AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ

ಕಿಚ್ಚ ಸುದೀಪ್​ ನಟನೆಯ ‘ಮ್ಯಾಕ್ಸ್’ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಆದರೆ ಕಾರಣಾಂತರಗಳಿಂದ ಈ ಸಿನಿಮಾದ ಬಿಡುಗಡೆ ವಿಳಂಬ ಆಗಿದೆ. ಈ ಚಿತ್ರ ಯಾವಾಗ ಬಿಡುಗಡೆ ಆಗಲಿದೆ ಎಂದು ಫ್ಯಾನ್ಸ್ ಕೇಳುತ್ತಲೇ ಇದ್ದಾರೆ. ಈ ನಡುವೆ ಚಿತ್ರತಂಡದಿಂದ ಬಿಗ್ ಅಪ್​ಡೇಟ್​ ನೀಡಲು ಸಿದ್ಧತೆ ನಡೆದಿದೆ. ಆ ಕುರಿತು ನಿರ್ಮಾಪಕರು ಮಾಹಿತಿ ಹಂಚಿಕೊಂಡಿದ್ದಾರೆ.

‘ಮ್ಯಾಕ್ಸ್’ ಸಿನಿಮಾ ಬಗ್ಗೆ ನ.27ಕ್ಕೆ ಸಿಗಲಿದೆ ದೊಡ್ಡ ಅಪ್​ಡೇಟ್​; ಕಿಚ್ಚನ ಫ್ಯಾನ್ಸ್ ಕಾತರ
ಕಿಚ್ಚ ಸುದೀಪ್
Follow us
ಮದನ್​ ಕುಮಾರ್​
|

Updated on: Nov 24, 2024 | 7:51 PM

ನವೆಂಬರ್ 27ರಂದು ಬಹುನಿರೀಕ್ಷಿತ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಬಹು ಮುಖ್ಯವಾದ ಘೋಷಣೆ ಆಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ. ‘ವಿ. ಕ್ರಿಯೇಷನ್ಸ್’ ಮೂಲಕ ಕಾಲಿವುಡ್​ನ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ‘ಮ್ಯಾಕ್ಸ್’ ಸಿನಿಮಾವನ್ನು ನಿರ್ಮಿಸಿದ್ದಾರೆ. ಈಗಾಗಲೇ ಚಿತ್ರದ ಟೈಟಲ್​ ಟ್ಯಾಕ್ಸ್ ಸಖತ್ ಸದ್ದು ಮಾಡಿದೆ. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈಗಾಗಲೇ ಸಿನಿಮಾ ಬಿಡುಗಡೆ ಆಗಿರಬೇಕಿತ್ತು. ಆದರೆ ಕಾರಣಾಂತರಗಳಿಂದ ತಡವಾಗಿದೆ. ಈಗ ರಿಲೀಸ್​ ಡೇಟ್​ ಬಗ್ಗೆ ಮಾಹಿತಿ ಸಿಗಬಹುದು ಎಂದು ಕಿಚ್ಚ ಸುದೀಪ್ ಅವರ ಫ್ಯಾನ್ಸ್ ನಿರೀಕ್ಷಿಸಿದ್ದಾರೆ.

‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್​ ಅವರು ನಟಿಸಿದ ಸಿನಿಮಾ ಇದು. ‘ಮ್ಯಾಕ್ಸ್’ ಚಿತ್ರಕ್ಕೆ ಸಾಕಷ್ಟು ಸಮಯ ತೆಗೆದುಕೊಂಡು ಚಿತ್ರೀಕರಣ ಮಾಡಲಾಗಿದೆ. ಬಹುಪಾಲು ಶೂಟಿಂಗ್ ತಮಿಳುನಾಡಿನಲ್ಲಿ ನಡೆದಿದೆ. ಈ ಸಿನಿಮಾ ಯಾವಾಗ ಬಿಡುಗಡೆ ಆಗಲಿದೆ ಎಂದು ಅಭಿಮಾನಿಗಳು ಕೇಳುತ್ತಲೇ ಇದ್ದಾರೆ. ರಿಲೀಸ್ ದಿನಾಂಕದ ಬಗ್ಗೆ ಗುಡ್​ ನ್ಯೂಸ್​ ಸಿಗಲಿ ಎಂಬುದು ಫ್ಯಾನ್ಸ್ ಆಸೆ.

ಇದನ್ನೂ ಓದಿ: ‘ಪುಣ್ಯಾತ್ಮರು ಯಾವಾಗ ದೊಡ್ಮನಸ್ಸು ಮಾಡ್ತಾರೋ ಗೊತ್ತಿಲ್ಲ’; ‘ಬಿಗ್ ಬಾಸ್’ ವೇದಿಕೆ ಮೇಲೆ  ‘ಮ್ಯಾಕ್ಸ್’ ರಿಲೀಸ್ ಬಗ್ಗೆ ಸುದೀಪ್ ಮಾತು

ಒಂದು ಹೊಸ ಪೋಸ್ಟರ್​ ಮೂಲಕ ಈ ಬಗ್ಗೆ ಮಾಹಿತಿ ತಿಳಿಸಲಾಗಿದೆ. ನಿರ್ಮಾಪಕ ಕಲೈಪುಲಿ ಎಸ್. ಧಾನು ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಪೋಸ್ಟರ್​ ಹಂಚಿಕೊಂಡಿದ್ದಾರೆ. ‘ದೊಡ್ಡ ಅನೌನ್ಸ್​ಮೆಂಟ್​ ಸಲುವಾಗಿ ಸಿದ್ಧರಾಗಿ’ ಎಂದು ಈ ಪೋಸ್ಟರ್​ನಲ್ಲಿ ಬರೆಯಲಾಗಿದೆ. ಆದಷ್ಟು ಬೇಗ ‘ಮ್ಯಾಕ್ಸ್’ ಸಿನಿಮಾವನ್ನು ನೋಡಬೇಕು ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ.

ಸಖತ್ ಮಾಸ್​ ಆಗಿ ‘ಮ್ಯಾಕ್ಸ್’ ಸಿನಿಮಾ ಸಿದ್ಧವಾಗಿದೆ. ಅದಕ್ಕೆ ಟೀಸರ್​ ಸಾಕ್ಷಿಯಾಗಿದೆ. ವಿಜಯ್ ಕಾರ್ತಿಕೇಯ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಕಿಚ್ಚ ಸುದೀಪ್ ಜೊತೆ ವರಲಕ್ಷ್ಮೀ ಶರತ್ ಕುಮಾರ್, ಪ್ರಮೋದ್ ಶೆಟ್ಟಿ, ಸಂಯುಕ್ತಾ ಹೊರನಾಡು ಮುಂತಾದವರು ಅಭಿನಯಿಸಿದ್ದಾರೆ. ಅಜನೀಶ್ ಲೋಕನಾಥ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
ಕುಮಾರಸ್ವಾಮಿಯವರು ಚೆನ್ನಾಗಿರಲಿ, ಆರೋಗ್ಯವಾಗಿರಲಿ: ಶಿವಕುಮಾರ್
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
6,6,6,6,6:: ಬಿರುಗಾಳಿ ಬ್ಯಾಟಿಂಗ್​ನೊಂದಿಗೆ ಪಂದ್ಯ ಗೆಲ್ಲಿಸಿದ ಬೌಲರ್..!
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ