AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​

ವಿಕ್ರಾಂತ್​ ರೋಣ ಸಿನಿಮಾದ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಅವರ ಹೊಸ ಫೋಟೋಗಳು ಪಡ್ಡೆಗಳ ಎದೆಬಡಿತ ಹೆಚ್ಚಿಸಿವೆ. ‘ನೀವು ಕೆಟ್ಟವರಲ್ಲ; ಸಮಾಜ ಕೆಟ್ಟದ್ದು’ ಎಂದು ಈ ಫೋಟೋಗೆ ಜಾಕ್ವೆಲಿನ್​ ಕ್ಯಾಪ್ಷನ್​ ನೀಡಿದ್ದಾರೆ. ಅದು ಎಲ್ಲರ ಕೌತುಕಕ್ಕೆ ಕಾರಣ ಆಗಿದೆ.

‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​
‘ವಿಕ್ರಾಂತ್​ ರೋಣ’ ಚಿತ್ರದ ನಟಿ ಜಾಕ್ವೆಲಿನ್​ ಹಾಟ್​ ಫೋಟೋ ವೈರಲ್​
TV9 Web
| Edited By: |

Updated on: Jul 23, 2021 | 11:45 AM

Share

ಖ್ಯಾತ ನಟಿ ಜಾಕ್ವೆಲಿನ್​ ಫರ್ನಾಂಡಿಸ್​ (Jacqueline Fernandez) ಅವರು ಇತ್ತೀಚೆಗೆ ‘ವಿಕ್ರಾಂತ್​ ರೋಣ’ (Vikrant Rona) ಚಿತ್ರದ ಮೂಲಕ ಸುದ್ದಿ ಆಗಿದ್ದರು. ಈ ಸಿನಿಮಾದಲ್ಲಿ ಕಿಚ್ಚ ಸುದೀಪ್​ (Kichcha Sudeep) ಜೊತೆ ತೆರೆ ಹಂಚಿಕೊಳ್ಳುವ ಮೂಲಕ ಅವರು ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ. ಈಗ ಅವರ ಹಾಟ್​ ಫೋಟೋಗಳು ವೈರಲ್​ ಆಗಿವೆ. ಇದನ್ನು ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದಾರೆ. ​ಅದಕ್ಕೆ ಕಾರಣ ಅವರ ಬ್ಯಾಕ್​ಲೆಸ್​ ಅವತಾರ. ಸೋಶಿಯಲ್​ ಮೀಡಿಯಾದಲ್ಲಿ ಜಾಕ್ವೆಲಿನ್​ ಫರ್ನಾಂಡಿಸ್​ ಹಂಚಿಕೊಂಡಿರುವ ಈ ಫೋಟೋಗಳಿಗೆ ಭರ್ಜರಿ ಲೈಕ್ಸ್​ ಸಿಗುತ್ತಿದೆ.

ಹಿಂದಿ ಚಿತ್ರರಂಗದಲ್ಲಿ ದೊಡ್ಡಮಟ್ಟದ ಜನಪ್ರಿಯತೆ ಪಡೆದಿರುವ ಈ ಶ್ರೀಲಂಕಾ ಚೆಲುವೆಗೆ ಸಿಕ್ಕಾಪಟ್ಟೆ ಬೇಡಿಕೆ ಇದೆ. ಅವರು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡಿದ್ದಾರೆ. ಕಿಚ್ಚ ಸುದೀಪ್​ ಜೊತೆ ಹಾಡಿನ ಚಿತ್ರೀಕರಣದಲ್ಲಿ ಇತ್ತೀಚೆಗೆ ಪಾಲ್ಗೊಂಡಿದ್ದರು. ಅವರ ಪಾತ್ರಕ್ಕೆ ಇನ್ನೂ ಡಬ್ಬಿಂಗ್​ ಆಗುವುದು ಬಾಕಿ ಇದೆ. ಈಗ ಸೋಶಿಯಲ್​ ಮೀಡಿಯಾ ಮೂಲಕ ಜಾಕ್ವೆಲಿನ್​ ಧೂಳೆಬ್ಬಿಸುತ್ತಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ ಈ ಫೋಟೋ ಹಂಚಿಕೊಂಡ ಕೆಲವೇ ನಿಮಿಷಗಳಲ್ಲಿ 7 ಲಕ್ಷಕ್ಕೂ ಅಧಿಕ ಜನರು ಲೈಕ್​ ಮಾಡಿದ್ದಾರೆ. 7 ಸಾವಿರಕ್ಕೂ ಹೆಚ್ಚು ಕಮೆಂಟ್​ಗಳು ಬಂದಿವೆ. ‘ನೀವು ಕೆಟ್ಟವರಲ್ಲ; ಸಮಾಜ ಕೆಟ್ಟದ್ದು’ ಎಂದು ಈ ಫೋಟೋಗೆ ಜಾಕ್ವೆಲಿನ್​ ಕ್ಯಾಪ್ಷನ್​ ನೀಡಿದ್ದಾರೆ. ಅದು ಎಲ್ಲರ ಕೌತುಕಕ್ಕೆ ಕಾರಣ ಆಗಿದೆ. ಅದರ ಹೊರತಾಗಿ ಈ ಫೋಟೋಶೂಟ್​ ಬಗ್ಗೆ ಅವರು ಹೆಚ್ಚಿನ ಮಾಹಿತಿ ಬಿಟ್ಟುಕೊಟ್ಟಿಲ್ಲ.

ಕಿಚ್ಚ ಸುದೀಪ್​ ಜೊತೆ ವಿಕ್ರಾಂತ್​ ರೋಣ ಸಿನಿಮಾದ ಶೂಟಿಂಗ್​ನಲ್ಲಿ ಭಾಗವಹಿಸಿದ ಬಳಿಕ ಆ ಬಗ್ಗೆ ಸೋಶಿಯಲ್​ ಮೀಡಿಯಾದಲ್ಲಿ ಜಾಕ್ವೆಲಿನ್​ ಖುಷಿ ಹಂಚಿಕೊಂಡಿದ್ದರು. ನಿರ್ದೇಶಕ ಅನೂಪ್ ಭಂಡಾರಿಯ ಕಾರ್ಯವೈಖರಿಗೆ ಅವರು ಮೆಚ್ಚುಗೆ ಸೂಚಿಸಿದ್ದರು. ‘ಖಂಡಿತವಾಗಿಯೂ ವಿಕ್ರಾಂತ್​ ರೋಣ ಸಿನಿಮಾ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಮ್ಮೆ ತರಲಿದೆ’ ಎಂದು ಅವರು ಭವಿಷ್ಯ ನುಡಿದಿದ್ದರು.

ಜಾಕ್ವೆಲಿನ್​ ಫರ್ನಾಂಡಿಸ್ ಆಗಮನದಿಂದಾಗಿ ವಿಕ್ರಾಂತ್​ ರೋಣ ಸಿನಿಮಾದ ಮೆರುಗು ಹೆಚ್ಚಿದೆ. ‘ಜಾಕ್ವೆಲಿನ್​ ಅವರೇ ನಿಮಗೆ ಚಂದನವನಕ್ಕೆ ಸ್ವಾಗತ. ನಿಮ್ಮ ಜೊತೆ ಕೆಲಸ ಮಾಡಿದ್ದು ಖುಷಿ ನೀಡಿತು. ನಿಮ್ಮ ಪಾತ್ರದ ಹೆಸರು ಮತ್ತು ಫಸ್ಟ್​ಲುಕ್​ ಅನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಪ್ರೇಕ್ಷಕರಿಗೆ ಇದು ಖಂಡಿತ ಇಷ್ಟವಾಗಲಿದೆ ಎಂಬ ನಂಬಿಕೆ ನನಗಿದೆ. ಡಬ್ಬಿಂಗ್​ ಸ್ಟುಡಿಯೋದಲ್ಲಿ ಮತ್ತೆ ಭೇಟಿ ಆಗೋಣ. ಅಲ್ಲಿಯವರೆಗೆ ಸ್ವಲ್ಪ ಜೋಪಾನ’ ಎಂದು ಅನೂಪ್​ ಭಂಡಾರಿ ಟ್ವೀಟ್​ ಮಾಡಿದ್ದರು.

ಇದನ್ನೂ ಓದಿ:

ಜಾಕ್ವೆಲಿನ್ ಜೊತೆಗಿನ ನೆಚ್ಚಿನ ಚಿತ್ರಗಳನ್ನು ಹಂಚಿಕೊಂಡ ಕಿಚ್ಚ ಸುದೀಪ್

‘ವಿಕ್ರಾಂತ್​ ರೋಣ’ ಬಜೆಟ್​ ಎಷ್ಟು? ನಂಬರ್​ ಹೇಳುವ ಬದಲು ನಿರ್ದೇಶಕರು ಹೇಳಿದ್ದೇ ಬೇರೆ​

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ