದೊಡ್ಡ ಅನೌನ್ಸ್​ಮೆಂಟ್​ ಸಲುವಾಗಿ ಸಿದ್ಧರಾಗಿ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಆದಷ್ಟು ಬೇಗ ‘ಮ್ಯಾಕ್ಸ್’ ಸಿನಿಮಾವನ್ನು ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಸಖತ್ ಮಾಸ್​ ಆಗಿ ‘ಮ್ಯಾಕ್ಸ್’ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ಟೀಸರ್​ ಸಾಕ್ಷಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವರಲಕ್ಷ್ಮೀ ಶರತ್ ಕುಮಾರ್, ಪ್ರಮೋದ್ ಶೆಟ್ಟಿ, ಸಂಯುಕ್ತಾ ಹೊರನಾಡು ಮುಂತಾದವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಏಷ್ಯಾಕಪ್ ಟ್ರೋಫಿ ಟೀಂ ಇಂಡಿಯಾ ಕೈ ಸೇರುವುದು ಯಾವಾಗ?
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
ಕೆತ್ತಿಕಲ್‌ ಗುಡ್ಡ ಕುಸಿತಕ್ಕೆ ಸ್ಫೋಟಕ ಕಾರಣ ಬಿಚ್ಚಿಟ್ಟ ಪರಿಸರ ತಜ್ಞ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
2 ದಿನ ಕೆರೆಯಲ್ಲಿ ನರಳಾಡಿ ತನ್ನಷ್ಟಕ್ಕೇ ತಾನೆ ಆಚೆ ಬಂದ ಆನೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಮತ್ತೊಂದು ಕಲ್ಲು ಗಣಿಗಾರಿಕೆ ದುರಂತ: ಜೆಸಿಬಿ ಮೇಲೆ ಬಿದ್ದ ಬಂಡೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಸಿದ್ದರಾಮಯ್ಯನವರಿಂದ ದೂರ: ವಿಡಿಯೋ ವೈರಲ್ ಬಗ್ಗೆ ಜಾರಕಿಹೊಳಿ ಸ್ಪಷ್ಟನೆ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಜಿಬಿಎ ನಿರ್ಲಕ್ಷ್ಯ: ಹೊಂಡದಲ್ಲಿ ಕಾರಿನ ಚಕ್ರ ಸಿಲುಕಿ ಚಾಲಕನ ಪರದಾಟ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಕರ್ನಾಟಕದ ಮುಖ್ಯ ಚುನಾವಣಾ ಅಧಿಕಾರಿ ಸುದ್ದಿಗೋಷ್ಠಿ ನೇರಪ್ರಸಾರ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ಮಂಗಳೂರು-ಕಾರ್ಕಳ ಹೆದ್ದಾರಿಯಲ್ಲಿ ಭೂಕುಸಿತ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ವಯನಾಡು ಭೂಕುಸಿತ: ಭಯಾನಕ ದೃಶ್ಯದಲ್ಲಿ ಸೆರೆಯಾದ ಟ್ಯಾಂಕರ್ ಕರ್ನಾಟಕದ್ದು!
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು
ಬೆಂಗಳೂರಿನ ಪ್ಯಾಲೇಸ್ ರಸ್ತೆ ಮಧ್ಯೆ ಹೆಡೆಬಿಚ್ಚಿ ನಿಂತ ನಾಗರಹಾವು