AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ವಿಳಂಬ ಆಗಿದೆ. ಈ ಚಿತ್ರ ಯಾವಾಗ ಬಿಡುಗಡೆ ಆಗಲಿದೆ ಎಂದು ಫ್ಯಾನ್ಸ್ ಕೇಳುತ್ತಲೇ ಇದ್ದಾರೆ. ಈ ನಡುವೆ ಚಿತ್ರತಂಡದಿಂದ ಬಿಗ್ ಅಪ್​ಡೇಟ್​ ನೀಡಲು ಸಿದ್ಧತೆ ನಡೆದಿದೆ. ಆ ಕುರಿತು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ
ಕಿಚ್ಚ ಸುದೀಪ್
ಮದನ್​ ಕುಮಾರ್​
|

Updated on: Nov 24, 2024 | 7:51 PM

Share

ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್​ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್​ ಅವರು ನಟಿಸಿದ ಸಿನಿಮಾ ಇದು. ‘ಮ್ಯಾಕ್ಸ್’ ಚಿತ್ರಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರೀಕರಣ ಮಾಡಲಾಗಿದೆ. ಬಹುಪಾಲು ಶೂಟಿಂಗ್ ತಮಿಳುನಾಡಿನಲ್ಲಿ ನಡೆದಿದೆ. ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಗುಡ್​ ನ್ಯೂಸ್​ ಸಿಗಲಿ ಎಂಬುದು ಫ್ಯಾನ್ಸ್ ಆಸೆ.

ಇದನ್ನೂ ಓದಿ: ‘ಪುಣ್ಯಾತ್ಮರು ಯಾವಾಗ ದೊಡ್ಮನಸ್ಸು ಮಾಡ್ತಾರೋ ಗೊತ್ತಿಲ್ಲ’; ‘ಬಿಗ್ ಬಾಸ್’ ವೇದಿಕೆ ಮೇಲೆ  ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಮಾತು

ಒಂದು ಹೊಸ ಪೋಸ್ಟರ್​ ಮೂಲಕ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ‘ದೊಡ್ಡ ಅನೌನ್ಸ್​ಮೆಂಟ್​ ಸಲುವಾಗಿ ಸಿದ್ಧರಾಗಿ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಆದಷ್ಟು ಬೇಗ ‘ಮ್ಯಾಕ್ಸ್’ ಸಿನಿಮಾವನ್ನು ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಸಖತ್ ಮಾಸ್​ ಆಗಿ ‘ಮ್ಯಾಕ್ಸ್’ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ಟೀಸರ್​ ಸಾಕ್ಷಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವರಲಕ್ಷ್ಮೀ ಶರತ್ ಕುಮಾರ್, ಪ್ರಮೋದ್ ಶೆಟ್ಟಿ, ಸಂಯುಕ್ತಾ ಹೊರನಾಡು ಮುಂತಾದವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ